AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರ ಗಮನಕ್ಕೆ: ನಂದಿಬೆಟ್ಟಕ್ಕೆ ಇನ್ಮೇಲೆ ಖಾಸಗಿ ವಾಹನಗಳ ಪ್ರವೇಶ ನಿಷೇಧ

ಬೆಂಗಳೂರಿನಿಂದ 60 ಕಿ.ಮೀ ದೂರದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಇನ್ಮುಂದೆ ಖಾಸಗಿ ಮತ್ತು ವೈಯಕ್ತಿಕ ವಾಹನಗಳ ಪ್ರವೇಶವನ್ನು ನಿಷೇಧಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಖಾಸಗಿ ವಾಹನಗಳ ಬದಲಾಗಿ ಪ್ರವಾಸಿಗರನ್ನು ಬೆಟ್ಟಕ್ಕೆ ತಲುಪಿಸಲು ಎಲೆಕ್ಟ್ರಾನಿಕ್​ ಬಸ್​ಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆ. ಇದು ಪ್ರವಾಸೋದ್ಯಮ ಇಲಾಖೆ ಯೋಜನೆಯ ಒಂದು ಭಾಗವಾಗಿದೆ.

ಪ್ರವಾಸಿಗರ ಗಮನಕ್ಕೆ: ನಂದಿಬೆಟ್ಟಕ್ಕೆ ಇನ್ಮೇಲೆ ಖಾಸಗಿ ವಾಹನಗಳ ಪ್ರವೇಶ ನಿಷೇಧ
ನಂದಿಬೆಟ್ಟ
Follow us
ಗಂಗಾಧರ​ ಬ. ಸಾಬೋಜಿ
|

Updated on: Sep 01, 2023 | 12:21 PM

ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 1: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ (Nandi Hills) ಇನ್ಮುಂದೆ ಖಾಸಗಿ ಮತ್ತು ವೈಯಕ್ತಿಕ ವಾಹನಗಳ ಪ್ರವೇಶವನ್ನು ನಿಷೇಧಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಿಂದ 60 ಕಿ.ಮೀ ದೂರದಲ್ಲಿರುವ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ವಾರಾಂತ್ಯದಲ್ಲಿ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಇದರಿಂದ ಸಾಕಷ್ಟು ಪ್ರಮಾಣದಲ್ಲಿ ಟ್ರಾಫಿಕ್ ಸಮಸ್ಯೆ ಕೂಡ ಉಂಟಾಗುತ್ತಿದ್ದು, ಹಾಗಾಗಿ ಪ್ರವಾಸಿಗರಿಗಾಗಿ ಎಲೆಕ್ಟ್ರಾನಿಕ್​ ಬಸ್​ಗಳನ್ನು ಕಲ್ಪಿಸಲು ನಿರ್ಧರಿಸಲಾಗುತ್ತಿದೆ.

ಇದು ಪ್ರವಾಸೋದ್ಯಮ ಇಲಾಖೆ ಯೋಜನೆಯ ಒಂದು ಭಾಗವಾಗಿದ್ದು, ಮುಂದಿನ 6-8 ತಿಂಗಳಲ್ಲಿ ನಂದಿ ಬೆಟ್ಟವನ್ನು ಒಂದು ದಿನದ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ. ಹಾಗಾಗಿ ನಂದಿಬೆಟ್ಟ ಸುತ್ತಮುತ್ತಲಿನ ಪ್ರದೇಶದಲ್ಲಿ ಖಾಸಗಿ ಮತ್ತು ವೈಯಕ್ತಿಕ ವಾಹನಗಳ ಸಂಚಾರ ಕಡಿಮೆ ಮಾಡುವ ಮೂಲಕ ಪ್ರವಾಸಿಗರಿಗೆ ಪ್ರಕೃತಿಯ ರಮಣೀಯ ಸೌಂದರ್ಯ ಮತ್ತು ಐತಿಹಾಸಿಕ ಸ್ಥಳದ ಮಹತ್ವವನ್ನು ಆನಂದಿಸಲು ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಫುರ: ನಂದಿಹಿಲ್ಸ್ ರೋಪ್ ವೇ ಕಾಮಗಾರಿಗೆ ಎಳ್ಳುನೀರು ಬೀಡುತ್ತಾ ರಾಜ್ಯ ಸರ್ಕಾರ, ಪ್ರವಾಸೋದ್ಯಮ ಸಚಿವರು ಹೇಳಿದ್ದಿಷ್ಟು

ನಂದಿ ಬೆಟ್ಟಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಮತ್ತೊಂದು ವಿಶೇಷತೆ ಕಾದಿದ್ದು, ಕೇಬಲ್ ಕಾರು ಆಯ್ಕೆ ಸಹ ಇದೆ. ಒಂದು ವರದಿಯ ಪ್ರಕಾರ ಕೇಬಲ್ ಕಾರಿನಲ್ಲಿ ಪ್ರಯಾಣಿಸಲು ಪ್ರತಿ ವ್ಯಕ್ತಿಗೆ ಸುಮಾರು 250-300 ರೂ. ಎಂದು ಅಂದಾಜಿಸಲಾಗಿದೆ.

ನಾವು ನಂದಿ ಬೆಟ್ಟವನ್ನು ಬೆಂಗಳೂರಿಗರಿಗೆ ಪ್ರವಾಸೋದ್ಯಮ ತಾಣವನ್ನಾಗಿ ಅಭಿವೃದ್ಧಿಪಡಿಸುತ್ತಿದ್ದೇವೆ. ಜೊತೆಗೆ 9 ನೇ ಶತಮಾನದ ಭೋಗ ನಂದೀಶ್ವರ ದೇವಸ್ಥಾನವನ್ನು ಧ್ವನಿ ಮತ್ತು ವಿಶೇಷ ವಿದ್ಯುತ್​ ದೀಪಗಳಿಂದ ಅಭಿವೃದ್ಧಿಪಡಿಸುತ್ತಿದ್ದೇವೆ. ಸುತ್ತಮುತ್ತಲಿನ ಪರಿಸರ ಮತ್ತು ಪರಂಪರೆಯನ್ನು  ಗಮನದಲ್ಲಿಟ್ಟುಕೊಂಡು ಈ ತಾಣವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್​ ಟೈಮ್ಸ್​ ಆಫ್​ ಇಂಡಿಯಾಗೆ ತಿಳಿಸಿರುವುದಾಗಿ ವರದಿ ಮಾಡಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ನಂದಿ ಹಿಲ್ಸ್ ತಪ್ಪಲಿನಲ್ಲಿ ಸೂಪರ್ ಟ್ರೇನರ್ ಇನ್ಸ್ಟಿಟ್ಯೂಟ್!

ನಂದಿ ಬೆಟ್ಟವನ್ನು ಅಪಘಾತ ವಲಯವೆಂದು ಈಗಾಗಲೇ ಪರಿಗಣಿಸಲಾಗಿರುವುದರಿಂದ, ಹೊಸ ವರ್ಷ ಮತ್ತು ಇತರ ಪ್ರಮುಖ ರಜಾದಿನಗಳಲ್ಲಿ ಬೆಟ್ಟವನ್ನು ಸಾರ್ವಜನಿಕರ ಪ್ರವೇಶಕ್ಕೆ ಸಂಪರ್ಕಿಸುವ 2 ಕಿಮೀ ವ್ಯಾಪ್ತಿಯಲ್ಲಿ ಪೊಲೀಸರು ಈಗಾಗಲೇ ಬೈಕ್​​​ಗಳು ಮತ್ತು ನಾಲ್ಕು ಚಕ್ರದ ವಾಹನಗಳನ್ನು ನಿಷೇಧಿಸಿದ್ದಾರೆ.

ನಂದಿ ಬೆಟ್ಟವನ್ನು ಪ್ರವಾಸಿಗರಿಗೆ ಸುರಕ್ಷಿತ ಪ್ರವಾಸಿ ತಾಣವನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯೂ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಪ್ರವೇಶಿಸುವುದನ್ನು ನಿಷೇಧಿಸಲು ಮುಂದಾಗಿದೆ. ಖಾಸಗಿ ವಾಹನಗಳ ಬದಲಾಗಿ ಪ್ರವಾಸಿಗರನ್ನು ಬೆಟ್ಟಕ್ಕೆ ತಲುಪಿಸಲು ಎಲೆಕ್ಟ್ರಾನಿಕ್​ ಬಸ್​ಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!