AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ-ಚಿಕ್ಕಬಳ್ಳಾಪುರ ರೈತರಿಗೆ ಶಾಪವಾದ ಇಂಧನ ಇಲಾಖೆ ಆದೇಶ; ಏನಿದು? 

ಅಲ್ಲಿಯ ಜನರ ಜೀವನಾಡಿಯೇ ಕೃಷಿ. ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆ, ಪುಷ್ಪೋದ್ಯಮವೇ ಅವರ ಜೀವನಾಡಿ. ಇನ್ನು ಅಲ್ಲಿ ನದಿ, ನಾಲೆಗಳೇ ಇಲ್ಲ. ಅಲ್ಲಿರುವ ಅಂರ್ತಜಲ ನೀರನ್ನೇ ಬಳಕೆ ಮಾಡಿಕೊಂಡು ಜೀವನ ಕಟ್ಟಿಕೊಂಡಿದ್ದಾರೆ. ಇಂತಹದರಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಅದೊಂದು ಆದೇಶ, ರೈತರ ಕಾಯಕಕ್ಕೆ ಸಂಕಷ್ಟ ತಂದೊಡ್ಡಿದೆ. ಅಷ್ಟಕ್ಕೂ ಅದ್ಯಾವ ಆದೇಶ, ಅದೇನು ಅಂತೀರಾ? ಇಲ್ಲಿದೆ.

ಕೋಲಾರ-ಚಿಕ್ಕಬಳ್ಳಾಪುರ ರೈತರಿಗೆ ಶಾಪವಾದ ಇಂಧನ ಇಲಾಖೆ ಆದೇಶ; ಏನಿದು? 
ಚಿಕ್ಕಬಳ್ಳಾಪುರ ರೈತರ ಗೋಳು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jan 25, 2024 | 4:34 PM

Share

ಚಿಕ್ಕಬಳ್ಳಾಪುರ, ಜ.25: ಹೂವು, ಹಣ್ಣು, ತರಕಾರಿ, ರೇಷ್ಮೆ ಸೇರಿದಂತೆ ಹೈನೋದ್ಯಮಕ್ಕೆ ರಾಜ್ಯದಲ್ಲೇ ಕೋಲಾರ-ಚಿಕ್ಕಬಳ್ಳಾಪುರ (Kolar-Chikkaballapura) ಅವಳಿ ಜಿಲ್ಲೆಗಳು ಖ್ಯಾತಿ ಪಡೆದಿವೆ. ಇನ್ನು ಆ 2 ಜಿಲ್ಲೆಗಳಲ್ಲಿ ನದಿ, ನಾಲೆ ಸೇರಿದಂತೆ ಶಾಶ್ವತ ನೀರಿನ ಮೂಲಗಳಿಲ್ಲ. ಇಂತಹದರಲ್ಲಿ ಅಲ್ಲಿಯ ರೈತರು ಸುಮಾರು 2 ಸಾವಿರ ಅಡಿಗಳವರೆಗೂ ಬೋರ್‍ವೆಲ್ ಕೊರೆದು ಅವುಗಳಿಗೆ 25 ಹೆಚ್‍ಪಿ ಸಾಮರ್ಥ್ಯದ ಪಂಪ್‍ಸೆಟ್‍ಗಳನ್ನು ಅಳವಡಿಸಿ ಆ ಮೂಲಕ ಕೃಷಿಯನ್ನು ಮಾಡುತ್ತಿದ್ದಾರೆ. ಆದರೆ, ರಾಜ್ಯಸರ್ಕಾರ ಇತ್ತೀಚಿಗೆ 10 ಹೆಚ್‍ಪಿಗಿಂತ ಮೇಲ್ಪಟ್ಟ ಸಾಮರ್ಥ್ಯದ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ನೀಡಲ್ಲ ಎನ್ನುವ ಆದೇಶ ಹೊರಡಿಸಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ವಿದ್ಯುತ್ ಜಾಲಕ್ಕೆ ಅಳವಡಿಸಿರುವ ಬೋರ್ವೆಲ್ ಪಂಪ್‍ಸೆಟ್‍ಗಳನ್ನು ವ್ಯವಸ್ಥಿತವಾಗಿ ಸಕ್ರಮಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರ. ಅಕ್ರಮ-ಸಕ್ರಮ ಯೋಜನೆಯಡಿ ರೈತರು ಉಚಿತ ವಿದ್ಯುತ್‍ಗೆ ಅರ್ಜಿ ಹಾಕುವಂತೆ ಪ್ರಕಟಣೆ ಹೊರಡಿಸಿತ್ತು. ರಾಜ್ಯಾದ್ಯಂತ 44,364 ಅರ್ಜಿಗಳು ಸ್ವೀಕೃತವಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೊಂದರಲ್ಲೇ 1,942 ಅರ್ಜಿಗಳು ಸ್ವೀಕೃತವಾಗಿವೆ. ಸರ್ಕಾರವು ಮುಂದಿನ ದಿನಗಳಲ್ಲಿ ಅಕ್ರಮ ಬೋರ್ವೆಲ್ ಸಂಪರ್ಕಗಳಿಗೆ ವಿದ್ಯುತ್ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ:ವಿಜಯಪುರ: ಭೀಮಾನದಿ ಪಟ್ಟದಲ್ಲಿ ನಿಷೇದಾಜ್ಞೆ ಜಾರಿ: ವಿದ್ಯುತ್ ಸಂಪರ್ಕ ಕಟ್, ರೈತರು ಆಕ್ರೋಶ

10 ಹೆಚ್‍ಪಿ ಸಾಮರ್ಥ್ಯದವರೆಗೂ ಮಾತ್ರ ಉಚಿತ ವಿದ್ಯುತ್ ಒದಗಿಸುವುದಾಗಿ, 10 ಹೆಚ್‍ಪಿಗಿಂತ ಮೇಲ್ಪಟ್ಟ ಸಾಮರ್ಥ್ಯದ ಬೋರ್‍ವೆಲ್‍ಗಳಿಗೆ ಉಚಿತ ವಿದ್ಯುತ್ ನೀಡಿಲ್ಲ ಎನ್ನುವ ಆದೇಶ ಹೊರಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂಸಿ ಸುಧಾಕರ್, ಅವಳಿ ಜಿಲ್ಲೆಯ ರೈತರುಗಳಿಗೆ ವಿನಾಯತಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು.

ರೈತರ ಬೋರ್‍ವೆಲ್‍ಗಳಿಗೆ ಅಕ್ರಮವಾಗಿ ಅಳವಡಿಸಿರುವ ವಿದ್ಯುತ್ ಸಂಪರ್ಕ ಹಾಗೂ ಸಕ್ರಮಗೊಳಿಸುವ ವಿಚಾರದಲ್ಲಿ ಇಂಧನ ಇಲಾಖೆಯ ಅಧಿಕಾರಿಗಳ ಜೊತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸಭೆ ನಡೆಸಿ, ಕೋಲಾರ-ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳ ರೈತರ ಸಮಸ್ಯೆ ಸರ್ಕಾರಕ್ಕೆ ಬಂದಿದೆ. ಸದ್ಯಕ್ಕೆ ರೈತರಿಗೆ ತೊಂದರೆ ಮಾಡುವುದಿಲ್ಲವೆಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?