AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಮನೆ ಕಾಂಪೌಂಡ್‌ಗೆ ಧ್ವಜಸ್ತಂಭ ನಿರ್ಮಿಸಿ ಹಸಿರು ಬಾವುಟ ಹಾರಾಟ

ಮಂಡ್ಯದ ಕೆರಗೋಡಿನ ಧ್ವಜ ವಿವಾದ ಇದೀಗ ರಾಜ್ಯದೆಲ್ಲೆಡೆ ಪಸರಿಸಿದೆ. ಎಲ್ಲೆಲ್ಲಿ ಹಸಿರು ಬಣ್ಣದ ಧ್ವಜಗಳು ಕಾಣಿಸುತ್ತಿವೆಯೋ ಅದನ್ನು ಹಿಂದೂ ಕಾರ್ಯಕರ್ತರು ಫೋಟೋ ತಗೆದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ. ಇದರ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ ಮನೆಯೊಂದರ ಕಾಂಪೌಂಡ್​ಗೆ ಧ್ವಜಸ್ತಂಭ ನಿರ್ಮಿಸಿ ಹಸಿರು ಬಾವುಟ ಹಾರಿಸಲಾಗಿದೆ.

ಚಿಕ್ಕಬಳ್ಳಾಪುರ: ಮನೆ ಕಾಂಪೌಂಡ್‌ಗೆ ಧ್ವಜಸ್ತಂಭ ನಿರ್ಮಿಸಿ ಹಸಿರು ಬಾವುಟ ಹಾರಾಟ
ಚಿಕ್ಕಬಳ್ಳಾಪುರದಲ್ಲಿ ಹಸಿರು ಬಾವುಟ ಹಾರಾಟ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jan 31, 2024 | 6:26 PM

Share

ಚಿಕ್ಕಬಳ್ಳಾಪುರ, ಜ.31: ಮಂಡ್ಯದ ಕೆರಗೋಡಿನ ಧ್ವಜ ವಿವಾದ ಇದೀಗ ರಾಜ್ಯದೆಲ್ಲೆಡೆ ಪಸರಿಸಿದೆ. ಎಲ್ಲೆಲ್ಲಿ ಹಸಿರು ಬಣ್ಣದ ಧ್ವಜಗಳು ಕಾಣಿಸುತ್ತಿವೆಯೋ ಅದನ್ನು ಹಿಂದೂ ಕಾರ್ಯಕರ್ತರು ಫೋಟೋ ತಗೆದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ. ಅದರಂತೆ ಇದೀಗ ಚಿಕ್ಕಬಳ್ಳಾಪುರ(Chikkaballapur) ನಗರದ ದೊಡ್ಡಭಜನೆ ಮನೆ ರಸ್ತೆಯಲ್ಲಿ ಮನೆಯ ಕಾಂಪೌಂಡ್​ಗೆ ಧ್ವಜಸ್ತಂಭ ನಿರ್ಮಿಸಿ ಹಸಿರು ಬಾವುಟ ಹಾರಿಸಿದ ಘಟನೆ ನಡೆದಿದೆ.

ಬಾವುಟ ತೆರವುಗೊಳಿಸುವಂತೆ ಸ್ಥಳೀಯರಿಂದ ದೂರು

ಈ ಹಿನ್ನಲೆ ಹಸಿರು ಬಾವುಟ ತೆರವುಗೊಳಿಸುವಂತೆ ಸ್ಥಳೀಯರು ದೂರು ನೀಡಿದ್ದು. ಸ್ಥಳಕ್ಕೆ ನಗರಠಾಣೆ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ಬಾವುಟ ತೆರವುಗೊಳಿಸುವಂತೆ ಮನೆಯ ಮಾಲೀಕರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನ ಮತ್ತೊಂದು ಕಡೆ ಹಸಿರು ಧ್ವಜ ಹಾರಾಟ, ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ

ಶಿವಾಜಿನಗರದಲ್ಲಿ ಹಾರಿಸಲಾದ ಹಸಿರು ಬಾವುಟ ತೆರವು ಮಾಡಿ ತ್ರಿವರ್ಣ ಧ್ವಜ ಹಾರಿಸಿದ್ದ ಪೊಲೀಸರು

ಮಂಡ್ಯದ ಘಟನೆ ಬೆನ್ನಲ್ಲೇ ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್​ನಲ್ಲಿ ಹಸಿರು ಬಾವುಟ ಹಾರಿಸಲಾಗಿದ್ದು, ಎಲ್ಲೆಡೆ ವೈರಲ್ ಆಗಿತ್ತು. ಇದಕ್ಕೆ ವಿಕಾಸ್ ವಿಕ್ಕಿ ಎನ್ನುವರು  ‘ಹಸಿರು ಬಾವುಟ ತೆಗೆಸುವ ತಾಕತ್ ನಿಮಗೆ ಇಲ್ಲವಾ ಎಂದು  ಟ್ವೀಟ್‌ ಮಾಡಿ ಸವಾಲು ಹಾಕಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸರು, ಬಿಬಿಎಂಪಿ ಧ್ವಜಸ್ತಂಭದಲ್ಲಿದ್ದ ಹಸಿರು ಬಾವುಟವನ್ನು ತೆರವು ಮಾಡಿ ತ್ರಿವರ್ಣ ಧ್ವಜ ಹಾರಿಸಿದ್ದರು.

ಇದಾದ ಬೆನ್ನಲ್ಲೇ ಇದೀಗ ಚಿಕ್ಕಬಳ್ಳಾಪುರದಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದು, ಮನೆಯ ಮಾಲೀಕರಿಗೆ ತಕ್ಷಣವೇ ಬಾವುಟವನ್ನು ತೆರವುಗೊಳಿಸಲು ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?