AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ರೇಷ್ಮೆಗೂಡು ಮಾರುಕಟ್ಟೆಯಲ್ಲಿ ವೈಪೈ ಇಂಟರ್​​ನೆಟ್ ಸಮಸ್ಯೆ, ರೈತರಿಂದ ಪ್ರತಿಭಟನೆ

ಚಿಕ್ಕಬಳ್ಳಾಪುರದ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಆನ್ ಲೈನ್ ವ್ಯಾಪಾರಕ್ಕೆ ಅವಶ್ಯಕತೆಯಿರುವ ವೈ ಪೈ ಇಂಟರ್​ನೆಟ್ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಸಮಸ್ಯೆ ಸರಿಪಡಿಸದೇ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ರೈತರು ಆರೋಪಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರ: ರೇಷ್ಮೆಗೂಡು ಮಾರುಕಟ್ಟೆಯಲ್ಲಿ ವೈಪೈ ಇಂಟರ್​​ನೆಟ್ ಸಮಸ್ಯೆ, ರೈತರಿಂದ ಪ್ರತಿಭಟನೆ
ಚಿಕ್ಕಬಳ್ಳಾಪುರದ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ವೈಪೈ ಇಂಟರ್ ನೆಟ್ ಸಮಸ್ಯೆ ಸರಿಪಡಿಸುವಂತೆ ಆಗ್ರಹಿಸಿದ ಪ್ರತಿಭಟನೆ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: Rakesh Nayak Manchi

Updated on: Aug 04, 2023 | 5:41 PM

ಚಿಕ್ಕಬಳ್ಳಾಪುರ, ಆಗಸ್ಟ್ 4: ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿರುವ ರೇಷ್ಮೆಗೂಡು ಮಾರುಕಟ್ಟೆಯಲ್ಲಿ (Cocoon Market) ಆನ್​ಲೈನ್ ಮೂಲಕವೇ ವ್ಯಾಪಾರ ವಹಿವಾಟು ನಡೆಯುತ್ತದೆ. ಆದರೆ ಈ ಆನ್​ಲೈನ್ ವಹಿವಾಟಿಗೆ ಅವಶ್ಯಕತೆ ಇರುವ ವೈ ಪೈ ಇಂಟಿರ್ ನೆಟ್ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದನ್ನು ಸರಿಪಡಿಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆ (Protest) ನಡೆಸಿದರು.

ಈ ಮಾರುಕಟ್ಟೆ ರಾಜ್ಯದಲ್ಲೇ ಎರಡನೇ ಅತಿದೊಡ್ಡ ರೇಷ್ಮೆ ಗೂಡು ಮಾರುಕಟ್ಟೆ ಎಂಬ ಖ್ಯಾತಿ ಪಡೆದಿದೆ. ಈ ಮಾರುಕಟ್ಟೆಯಲ್ಲಿ ಆನ್​ಲೈನ್ ವ್ಯಾಪಾರ ವಹಿವಾಟು ಅನುಷ್ಠಾನ ಮಾಡಲಾಗಿದೆ. ಆದರೆ ಪ್ರತಿದಿನ ವ್ಯಾಪಾರ ವಹಿವಾಟು ಸಮಯಕ್ಕೆ ಇಲ್ಲಿರುವ ವೈ ಪೈ ಇಂಟರ್ ನೆಟ್ ಕೈ ಕೊಡುತ್ತಿದೆಯಂತೆ. ಇದರಿಂದ ವ್ಯಾಪಾರ ವಹಿವಾಟು ಅಸ್ತವ್ಯಸ್ತವಾಗುತ್ತಿದೆ. ಇದಕ್ಕೆ ಅಧಿಕಾರಿಗಳ ಉದಾಸೀನವೇ ಕಾರಣವೆಂದು ರೇಷ್ಮೆಗೂಡು ಮಾರುಕಟ್ಟೆಯಲ್ಲಿರುವ ರೀಲರ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: By bike not bullocks: ಹೊಸ ಸಾಧನ, ಸಾಹಸ : ಹತ್ತಿ ಹೊಲಕ್ಕೆ ಬೈಕ್ ಮೂಲಕ ಎಡೆ ಹೊಡೆದ ರೈತ

ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ರೀಲರ್ಸ್ ಪ್ರತಿಭಟನೆ

ಶಿಡ್ಲಘಟ್ಟ ನಗರದಲ್ಲರುವ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ಇಂಟರ್ ನೆಟ್ ವೈ ಪೈ ಅವ್ಯವಸ್ಥೆ ಖಂಡಿಸಿ ಮಾರುಕಟ್ಟೆಗೆ ಬಂದಿದ್ದ ರೀಲರ್ಸ್ ಹಾಗೂ ರೈತರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಬಂದ ಮಾರುಕಟ್ಟೆಯ ಅಧಿಕಾರಿಗಳು, ಇಂಟರ್ ನೆಟ್ ವೈ ಪೈ ಸಮಸ್ಯೆ ಆಗಿದೆ. ತಾಂತ್ರಿಕ ತೊಂದರೆಯಾಗಿದೆ. ಕೆಲವು ದಿನಗಳಲ್ಲಿ ವೈ ಫೈ ಸಮಸ್ಯೆ ಬಗೆಯರಿಸುವುದಾಗಿ ಭರವಸೆ ನೀಡಿದರು. ನಂತರ ರೀಲರ್ಸ್​​ ಪ್ರತಿಭಟನೆ ನಿಲ್ಲಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!