AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿಯಿಡಿ ಸುರಿದ ಧಾರಾಕಾರ ಮಳೆಗೆ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿತ: ಪ್ರವಾಸಿಗರನ್ನು ವಾಪಸ್ ಕಳಿಸುತ್ತಿರುವ ಪೊಲೀಸರು

ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿದು ಗಿರಿಧಾಮದ ರಸ್ತೆ ಬಂದ್ ಆಗಿದೆ. ಹೀಗಾಗಿ ನಂದಿ ಬೆಟ್ಟಕ್ಕೆ ಬರುತ್ತಿರುವ ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳಿಸುತ್ತಿದ್ದಾರೆ.

ರಾತ್ರಿಯಿಡಿ ಸುರಿದ ಧಾರಾಕಾರ ಮಳೆಗೆ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿತ: ಪ್ರವಾಸಿಗರನ್ನು ವಾಪಸ್ ಕಳಿಸುತ್ತಿರುವ ಪೊಲೀಸರು
ನಂದಿ ಗಿರಿಧಾಮದಲ್ಲಿ ಗುಡ್ಡ ಕುಸಿತ
TV9 Web
| Edited By: |

Updated on:Aug 25, 2021 | 9:50 AM

Share

ಚಿಕ್ಕಬಳ್ಳಾಫುರ: ರಾತ್ರಿಯಿಡೀ ಸುರಿದ ಮಳೆಗೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದ ಗುಡ್ಡಗಳು ಕುಸಿದಿವೆ. ಬೆಟ್ಟದ ಮೇಲಿಂದ ನೀರು ಹರಿದು ಬಂದು ಬೆಟ್ಟಗಳು ಕುಸಿದಿವೆ. ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿದು ಗಿರಿಧಾಮದ ರಸ್ತೆ ಬಂದ್ ಆಗಿದೆ. ಹೀಗಾಗಿ ನಂದಿ ಬೆಟ್ಟಕ್ಕೆ ಬರುತ್ತಿರುವ ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳಿಸುತ್ತಿದ್ದಾರೆ.

ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರ ಪರದಾಟ ಚಿಕ್ಕಬಳ್ಳಾಪುರದಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಅವಾಂತರ ಸೃಷ್ಟಿಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ಜೈಭೀಮ್ ನಗರ ಬಡಾವಣೆಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ನಗರಸಭೆ ಅಧಿಕಾರಿಗಳ ವಿರುದ್ಧ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು ರಾತ್ರಿಯಿಡಿ ಸುರಿದ ಧಾರಾಕರ ಮಳೆಗೆ ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಚಿಕ್ಕಬಳ್ಳಾಫುರ ತಾಲೂಕಿನ ನಂದಿಗಿರಿಧಾಮದಲ್ಲಿ ನಡೆದಿದೆ. ವಿದ್ಯುತ್ ಕಂಬ ಬಿದ್ದಿರುವ ಪರಿಣಾಮ ನಂದಿ ಗಿರಿಧಾಮದಲ್ಲಿ ವಿದ್ಯುತ್ ಸಂಪೂರ್ಕ ಸ್ಥಗಿತವಾಗಿದೆ. ಅಲ್ಲದೆ ನಂದಿ ಗಿರಿಧಾಮದ ಕೆಲವೆಡೆ ಮರಗಳು ಕೂಡ ನೆಲಕ್ಕುರುಳಿವೆ. ಅದೃಷ್ಟವಷಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ.

ಕೋಲಾರ: ಮಳೆ ನೀರಿನಿಂದ ಕೆರೆಗಳಂತಾದ ರೈತರ ಜಮೀನು ಕೋಲಾರ ಜಿಲ್ಲೆಯಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಕೆ.ಸಿ.ವ್ಯಾಲಿಯ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಕೋಲಾರ ತಾಲೂಕಿನ ನರಸಾಪುರ ಭಾಗದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿದೆ. ಕೆ.ಸಿ.ವ್ಯಾಲಿ ಕಾಲುವೆಯಲ್ಲಿ ತುಂಬಿ ಹರಿಯುತ್ತಿರುವ ಮಳೆ ನೀರಿನ ಪರಿಣಾಮ ಕ್ಯಾರೆಟ್, ಟೊಮೆಟೋ, ರಾಗಿ, ಕೊತ್ತಂಬರಿ, ಸೇರಿದಂತೆ ಇನ್ನಿತರ ಬೆಳೆಗಳು ನೀರಿನಲ್ಲಿ ಮುಳುಗಡೆಯಾಗಿದೆ.

ಇದನ್ನೂ ಓದಿ: ಮತ್ತೊಂದು ಗುಡ್ಡ ಕುಸಿತ, ಚಾರ್ಮಾಡಿ ಘಾಟ್‌ ರಸ್ತೆ ಸಂಚಾರ‌ ಬಂದ್‌

Uttara Kannada: ಮನೆ, ಗುಡ್ಡ ಕುಸಿತ, ರಸ್ತೆ, ಸೇತುವೆ ನೀರುಪಾಲು, ಸಂಪರ್ಕ ಕಡಿತ; ಉತ್ತರ ಕನ್ನಡವಲ್ಲ ಇದು ತತ್ತರ ಕನ್ನಡ ಎಂದ ಜನ

Published On - 7:50 am, Wed, 25 August 21

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ