AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಗಾಲಕ್ಕೆ ಕಂಗಲಾದ ಚಿಕ್ಕಬಳ್ಳಾಪುರ; ಕೆಲವು ಹಳ್ಳಿಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ

ಆ ಜಿಲ್ಲೆಯ 6 ತಾಲ್ಲೂಕುಗಳು ಸಂಪೂರ್ಣ ಬರಪೀಡಿತವಾಗಿವೆ. ಸ್ವತಃ ರಾಜ್ಯ ಸರ್ಕಾರ 6 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳನ್ನಾಗಿ ಘೋಷಣೆ ಮಾಡಿದೆ. ತೀವ್ರ ಬರದಿಂದ ಕೆಲವು ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಲ್ಬಣಿಸಿದೆ.

ಬರಗಾಲಕ್ಕೆ ಕಂಗಲಾದ ಚಿಕ್ಕಬಳ್ಳಾಪುರ; ಕೆಲವು ಹಳ್ಳಿಗಳಲ್ಲಿ ಕುಡಿಯುವ ನೀರಿಗೂ ಸಮಸ್ಯೆ
ರೈತರ ಮನವಿ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 19, 2023 | 7:44 PM

Share

ಚಿಕ್ಕಬಳ್ಳಾಪುರ, ಸೆ.19: ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳು ಬರದಿಂದ ಕೂಡಿದ್ದು, ರೈತರು ಕಂಗಾಲಾಗಿದ್ದಾರೆ. ಕಷ್ಟಪಟ್ಟು ಬೆಳೆದ ಬೆಳೆ ಒಣಗಿ ಹೋಗುತ್ತಿದೆ. ಅದರಂತೆ ಇದೀಗ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಜಮೀನುಗಳಲ್ಲಿ ಬೆಳೆ ಒಣಗಿ ನಿಂತಿವೆ. ಗ್ರಾಮದಲ್ಲಿ ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಹೌದು, ಜಿಲ್ಲೆಯ ಗೌರಿಬಿದನೂರು, ಗುಡಿಬಂಡೆ, ಬಾಗೇಪಲ್ಲಿ, ಚಿಂತಾಮಣಿ, ಶಿಡ್ಲಘಟ್ಟ ಸೇರಿದಂತೆ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲೂ ತೀವ್ರ ಬರ ಉಂಟಾಗಿದೆ.

ಇದರಿಂದ ಜಿಲ್ಲೆಯಲ್ಲಿ ಭಿತ್ತನೆಯಾಗಬೇಕಾಗಿದ್ದ ಒಂದೂವರೆ ಲಕ್ಷ ಎಕರೆ ಜಮೀನಿನಲ್ಲಿ ಭಿತ್ತನೆಯೇ ಆಗಿಲ್ಲ. ಅಲ್ಲಿಷ್ಟು, ಇಲ್ಲಿಷ್ಟು ಭಿತ್ತನೆ ಮಾಡಿದ್ದ ಬೆಳೆಗಳು ಕೂಡ ಒಣಗಿ ನಿಂತಿವೆ. ಇನ್ನು ಜಿಲ್ಲೆಯಾದ್ಯಂತ 27ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಡಿಯುವ ನೀರಿಲ್ಲ. ರೈತರ 12 ಖಾಸಗಿ ಕೊಳವೆ ಬಾವಿಗಳನ್ನು ಬಳಸಿಕೊಂಡು ನೀರು ಸರಬರಾಜು ಮಾಡಲಾಗುತ್ತಿದೆ. ಮುಂದಿನ ಒಂದು ವಾರದಲ್ಲಿ ಮಳೆಯಾಗದಿದ್ದರೆ 67 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಲಿದೆ.

ಇದನ್ನೂ ಓದಿ:ಈಗ ದಾಳಿಂಬೆಗೆ ಬಂದಿದೆ ಚಿನ್ನದ ಬೆಲೆ; ರೈತನ ತೋಟಕ್ಕೆ ನುಗ್ಗಿ 5 ಲಕ್ಷ ರೂ ಮೌಲ್ಯದ ದಾಳಿಂಬೆ ಹಣ್ಣುಗಳ ಕಳ್ಳತನ ಮಾಡಿದರು!

ಕಳೆದ ನಾಲ್ಕರಿಂದ ಐದು ವರ್ಷಗಳು ಬರ ಬಂದಿರಲಿಲ್ಲ. ಆದರೆ, ಈಗ ಬರ ಕಂಡು ರೈತರು ಕಂಗಾಲಾಗಿದ್ದಾರೆ. ಭಿತ್ತನೆ ಮಾಡಿದ್ದ ರಾಗಿ, ಜೋಳ, ತೊಗರಿ, ನೆಲಗಡಲೆ ಮಣ್ಣಲ್ಲಿ ಮಣ್ಣಾಗಿದ್ದು, ಸರ್ಕಾರದ ಸಹಾಯ ಹಸ್ತಕ್ಕಾಗಿ ರೈತರು ಮೊರೆ ಇಟ್ಟಿದ್ದಾರೆ.

ಸಾಲಬಾದೆ ತಾಳದೆ ರೈತ ಆತ್ಮಹತ್ಯೆ

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕ ಛಬ್ಬಿ ಗ್ರಾಮದಲ್ಲಿ ಸಾಲಬಾದೆ ತಾಳದೆ ರೈತನೊಬ್ಬ ತನ್ನ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನೀಲಪ್ಪ ಗೊರವರ (38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇನ್ನು ಈ ರೈತ ಹೊಲದಲ್ಲಿ ಗೋವಿನ ಜೋಳ ಬೆಳೆದಿದ್ದು, ಮಳೆ ಇಲ್ಲದೆ ಬೆಳೆ ನಾಶವಾಗಿದೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ KVG ಬ್ಯಾಂಕ್, ಕೈಗಡ ಸಾಲ ಸೇರಿ ಲಕ್ಷಾಂತರ ರೂ ಸಾಲ‌ ಮಾಡಿದ್ದನಂತೆ. ಈ ಘಟನೆ ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್