AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pitru Paksha Effect: ಹೂ ಬೆಲೆ 5-10 ರೂಗೆ ಕುಸಿತ, ತೋಟದಲ್ಲೇ ಬಾಡುತ್ತಿದೆ ಸೇವಂತಿ

ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಯಲ್ಲಿ ಹೂಗಳನ್ನು ಕೊಂಡು ಕೊಳ್ಳುವವರಿಲ್ಲದೆ ಹೂ ಗಳು ತಿಪ್ಪೆ ಪಾಲಾಗಿವೆ. ರಾಶಿ ರಾಶಿ, ಲೋಡ್ ಗಟ್ಟಲೆ ಹೂ ಗಳನ್ನು ತಿಪ್ಪೆಗೆ ಸುರಿದು ಹೂ ಬೆಳೆಗಾರರು ಆಕ್ರೋಶ ಹೊರ ಹಾಕಿದ್ದಾರೆ. ಇನ್ನೂರು ಮುನ್ನೂರು ರೂಪಾಯಿ ಬೆಲೆ ಇದ್ದ ಹೂವಿನ ಬೆಲೆ ಈಗ 10 ರೂಪಾಯಿ 20 ರೂಪಾಯಿಗೆ ಕುಸಿದಿದೆ. ಸೇವಂತಿ, ಚೆಂಡು ಹೂ ಯ್ಯಾರು ಕೇಳುತ್ತಿಲ್ಲ. ಮಾರುಕಟ್ಟೆಯಲ್ಲಿ ಹೂ ಮಾರಾಟವಾಗ್ತಿಲ್ಲ.

Pitru Paksha Effect: ಹೂ ಬೆಲೆ 5-10 ರೂಗೆ ಕುಸಿತ, ತೋಟದಲ್ಲೇ ಬಾಡುತ್ತಿದೆ ಸೇವಂತಿ
ಹೂ ಬೆಲೆ 5-10 ರೂಗೆ ಕುಸಿತ, ತೋಟದಲ್ಲೇ ಬಾಡುತ್ತಿದೆ ಸೇವಂತಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಆಯೇಷಾ ಬಾನು|

Updated on:Sep 22, 2024 | 10:18 AM

Share

ಚಿಕ್ಕಬಳ್ಳಾಪುರ, ಸೆ.22: ಗೌರಿ-ಗಣೇಶ ಹಬ್ಬದ ವೇಳೆ ಗಗನಕ್ಕೇರಿದ್ದ ಹೂವಿನ (Flowers) ಬೆಲೆ ಈಗ ಪಾತಾಳಕ್ಕೆ ಬಿದ್ದಿದೆ. ಪಿತೃಪಕ್ಷ (Pitru Paksha) ಹಿನ್ನಲೆ ಹೂ ಗಳ ಬೆಲೆಯಲ್ಲಿ ಭಾರಿ ಇಳಿಕೆ ಕಂಡು ಬಂದಿದೆ. ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಯಲ್ಲಿ ಹೂಗಳನ್ನು ಕೊಂಡು ಕೊಳ್ಳುವವರಿಲ್ಲದೆ ಹೂ ಗಳು ತಿಪ್ಪೆ ಪಾಲಾಗಿವೆ. ರಾಶಿ ರಾಶಿ, ಲೋಡ್ ಗಟ್ಟಲೆ ಹೂ ಗಳನ್ನು ತಿಪ್ಪೆಗೆ ಸುರಿದು ಹೂ ಬೆಳೆಗಾರರು ಆಕ್ರೋಶ ಹೊರ ಹಾಕಿದ್ದಾರೆ. ಹೂ ಬೆಳೆ ಹಾಗೂ ಹೂ ಮಾರುಕಟ್ಟೆಗೆ ಖ್ಯಾತಿಯಾಗಿರುವ ಚಿಕ್ಕಬಳ್ಳಾಪುರದಲ್ಲೇ ಇಂತಹದೊಂದು ಪರಿಸ್ಥಿತಿ ನಿರ್ಮಾಣವಾಗಿದೆ.

ಎರಡು ಲಕ್ಷ ರೂಪಾಯಿ ಖರ್ಚು ಮಾಡಿ ಎರಡು ಎಕರೆಯಲ್ಲಿ ತರೇವಾರಿ ಸೇವಂತಿ ಹೂ ಬೆಳೆದಿದ್ದ ರೈತ ಶೇಖರ್ ಅವರು ಟಿವಿ9 ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ಈಗ ಕೆ.ಜಿ ಹೂ ಬೆಲೆ 5 ರೂಪಾಯಿ ಹತ್ತು ರೂಪಾಯಿ ಆಗಿದೆ. ಪ್ರಸ್ತುತ ಬೆಲೆಗೆ ಕೂಲಿಯೂ ಹೊರಡಲ್ಲ, ಮಾಡಿದ ಸಾಲಾ ತೀರಿಸಲು ಜಮೀನು ಅಡ ಇಡುವಂತಾಗಿದೆ ಎಂದು ಕಣ್ಣೀರು ಹಾಕಿದ್ದಾರೆ.

Flower prices fall by Rs 5-10 rs in chikkaballapur over Pitru Paksha Effect kannada news

ಇನ್ನು ಹೂ ಗಳ ಬೆಲೆ ಇಳಿಕೆ ಸಂಬಂಧ ಮಾತನಾಡಿದ ಹೂವಿನ ವರ್ತಕರ ಸಂಘದ ಅಧ್ಯಕ್ಷ ರವಿಂದ್ರ ಅವರು, ಪಿತೃಪಕ್ಷ ಹಿನ್ನಲೆ ಶುಭ ಸಮಾರಂಭಗಳು ನಡೆಯುತ್ತಿಲ್ಲ. ದೇಶದಾದ್ಯಂತ ಹೂಗಳಿಗೆ ಬೇಡಿಕೆಯಿಲ್ಲ. ಇನ್ನೂರು ಮುನ್ನೂರು ರೂಪಾಯಿ ಬೆಲೆ ಇದ್ದ ಹೂವಿನ ಬೆಲೆ ಈಗ 10 ರೂಪಾಯಿ 20 ರೂಪಾಯಿಗೆ ಕುಸಿದಿದೆ. ಸೇವಂತಿ, ಚೆಂಡು ಹೂ ಯ್ಯಾರು ಕೇಳುತ್ತಿಲ್ಲ. ಮಾರುಕಟ್ಟೆಯಲ್ಲಿ ಹೂ ಮಾರಾಟವಾಗ್ತಿಲ್ಲ. ಇರುವ ಹೂಗಳನ್ನು ಬಿಸಾಡುತ್ತಿದ್ದೇವೆ ಎಂದು ರವೀಂದ್ರ ಅವರು ತಿಳಿಸಿದರು.

ಇದನ್ನೂ ಓದಿ: ಕರ್ನಾಟಕದ ವಿವಿಧ ಕಂಪನಿಗಳಲ್ಲಿ ತಯಾರಾಗುವ ತುಪ್ಪ ಪರೀಕ್ಷಿಸಲು ನಿರ್ಧರಿಸಿದ ಸರ್ಕಾರ

ಜನವರಿಯಲ್ಲಿ ಹೂವಿನ ಅಂಟು ನಾಟಿ ಮಾಡಿದರೆ ಆಗಸ್ಟ್‌-ಸೆಪ್ಟೆಂಬರ್ ತಿಂಗಳಿನಲ್ಲಿ ತೋಟದ ತುಂಬಾ ಹೂ ಫಸಲು ಬಿಡುತ್ತದೆ. ಈ ಹೂವುಗಳಿಗೆ ಗೌರಿ ಗಣೇಶ ಹಬ್ಬ, ವರಲಕ್ಷ್ಮಿ ಹಾಗೂ ಓಣಂ ಹಬ್ಬಗಳಲ್ಲಿ ಹೆಚ್ಚಿನ ಬೇಡಿಕೆ ಇರುತ್ತದೆ. ಗಣಪತಿ ಹಬ್ಬದ ಸಂದರ್ಭದಲ್ಲಿ ಕೆ.ಜಿ ಹೂವಿಗೆ ₹200-₹300 ಇತ್ತು. ಹಬ್ಬದ ಬಳಿಕ ಇದೀಗ ₹25-30ಕ್ಕೆ ಇಳಿದಿದೆ. ಇದರಿಂದ ರೈತರು ಮಾಡಿದ ಖರ್ಚಿನ ಹಣವು ಸಹ ಬಾರದಂತಾಗಿದೆ. ಬೆಲೆ ಇದ್ದಾಗ ಬೆಳೆ ಇಲ್ಲ, ಬೆಳೆಯಿದ್ದಾಗ ಬೆಲೆ ಇಲ್ಲ ಎನ್ನುವ ಸ್ಥಿತಿ ಇವರದ್ದಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:17 am, Sun, 22 September 24

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು