AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಮನೆ ಕಾಂಪೌಂಡ್‌ಗೆ ಧ್ವಜಸ್ತಂಭ ನಿರ್ಮಿಸಿ ಹಸಿರು ಬಾವುಟ ಹಾರಾಟ

ಮಂಡ್ಯದ ಕೆರಗೋಡಿನ ಧ್ವಜ ವಿವಾದ ಇದೀಗ ರಾಜ್ಯದೆಲ್ಲೆಡೆ ಪಸರಿಸಿದೆ. ಎಲ್ಲೆಲ್ಲಿ ಹಸಿರು ಬಣ್ಣದ ಧ್ವಜಗಳು ಕಾಣಿಸುತ್ತಿವೆಯೋ ಅದನ್ನು ಹಿಂದೂ ಕಾರ್ಯಕರ್ತರು ಫೋಟೋ ತಗೆದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ. ಇದರ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ ಮನೆಯೊಂದರ ಕಾಂಪೌಂಡ್​ಗೆ ಧ್ವಜಸ್ತಂಭ ನಿರ್ಮಿಸಿ ಹಸಿರು ಬಾವುಟ ಹಾರಿಸಲಾಗಿದೆ.

ಚಿಕ್ಕಬಳ್ಳಾಪುರ: ಮನೆ ಕಾಂಪೌಂಡ್‌ಗೆ ಧ್ವಜಸ್ತಂಭ ನಿರ್ಮಿಸಿ ಹಸಿರು ಬಾವುಟ ಹಾರಾಟ
ಚಿಕ್ಕಬಳ್ಳಾಪುರದಲ್ಲಿ ಹಸಿರು ಬಾವುಟ ಹಾರಾಟ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jan 31, 2024 | 6:26 PM

Share

ಚಿಕ್ಕಬಳ್ಳಾಪುರ, ಜ.31: ಮಂಡ್ಯದ ಕೆರಗೋಡಿನ ಧ್ವಜ ವಿವಾದ ಇದೀಗ ರಾಜ್ಯದೆಲ್ಲೆಡೆ ಪಸರಿಸಿದೆ. ಎಲ್ಲೆಲ್ಲಿ ಹಸಿರು ಬಣ್ಣದ ಧ್ವಜಗಳು ಕಾಣಿಸುತ್ತಿವೆಯೋ ಅದನ್ನು ಹಿಂದೂ ಕಾರ್ಯಕರ್ತರು ಫೋಟೋ ತಗೆದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ. ಅದರಂತೆ ಇದೀಗ ಚಿಕ್ಕಬಳ್ಳಾಪುರ(Chikkaballapur) ನಗರದ ದೊಡ್ಡಭಜನೆ ಮನೆ ರಸ್ತೆಯಲ್ಲಿ ಮನೆಯ ಕಾಂಪೌಂಡ್​ಗೆ ಧ್ವಜಸ್ತಂಭ ನಿರ್ಮಿಸಿ ಹಸಿರು ಬಾವುಟ ಹಾರಿಸಿದ ಘಟನೆ ನಡೆದಿದೆ.

ಬಾವುಟ ತೆರವುಗೊಳಿಸುವಂತೆ ಸ್ಥಳೀಯರಿಂದ ದೂರು

ಈ ಹಿನ್ನಲೆ ಹಸಿರು ಬಾವುಟ ತೆರವುಗೊಳಿಸುವಂತೆ ಸ್ಥಳೀಯರು ದೂರು ನೀಡಿದ್ದು. ಸ್ಥಳಕ್ಕೆ ನಗರಠಾಣೆ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡಲೇ ಬಾವುಟ ತೆರವುಗೊಳಿಸುವಂತೆ ಮನೆಯ ಮಾಲೀಕರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನ ಮತ್ತೊಂದು ಕಡೆ ಹಸಿರು ಧ್ವಜ ಹಾರಾಟ, ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ

ಶಿವಾಜಿನಗರದಲ್ಲಿ ಹಾರಿಸಲಾದ ಹಸಿರು ಬಾವುಟ ತೆರವು ಮಾಡಿ ತ್ರಿವರ್ಣ ಧ್ವಜ ಹಾರಿಸಿದ್ದ ಪೊಲೀಸರು

ಮಂಡ್ಯದ ಘಟನೆ ಬೆನ್ನಲ್ಲೇ ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್​ನಲ್ಲಿ ಹಸಿರು ಬಾವುಟ ಹಾರಿಸಲಾಗಿದ್ದು, ಎಲ್ಲೆಡೆ ವೈರಲ್ ಆಗಿತ್ತು. ಇದಕ್ಕೆ ವಿಕಾಸ್ ವಿಕ್ಕಿ ಎನ್ನುವರು  ‘ಹಸಿರು ಬಾವುಟ ತೆಗೆಸುವ ತಾಕತ್ ನಿಮಗೆ ಇಲ್ಲವಾ ಎಂದು  ಟ್ವೀಟ್‌ ಮಾಡಿ ಸವಾಲು ಹಾಕಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸರು, ಬಿಬಿಎಂಪಿ ಧ್ವಜಸ್ತಂಭದಲ್ಲಿದ್ದ ಹಸಿರು ಬಾವುಟವನ್ನು ತೆರವು ಮಾಡಿ ತ್ರಿವರ್ಣ ಧ್ವಜ ಹಾರಿಸಿದ್ದರು.

ಇದಾದ ಬೆನ್ನಲ್ಲೇ ಇದೀಗ ಚಿಕ್ಕಬಳ್ಳಾಪುರದಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದು, ಮನೆಯ ಮಾಲೀಕರಿಗೆ ತಕ್ಷಣವೇ ಬಾವುಟವನ್ನು ತೆರವುಗೊಳಿಸಲು ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!