AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲಿನ ಬೇಗಗೆ ದಾಹ ತೀರಿಸಿಕೊಳ್ಳಲು ಲೆಮನ್​ ಜ್ಯೂಸ್ ಮೊರೆ; ನಿಂಬೆ ಹಣ್ಣಿಗೆ ಭಾರಿ ಡಿಮ್ಯಾಂಡ್​!

ಒಂದೆಡೆ ಬೇಸಿಗೆಯ ಬಿಸಿಗಾಳಿ ಹಾಗೂ ಉಷ್ಣ. ಬಿಸಿಲಿನ ತಾಪ ತಡೆದುಕೊಳ್ಳಲು ಜನರು, ನಿಂಬೆ ಹಣ್ಣಿನ ಜ್ಯೂಸ್, ಪಾನಕಗಳ ಮೊರೆ ಹೊಗುತ್ತಿದ್ದಾರೆ. ಇದ್ರಿಂದ ಮಾರುಕಟ್ಟೆಯೆಲ್ಲಿ ಸೇಬು ಹಣ್ಣಿನ ಬೆಲೆ ಕುಸಿದಿದ್ದು, ನಿಂಬೆ ಹಣ್ಣಿನ ಬೆಲೆ ಗಗನಕ್ಕೇರಿದೆ. ಕೆ.ಜಿ ನಿಂಬೆ ಹಣ್ಣಿನ ಬೆಲೆ ಇನ್ನೂರು ರೂಪಾಯಿ ಆಗಿದೆ. 

ಬಿಸಿಲಿನ ಬೇಗಗೆ ದಾಹ ತೀರಿಸಿಕೊಳ್ಳಲು ಲೆಮನ್​ ಜ್ಯೂಸ್ ಮೊರೆ; ನಿಂಬೆ ಹಣ್ಣಿಗೆ ಭಾರಿ ಡಿಮ್ಯಾಂಡ್​!
ನಿಂಬೆ ಹಣ್ಣಿಗೆ ಭಾರಿ ಡಿಮ್ಯಾಂಡ್​
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Mar 21, 2024 | 9:47 PM

Share

ಚಿಕ್ಕಬಳ್ಳಾಪುರ, ಮಾ.21: ಬೆಸಿಗೆಯ ಬಿಸಿ ತಡೆದುಕೊಳ್ಳಲಾಗದ ಜನ, ಬಿಸಿಗಾಳಿಯಿಂದ ದೇಹವನ್ನು ತಂಪಾಗಿಡಲು ಪರದಾಡುತ್ತಿದ್ದಾರೆ. ಸುಲಭವಾಗಿ ನಿಂಬೆ ಹಣ್ಣಿನ ಪಾನಕ, ಜ್ಯೂಸ್​(Lemon juice)ಗಳಿಂದ ದೇಹವನ್ನು ತಂಪಾಗಿ ಮಾಡಿಕೊಳ್ಳಬಹುದು, ಇದರಿಂದ ನಿಂಬೆ ಹಣ್ಣಿಗೆ ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್ ಬಂದಿದೆ. ಕೆ.ಜಿ ಸೇಬು ಹಣ್ಣಿನ ಬೆಲೆ 180 ರೂಪಾಯಿ ಆದರೆ, ಕೆ.ಜಿ ನಿಂಬೆ ಹಣ್ಣಿನ ಬೆಲೆ ಇನ್ನೂರು ರೂಪಾಯಿ ಆಗಿದೆ. ಈ ಹಿನ್ನಲೆ ಈಗ ಎಲ್ಲಿ ನೋಡಿದರೂ ನಿಂಬೆ ಹಣ್ಣು ಹಾಗೂ ನಿಂಬೆ ಹಣ್ಣಿನ ಜ್ಯೂಸ್​ನದ್ದೆ ಕಾರುಬಾರಾಗಿದೆ.

ಬಿಸಿಗಾಳಿ ಹಾಗೂ ಉಷ್ಣದಿಂದ ಬಾಣಂತಿಯರು, ಗರ್ಭಿಣಿಯರು ಹಾಗೂ ಮಕ್ಕಳು ತುಂಬಾ ಹುಷಾರ್​ ಆಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇದರಿಂದ ಜ್ಯೂಸ್ ಅಂಗಡಿಗಳಿಗೆ ಬರುವ ಗ್ರಾಹಕರು, ನಿಂಬೆ ಹಣ್ಣಿನ ಜ್ಯೂಸ್​ಗಳನ್ನೆ ಕೇಳುತ್ತಿದ್ದಾರೆ. ಆದ್ರೆ, ಒಂದು ನಿಂಬೆ ಹಣ್ಣಿನ ಬೆಲೆ 7 ರಿಂದ 8 ರೂಪಾಯಿ ಇದೆ. ಈ ಹಿನ್ನಲೆ ಜ್ಯೂಸ್ ಅಂಗಡಿಯವರು ವಿಧಿಯಿಲ್ಲದೆ ದುಬಾರಿ ಬೆಲೆ ತೆತ್ತು ನಿಂಬೆ ಹಣ್ಣುಗಳನ್ನು ಖರೀದಿ ಮಾಡುತ್ತಿದ್ದಾರೆ. ನಿಂಬೆ ಹಣ್ಣಿಗಂತೂ ಭಾರಿ ಬೇಡಿಕೆ ಬಂದಿದ್ದು, ಮಾರುಕಟ್ಟೆಯಲ್ಲಿ ನಿಂಬೆ ಹಣ್ಣುಗಳು ಆ್ಯಪಲ್ ಬೆಲೆಯನ್ನೆ ಮಿರಿಸಿದೆ.

ಇದನ್ನೂ ಓದಿ:ಊಟದ ಬಳಿಕ ನಿಂಬೆ ನೀರು ಕುಡಿಯುವುದರಿಂದ ಸಿಗುವ ಲಾಭಗಳು

35 ಸಾವಿರ ರೂಪಾಯಿಗೆ ಹರಾಜಾದ ಒಂದು ನಿಂಬೆ ಹಣ್ಣು

ಇನ್ನು ಯುಗಾದಿ, ರಾಮನವಮಿ ವೇಳೆಗೆ ನಿಂಬೆ ಹಣ್ಣು ಖರೀದಿ ಮತ್ತಷ್ಟು ದುಬಾರಿಯಾಗಲಿದ್ದು, ಬೇಸಿಗೆಯ ಬಯಲು ಪ್ರದೇಶಗಳಾದ ಆಂಧ್ರ, ತಮಿಳುನಾಡಿನಲ್ಲಿಯೂ ನಿಂಬೆಹಣ್ಣಿನ ಬೆಲೆ ಹೆಚ್ಚಾಗಿದೆ. ಇದೆಲ್ಲದರ ಆಚೆಗೆ ನೋಡುವುದಾದರೆ ತಮಿಳುನಾಡಿನ ಗ್ರಾಮವೊಂದರಲ್ಲಿ ಒಂದು ನಿಂಬೆಹಣ್ಣಿನ ಬೆಲೆ 35 ಸಾವಿರ ರೂಪಾಯಿ ಇದೆ. ಹೌದು, ನೀವು ಕೇಳಿದ್ದು ಸರಿ. ಏನಪ್ಪಾ ಆ ನಿಂಬೆಹಣ್ಣಿನ ವಿಶೇಷತೆ ಅಂದರೆ, ತಮಿಳುನಾಡಿನ ಶಿವಗರಿ ಗ್ರಾಮದ ಶಿವನ ದೇವಸ್ಥಾನದಲ್ಲಿ ಇದೇ ತಿಂಗಳ 8ರಂದು ನಡೆದ ವಿಶೇಷ ಪೂಜೆ ನಡೆಯಿತು. ಆ ವೇಳೆ ನಿಂಬೆಹಣ್ಣು ಮತ್ತು ಇತರ ಪೂಜಾ ಸಾಮಗ್ರಿಗಳನ್ನು ಹರಾಜು ಹಾಕಲಾಯಿತು. ಆಗ ಭಕ್ತರು ಇಷ್ಟೊಂದು ದುಬಾರಿ ಬೆಲೆ ಕೊಟ್ಟು ಖರೀದಿ ಮಾಡಿದರು. ಹೀಗೆ ಖರೀದಿ ಆಡಿದ ನಿಂಬೆಹಣ್ಣನ್ನು ಮನೆಗೆ ತೆಗೆದುಕೊಂಡು ಹೋದರೆ ಒಳಿತಾಗುತ್ತದೆ ಎಂ-ದು ಅಲ್ಲಿನ ಭಕ್ತರು ನಂಬುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ​

Published On - 9:44 pm, Thu, 21 March 24

Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್