AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಗಳಿಗೆ ಸಿಹಿ ಸುದ್ದಿ; ನಂದಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ಇಲ್ಲ

ಟಿವಿ9 ಜೊತೆ ಮಾತನಾಡಿದ ಚಿಕ್ಕಬಳ್ಳಾಪುರ ಎಸ್​ಪಿ ಜಿಕೆ ಮಿಥುನ್ ಕುಮಾರ್, ನಂದಿಗಿರಿಧಾಮಕ್ಕೆ ಬರುವ ಪ್ರೇಮಿಗಳ ಪಯಣಕ್ಕೆ ನಿರ್ಬಂಧ ಇಲ್ಲ. ಪ್ರೇಮಿಗಳ ದಿನಾಚರಣೆಯಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೈ ಅಲರ್ಟ್ ಮಾಡಲಾಗಿದೆ ಎಂದರು.

ಪ್ರೇಮಿಗಳಿಗೆ ಸಿಹಿ ಸುದ್ದಿ; ನಂದಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ಇಲ್ಲ
ನಂದಿ ಬೆಟ್ಟ
TV9 Web
| Edited By: |

Updated on:Feb 13, 2022 | 4:40 PM

Share

ಚಿಕ್ಕಬಳ್ಳಾಪುರ: ಫೆಬ್ರವರಿ ತಿಂಗಳು ಬಂತೆಂದರೆ ಸಾಕು ಪ್ರೇಮಿಗಳಿಗೆ (Lovers) ಖುಷಿಯೋ ಖುಷಿ. ಫೆಬ್ರವರಿ 7ರಿಂದ ಆರಂಭವಾಗುವ ಸಂಭ್ರಮ ನಾಳೆ ಅಂದರೆ ಫೆಬ್ರವರಿ 14ರ ವರೆಗೆ ಇರುತ್ತದೆ. ಇನ್ನು ಪ್ರೇಮಿಗಳಿಗೆ ಹಾಟ್ ಸ್ಪಾಟ್ ಸ್ಥಳವೆಂದರೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ. ಸಾಮಾನ್ಯವಾಗಿ ನಂದಿ ಬೆಟ್ಟಕ್ಕೆ (Nandi Hills) ಜೋಡಿಗಳು ಆಗಮಿಸುತ್ತಿರುತ್ತವೆ. ಅದರಲ್ಲೂ ಪ್ರೇಮಿಗಳ ದಿನದಂದು ಬೆಟ್ಟಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ನಂದಿಗಿರಿಧಾಮದಲ್ಲಿ ಪೊಲೀಸರ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಚಿಕ್ಕಬಳ್ಳಾಪುರ ಎಸ್​ಪಿ ಜಿಕೆ ಮಿಥುನ್ ಕುಮಾರ್, ನಂದಿಗಿರಿಧಾಮಕ್ಕೆ ಬರುವ ಪ್ರೇಮಿಗಳ ಪಯಣಕ್ಕೆ ನಿರ್ಬಂಧ ಇಲ್ಲ. ಪ್ರೇಮಿಗಳ ದಿನಾಚರಣೆಯಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೈ ಅಲರ್ಟ್ ಮಾಡಲಾಗಿದೆ. ನಂದಿಗಿರಿಧಾಮ ಪೊಲೀಸರಿಂದ ಗಿರಿಧಾಮದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಅಂತ ಮಾಹಿತಿ ನೀಡಿದರು.

ಡಿಸೆಂಬರ್-ಜನವರಿ ಚುಮುಚುಮು ಚಳಿಯಲ್ಲಿ ನಂದಿ ಬೆಟ್ಟ ಹತ್ತಿ ಅಲ್ಲಿನ ಸೂರ್ಯೋದಯದ ಸೊಬಗನ್ನು ಸವಿಯುವುದೇ ಒಂದು ಭಾಗ್ಯ. ಬಹುತೇಕ ಪ್ರವಾಸಿಗರು, ಚಾರಣಿಗರು ಇಂತಹ ಅವಕಾಶಕ್ಕಾಗಿ ಕಾದು ಕುಳಿತ್ತಿರುತ್ತಾರೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ನಿರ್ದಾಕ್ಷಿಣ್ಯವಾಗಿ ಇಂತಹ ಅವಕಾಶವನ್ನು ಕಸಿದುಕೊಂಡಿತ್ತು. ಬೆಟ್ಟ ಹತ್ತಿ ಬರಲು ಪ್ರವಾಸಿಗರಿಗೆ ಬಿಲ್ಕುಲ್​ ಬೇಡಾ ಎಂದಿತ್ತು. ಆದರೆ ನಾಳೆ ಯಾವುದೇ ನಿರ್ಬಂಧ ಹೇರಿಲ್ಲ ಅಂತ ಎಸ್​ಪಿ ಜಿಕೆ ಮಿಥುನ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ

ನನ್ನ ಗುರಿ ಮುಂದಿನ ಎಲೆಕ್ಷನ್​ನಲ್ಲಿ 123 ಸ್ಥಾನ ಗೆಲ್ಲುವುದು; ಪ್ರಾದೇಶಿಕ ಪಕ್ಷದ ಸರ್ಕಾರ ತರಲು ಈಗಾಗಲೇ ತಯಾರಿ: ಹೆಚ್​ಡಿ ಕುಮಾರಸ್ವಾಮಿ

ದೇಶದ ಪ್ರಧಾನಿಗೆ ರಕ್ಷಣೆ ನೀಡಲು ವಿಫಲವಾದ ಚನ್ನಿ ಸರ್ಕಾರ, ಪಂಜಾಬ್​​ನ್ನು ಹೇಗೆ ಕಾಪಾಡುತ್ತದೆ?: ಅಮಿತ್ ಶಾ

Published On - 4:35 pm, Sun, 13 February 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್