AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿಯಿಡಿ ಸುರಿದ ಧಾರಾಕಾರ ಮಳೆಗೆ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿತ: ಪ್ರವಾಸಿಗರನ್ನು ವಾಪಸ್ ಕಳಿಸುತ್ತಿರುವ ಪೊಲೀಸರು

ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿದು ಗಿರಿಧಾಮದ ರಸ್ತೆ ಬಂದ್ ಆಗಿದೆ. ಹೀಗಾಗಿ ನಂದಿ ಬೆಟ್ಟಕ್ಕೆ ಬರುತ್ತಿರುವ ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳಿಸುತ್ತಿದ್ದಾರೆ.

ರಾತ್ರಿಯಿಡಿ ಸುರಿದ ಧಾರಾಕಾರ ಮಳೆಗೆ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿತ: ಪ್ರವಾಸಿಗರನ್ನು ವಾಪಸ್ ಕಳಿಸುತ್ತಿರುವ ಪೊಲೀಸರು
ನಂದಿ ಗಿರಿಧಾಮದಲ್ಲಿ ಗುಡ್ಡ ಕುಸಿತ
TV9 Web
| Updated By: preethi shettigar|

Updated on:Aug 25, 2021 | 9:50 AM

Share

ಚಿಕ್ಕಬಳ್ಳಾಫುರ: ರಾತ್ರಿಯಿಡೀ ಸುರಿದ ಮಳೆಗೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದ ಗುಡ್ಡಗಳು ಕುಸಿದಿವೆ. ಬೆಟ್ಟದ ಮೇಲಿಂದ ನೀರು ಹರಿದು ಬಂದು ಬೆಟ್ಟಗಳು ಕುಸಿದಿವೆ. ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿದು ಗಿರಿಧಾಮದ ರಸ್ತೆ ಬಂದ್ ಆಗಿದೆ. ಹೀಗಾಗಿ ನಂದಿ ಬೆಟ್ಟಕ್ಕೆ ಬರುತ್ತಿರುವ ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳಿಸುತ್ತಿದ್ದಾರೆ.

ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರ ಪರದಾಟ ಚಿಕ್ಕಬಳ್ಳಾಪುರದಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಅವಾಂತರ ಸೃಷ್ಟಿಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ಜೈಭೀಮ್ ನಗರ ಬಡಾವಣೆಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ನಗರಸಭೆ ಅಧಿಕಾರಿಗಳ ವಿರುದ್ಧ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು ರಾತ್ರಿಯಿಡಿ ಸುರಿದ ಧಾರಾಕರ ಮಳೆಗೆ ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಚಿಕ್ಕಬಳ್ಳಾಫುರ ತಾಲೂಕಿನ ನಂದಿಗಿರಿಧಾಮದಲ್ಲಿ ನಡೆದಿದೆ. ವಿದ್ಯುತ್ ಕಂಬ ಬಿದ್ದಿರುವ ಪರಿಣಾಮ ನಂದಿ ಗಿರಿಧಾಮದಲ್ಲಿ ವಿದ್ಯುತ್ ಸಂಪೂರ್ಕ ಸ್ಥಗಿತವಾಗಿದೆ. ಅಲ್ಲದೆ ನಂದಿ ಗಿರಿಧಾಮದ ಕೆಲವೆಡೆ ಮರಗಳು ಕೂಡ ನೆಲಕ್ಕುರುಳಿವೆ. ಅದೃಷ್ಟವಷಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ.

ಕೋಲಾರ: ಮಳೆ ನೀರಿನಿಂದ ಕೆರೆಗಳಂತಾದ ರೈತರ ಜಮೀನು ಕೋಲಾರ ಜಿಲ್ಲೆಯಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಕೆ.ಸಿ.ವ್ಯಾಲಿಯ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಕೋಲಾರ ತಾಲೂಕಿನ ನರಸಾಪುರ ಭಾಗದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿದೆ. ಕೆ.ಸಿ.ವ್ಯಾಲಿ ಕಾಲುವೆಯಲ್ಲಿ ತುಂಬಿ ಹರಿಯುತ್ತಿರುವ ಮಳೆ ನೀರಿನ ಪರಿಣಾಮ ಕ್ಯಾರೆಟ್, ಟೊಮೆಟೋ, ರಾಗಿ, ಕೊತ್ತಂಬರಿ, ಸೇರಿದಂತೆ ಇನ್ನಿತರ ಬೆಳೆಗಳು ನೀರಿನಲ್ಲಿ ಮುಳುಗಡೆಯಾಗಿದೆ.

ಇದನ್ನೂ ಓದಿ: ಮತ್ತೊಂದು ಗುಡ್ಡ ಕುಸಿತ, ಚಾರ್ಮಾಡಿ ಘಾಟ್‌ ರಸ್ತೆ ಸಂಚಾರ‌ ಬಂದ್‌

Uttara Kannada: ಮನೆ, ಗುಡ್ಡ ಕುಸಿತ, ರಸ್ತೆ, ಸೇತುವೆ ನೀರುಪಾಲು, ಸಂಪರ್ಕ ಕಡಿತ; ಉತ್ತರ ಕನ್ನಡವಲ್ಲ ಇದು ತತ್ತರ ಕನ್ನಡ ಎಂದ ಜನ

Published On - 7:50 am, Wed, 25 August 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?