AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಷ್ಮೆ ಗೂಡಿನ ಬಾಕಿ ಹಣ ಕೊಡದೆ ಪ್ರಾಣ ಬೆದರಿಕೆ ಹಾಕಿದ ವ್ಯಾಪಾರಿ: ನ್ಯಾಯ ಕೋರಿ ಪೊಲೀಸ್ ಠಾಣೆ ಮೆಟ್ಟಿಲೇರಿದ ರೈತರು

ರೇಷ್ಮೆ ಗೂಡು ಖರೀದಿ ಮಾಡಿದ್ದ ವ್ಯಾಪಾರಿಯೊರ್ವ ರೈತರಿಗೆ ಅಸಲು ಹಣ ಕೊಡದೆ ಸತಾಯಿಸುತ್ತಿದ್ದು, ಮನೆಯ ಬಳಿ ಹೊದರೆ ಪ್ರಾಣ ಬೆದರಿಕೆ ಹಾಕಿದ್ದಾರೆ. ಇದರಿಂದ ನೊಂದ ರೈತರು ನ್ಯಾಯ ಕೋರಿ ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ.

ರೇಷ್ಮೆ ಗೂಡಿನ ಬಾಕಿ ಹಣ ಕೊಡದೆ ಪ್ರಾಣ ಬೆದರಿಕೆ ಹಾಕಿದ ವ್ಯಾಪಾರಿ: ನ್ಯಾಯ ಕೋರಿ ಪೊಲೀಸ್ ಠಾಣೆ ಮೆಟ್ಟಿಲೇರಿದ ರೈತರು
ಪ್ರಾತಿನಿಧಿಕ ಚಿತ್ರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jul 22, 2023 | 4:52 PM

Share

ಚಿಕ್ಕಬಳ್ಳಾಪುರ, ಜುಲೈ 22: ರೈತರು (Farmers) ಹಗಲು ರಾತ್ರಿ ಕಷ್ಟಪಟ್ಟು ಬೆಳೆಗಳನ್ನು ಬೆಳೆಯುತ್ತಾರೆ. ಕೈಗೆ ಬಂದ ಬೆಳೆಗಳನ್ನು ಮಾರಿ ರೈತರು ಸಾಲ ತೀರಿಸಿಕೊಳ್ಳುತ್ತಾರೆ. ಆದರೆ ರೈತರನ್ನು ನಂಬಿಸಿ ಬೆಳೆ ಖರೀದಿ ಮಾಡಿದ್ದ ವ್ಯಾಪಾರಿಯೊರ್ವ ರೈತರಿಗೆ ಅಸಲು ಹಣ ಕೊಡದೆ ಸತಾಯಿಸುತ್ತಿದ್ದಾನೆ. ಇದರಿಂದ ನೊಂದ ರೈತರು ನ್ಯಾಯ ಕೋರಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾರೆ.

ಜಿಲ್ಲೆತ ಶಿಡ್ಲಘಟ್ಟ ತಾಲ್ಲೂಕು ಕುಂದಲಗುರ್ಕಿ ಗ್ರಾಮದ ರೈತ ಸುರೇಶ್ ಕುಮಾರ್​ ರೇಷ್ಮೆ ಗೂಡು ಬೆಳೆದಿದ್ದಾರೆ. ಬೆಳೆದ ರೇಷ್ಮೆ ಗೂಡನ್ನು ಶಿಡ್ಲಘಟ್ಟ ನಗರದಲ್ಲಿರುವ ರೇಷ್ಮೆ ಗೂಡು ಮಾರುಕಟ್ಟೆಗೆ ಸಾಗಾಟ ಮಾಡಿದರು. ಆದರೆ ಅದನ್ನು ಗಮನಿಸಿದ ಸ್ಥಳಿಯ ರೇಷ್ಮೆ ಗೂಡು ವ್ಯಾಪಾರಿಗಳಾದ ಸೈಯದ್ ಸೈಪ್ ರಾಜಾ, ಅಪ್ರೋಜ್ ಮತ್ತು ಇರ್ಫಾನ್ ರೈತನ ಮನವೋಲಿಸಿದ್ದಾರೆ.

ಇದನ್ನೂ ಓದಿ: Hassan News: ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ

ಸರ್ಕಾರಿ ಮಾರುಕಟ್ಟೆಯಲ್ಲಿ ಗೂಡನ್ನು ಮಾರಾಟ ಮಾಡಿದರೆ ತಕ್ಷಣ ಹಣ ಬರಲ್ಲ, ಉತ್ತಮ ಬೆಲೆ ಬರಲ್ಲ ಅಂತ ಮನವೋಲಿಸಿ ರೈತನಿಂದ ರೇಷ್ಮೆ ಗೂಡು ಖರೀದಿ ಮಾಡಿದ್ದಾರೆ. ಪ್ರತಿ ಕೆ.ಜಿ ಗೂಡಿಗೆ 400 ರೂ.ಗಳಂತೆ ಒಟ್ಟು 43,200 ರೂ.ಗಳಿಗೆ ವ್ಯಾಪಾರ ಮಾಡಿದ್ದಾರೆ.

ಗೂಡು ಖರೀದಿ ಸಮಯದಲ್ಲಿ ವ್ಯಾಪಾರಿ ಇರ್ಫಾನ್ ರವರು 20.000 ರೂ. ನಗದು ಹಣವನ್ನು ಫೋನ್ ಪೇ ಮಾಡಿದ್ದಾನೆ. ಉಳಿದ ಹಣವನ್ನು ಸ್ವಲ್ಪ ಸಮಯದ ನಂತರ ನೀಡುವುದಾಗಿ ತಿಳಿಸಿದ್ದನಂತೆ. ಆದರೆ ಬಳಿಕ ಫೋನ್​ ಸಂಪರ್ಕ ಸಿಗದೆ ರೈತನನ್ನು ಸತಾಯಿಸುತ್ತಿದ್ದಾನೆ. ವ್ಯಾಪಾರ ಮಾಡಿ ಒಂದು ವಾರ ಆದರೂ ಇದುವರೆಗೂ ಹಣವನ್ನು ಕೊಡುತ್ತಿಲ್ಲ.

ಇದನ್ನೂ ಓದಿ: ಕ್ಯಾಟರ್ ಪಿಲ್ಲರ್ ಹುಳ ಕಚ್ಚಿದರೆ ಮನುಷ್ಯರು ಸಾಯುತ್ತಾರೆ! ಕಲಬುರಗಿಯಲ್ಲಿ ಹಬ್ಬಿದ ವದಂತಿ

ವ್ಯಾಪಾರಿಯನ್ನು ಹುಡುಕಿಕೊಂಡು ಮನೆಯ ಬಳಿ ಹೊದರೆ ಆತನ ಪತ್ನಿ ಹಾಗೂ ಸಂಬಂಧಿಗಳು ಪ್ರಾಣ ಬೆದರಿಕೆ ಹಾಕಿದ್ದಾರಂತೆ. ಇದರಿಂದ ನ್ಯಾಯ ಕೊಡಿಸುವಂತೆ ರೈತ ಸುರೇಶಕುಮಾರ್ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ