AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಜೇಬುಗಳ್ಳನ ಕೈ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ ರೈತರು!

ಕಳ್ಳ ಜೇಬಿನಿಂದ ಹಣ ಕದ್ದು ಬೇರೊಬ್ಬರ ಕೈಯಲ್ಲಿ ಕೊಟ್ಟು ಕಳುಹಿಸಿರುವ ಆರೋಪ ಕೇಳಿಬಂದಿದ್ದು, ರೈತರು ರೆಡ್ ಹ್ಯಾಂಡ್ ಆಗಿ ಜೇಬುಗಳ್ಳನನ್ನು ಹಿಡಿದಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಜೇಬುಗಳ್ಳನ ಕೈ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ ರೈತರು!
ಕಳ್ಳನಿಗ ಹಿಗ್ಗಾಮುಗ್ಗಾ ಥಳಿಸಿದ ರೈತರು
TV9 Web
| Updated By: sandhya thejappa|

Updated on: Nov 07, 2021 | 12:26 PM

Share

ಚಿಕ್ಕಬಳ್ಳಾಪುರ: ರೈತನ ಜೇಬಿನಲ್ಲಿದ್ದ ಸುಮಾರು 50 ಸಾವಿರ ಹಣ ಎಗರಿಸಿ ಸಿಕ್ಕಿಬಿದ್ದ ಕಳ್ಳನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ರೈತರು ಕಳ್ಳನ ಕೈ ಕಟ್ಟಿಹಾಕಿ ಥಳಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಪಟ್ಟಣದಲ್ಲಿ ನಡೆದಿದೆ. ನಂತರ ಚಿಂತಾಣಿ ಟೌನ್ ಠಾಣೆ ಪೊಲೀಸರು ಕಳ್ಳನನ್ನು ವಶಕ್ಕೆ ಪಡೆದಿದ್ದಾರೆ. ಕಳ್ಳ ಜೇಬಿನಿಂದ ಹಣ ಕದ್ದು ಬೇರೊಬ್ಬರ ಕೈಯಲ್ಲಿ ಕೊಟ್ಟು ಕಳುಹಿಸಿರುವ ಆರೋಪ ಕೇಳಿಬಂದಿದ್ದು, ರೈತರು ರೆಡ್ ಹ್ಯಾಂಡ್ ಆಗಿ ಜೇಬುಗಳ್ಳನನ್ನು ಹಿಡಿದಿದ್ದಾರೆ. ನಂತರ ಎರಡು ಕೈಗಳನ್ನು ಕಟ್ಟಿಹಾಕಿ ಮನಸ್ಸೋ ಇಚ್ಛೆಯಂತೆ ಥಳಿಸಿದ್ದಾರೆ.

ಪ್ರಿಯಕರನ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಆನೆಮಡಗು ಗ್ರಾಮದಲ್ಲಿ ಕೊಲೆ ಯತ್ನ ನಡೆದಿದೆ. ಬಹಿರ್ದೆಸೆಗೆ ಕುಳಿತುಕೊಂಡಾಗ ಪ್ರಿಯಕರನ ಪತ್ನಿಗೆ ಮಹಿಳೆಯೊಬ್ಬಳು ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾಳೆ. ಗಾಯಾಗೊಂಡಿರುವ ಮೋನಿಕಾ ಶಿಡ್ಲಘಟ್ಟ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಆರೋಪಿ ಗಂಗೋತ್ರಿಯನ್ನು ದಿಬ್ಬೂರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗಂಗರಾಜು ಎಂಬುವವರು ಗಂಗೋತ್ರಿಯನ್ನು ಪ್ರೀತಿಸಿ ಮೋನಿಕಾಳನ್ನು ಮದುವೆಯಾಗಿದ್ದರಂತೆ.

ಆಸ್ತಿಗಾಗಿ ದಾಯಾದಿಗಳ ಮಧ್ಯೆ ಗುಂಪು ಘರ್ಷಣೆ ಆಸ್ತಿ ವಿಚಾರಕ್ಕೆ ದಾಯಾದಿಗಳ ನಡುವೆ ಗಲಾಟೆ ನಡೆದಿದ್ದು, ಘರ್ಷಣೆ ವೇಳೆ ಓಮ್ನಿ ವ್ಯಾನ್ಗೆ ಬೆಂಕಿ, ಎರಡು ವಾಹನಗಳು ಜಖಂಗೊಂಡಿವೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬೊಮ್ಮೇಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಳಿನಿ, ಶ್ರೀನಿವಾಸರೆಡ್ಡಿ ಕುಟುಂಬಗಳ ಮಧ್ಯೆ ಗಲಾಟೆ ನಡೆದಿದ್ದು, ಘಟನೆಯಲ್ಲಿ ಅಂಜಿ ಎಂಬುವರಿಗೆ ಗಾಯವಾಗಿದೆ. ಸದ್ಯ ಬೊಮ್ಮೇಪಲ್ಲಿ ಗ್ರಾಮದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ

Viral Video: ಯುವತಿ ಚರಂಡಿ ಬಳಿ ನಿಂತು ಸ್ಟಂಟ್ ಮಾಡೋಕೆ ಹೋಗಿ ಆಗಿದ್ದೇ ಬೇರೆ! ಏನಾಯ್ತು ಅನ್ನೋದನ್ನಾ ವಿಡಿಯೊದಲ್ಲೇ ನೋಡಿ

Air Pollution: ದೀಪಾವಳಿ ಹಬ್ಬದ ಬಳಿಕ ಬೆಂಗಳೂರಿನಲ್ಲಿ ಕೊಂಚ ಮಟ್ಟಿಗೆ ಏರಿಕೆಯಾದ ವಾಯುಮಾಲಿನ್ಯ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ