AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿ ಬೆಟ್ಟ ಕುಸಿಯುವ ಆತಂಕ: ರೂಪ್​ ವೇ ಕಾಮಗಾರಿ, ರೆಸಾರ್ಟ್​​​​ಗಳನ್ನು ಬಂದ್​ ಮಾಡಿ; ಪರಿಸರವಾದಿಗಳು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ನಂದಿ ಬೆಟ್ಟ ಪ್ರವಾಸಿಗರನ್ನು ಕೈಬೀಸಿ ಕರೆಯುವ ಮನಮೋಹಕ ತಾಣವಾಗಿದೆ. ಈ ಸುಂದರವಾದ ನಂದಿ ಬೆಟ್ಟಕ್ಕೆ ಅಪಾಯ ಬಂದೊದಗಿದೆ. ಇಲ್ಲಿ ಕಲ್ಲುಗಣಿಗಾರಿಕೆ ಮತ್ತು ರೂಪ್​ ವೇ ನಿರ್ಮಾಣದಿಂದ ನಂದಿ ಬೆಟ್ಟ ಕುಸಿಯುವ ಸಾಧ್ಯತೆ ಇದೆ ಎಂದು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ನಂದಿ ಬೆಟ್ಟ ಕುಸಿಯುವ ಆತಂಕ: ರೂಪ್​ ವೇ ಕಾಮಗಾರಿ, ರೆಸಾರ್ಟ್​​​​ಗಳನ್ನು ಬಂದ್​ ಮಾಡಿ; ಪರಿಸರವಾದಿಗಳು
ನಂದಿ ಬೆಟ್ಟ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Oct 14, 2024 | 11:07 AM

Share

ಚಿಕ್ಕಬಳ್ಳಾಪುರ, ಅಕ್ಟೋಬರ್​​ 14: ನಂದಿ ಬೆಟ್ಟ (Nandi Hills) ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ವೀಕೆಂಡ್​ ಬಂದರೆ ಸಾಕು ಬೆಂಗಳೂರು (Bengaluru) ಮಂದಿ ನಂದಿ ಬೆಟ್ಟಕ್ಕೆ ಹೋಗಿ, ಪ್ರಕೃತಿಯ ಸೊಬಗನ್ನು ಆನಂದಿಸಿ ಬರುತ್ತಾರೆ. ಪ್ರವಾಸಿ ಮತ್ತು ಐತಿಹಾಸಿಕ ತಾಣವಾದ ನಂದಿ ಬೆಟ್ಟಕ್ಕೆ ಅಪಾಯ ಬಂದೊದಗಿದೆ. ಇಲ್ಲಿನ ಕಲ್ಲುಗಣಿಗಾರಿಕೆ, ಕೈಗಾರಿಕಾ ಚಟುವಟಿಕೆಗಳು ಮತ್ತು ಸರ್ಕಾರದಿಂದ ನಿರ್ಮಾಣವಾಗುತ್ತಿರುವ ರೂಪ್​​ ವೇ ಕಾಮಗಾರಿಯಿಂದ ನಂದಿ ಬೆಟ್ಟ ಕುಸಿಯುವ ಸಾಧ್ಯತೆ ಇದೆ ಎಂದು ಪರಿಸರವಾದಿಗಳು, ಭೂ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಬೆಟ್ಟದ ಸುತ್ತಮುತ್ತ ರೆಸಾರ್ಟ್ಸ್ ವಿಲ್ಲಾ, ಹೋಟೆಲ್ಸ್, ಕ್ರಷರ್​, ರೂಪ್​ ವೇ ನಿರ್ಮಾಣ ಮತ್ತು ಹಲವು ವಾಣಿಜ್ಯ ಚಟುವಟಿಕೆಗಳಿಂದ ಬೆಟ್ಟಕ್ಕೆ ಅಪಾಯ ಎದುರಾಗಿದೆ. ಜೊತೆಗೆ ನಂದಿ ಬೆಟ್ಟದಲ್ಲಿ ಡ್ರಗ್ಸ್, ಗಾಂಜಾ ಸೇರಿದಂತೆ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದು, ಇವುಗಳಿಗೂ ಬ್ರೇಕ್​ ಹಾಕಿ. ಈಗಾಗಲೇ ಬೆಟ್ಟದ ಒಂದು ಭಾಗದಲ್ಲಿ ಕುಸಿತವಾಗಿದೆ. ಹೀಗಾಗಿ ಇವುಗಳನ್ನು ಕೂಡಲೆ ನಿಲ್ಲಿಸಬೇಕೆಂದು ಪರಿಸರವಾದಿ ಯಲ್ಲಪ್ಪ ರೆಡ್ಡಿ ಸೇರಿದಂತೆ ಹಲವು ಹೋರಾಟಗಾರರು ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಪ್ಯಾರಾಗ್ಲೈಡಿಂಗ್ ಆರಂಭ

ಸೇವ್ ನಂದಿಹಿಲ್ಸ್ ಅಭಿಯಾನ

ಪರಿಸರವಾದಿಗಳಾದ ಯಲ್ಲಪ್ಪ ರೆಡ್ಡಿ, ಆರ್.ಚಂದ್ರು, ರಾಜೇಂದ್ರ ಸಿಂಗ್ ಬಾಬು ಸೇರಿದಂತೆ ಹಲವರು ತಮ್ಮ ವಿಶ್ವ ಮಾನವ ಹಕ್ಕುಗಳ ಸೇವಾ ಪ್ರತಿಷ್ಠಾನದ ವತಿಯಿಂದ “ಸೇವ್ ನಂದಿಹಿಲ್ಸ್ ಅಭಿಯಾನ” ಹೋರಾಟ ಶುರು ಮಾಡಿದ್ದಾರೆ. ಸೇವ್ ನಂದಿ ಹಿಲ್ಸ್ ಕ್ಯಾಂಪೇನ್​ಗೆ ಸ್ಥಳೀಯರು ಸಾಥ್ ನೀಡಿದ್ದಾರೆ.

ನಮಗೆ ರೋಪ್ ವೇ ಬೇಡ, ಯಥಾಸ್ಥಿತಿ ಉಳಿಸಿಕೊಡಿ ಸಾಕು. ಕಳೆದ ವರ್ಷ ಇಲ್ಲಿ ಬೆಟ್ಟ ಕುಸಿದಿದೆ. ರಿಯಲ್ ಎಸ್ಟೇಟ್ ದಂಧೆ, ರಾಜಕಾರಣಿಗಳ ಹಣ ದಾಹಕ್ಕೆ ಬೆಟ್ಟ ಬಲಿ ಕೊಡಬೇಡಿ ಎಂದು ಹೋರಾಟಗಾರರು ಮನವಿ ಮಾಡಿದ್ದಾರೆ.

“ಕಲ್ಲುಗಣಿಗಾರಿಕೆಯಿಂದ ಹೆಚ್ಚಿನ ಹಾನಿಯಾಗುತ್ತಿದೆ. ಯಂತ್ರೋಪಕರಣಗಳ ಬಳಕೆಯಿಂದ ಬೆಟ್ಟಕ್ಕೆ ಅಪಾಯ ಎದುರಾಗಲಿದೆ. ಮತ್ತು ವಾಯು ಮತ್ತು ನೀರಿನ ಮಾಲಿನ್ಯ, ಮಣ್ಣಿನ ಸವೆತ, ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ” ಎಂದು ಯುನಿವರ್ಸಲ್ ಹ್ಯೂಮನ್ ರೈಟ್ಸ್ ಸರ್ವೀಸ್ ಫೌಂಡೇಶನ್ ಎನ್​ಜಿಒ ಎಚ್ಚರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?