AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶುದ್ದ ನೀರು ಸೇವಿಸಿ ಬಂದೇ ಗ್ರಾಮದ ನಾಲ್ವರು ಸಾವು; ಗ್ರಾಮದಲ್ಲಿ ತಾತ್ಕಾಲಿಕ ಆಸ್ಪತ್ರೆ ತೆರೆದು ತಪಾಸಣೆ

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ವೀರಪಲ್ಲಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಕಳೆದ 15 ದಿನಗಳಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಸದ್ಯ ಎಚ್ಚೆತ್ತ ಅಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿದ್ದು ಆರೋಗ್ಯ ಇಲಾಖೆ ತಾತ್ಕಾಲಿಕ ಆಸ್ಪತ್ರೆ ತೆರೆದು ಗ್ರಾಮಸ್ಥರ ತಪಾಸಣೆ ನಡೆಸಲಾಗುತ್ತಿದೆ. ಮೃತಪಟ್ಟ ನಾಲ್ವರೂ 70 ವರ್ಷ ಮೇಲ್ಪಟ್ಟವರಾಗಿದ್ದಾರೆ.

ಅಶುದ್ದ ನೀರು ಸೇವಿಸಿ ಬಂದೇ ಗ್ರಾಮದ ನಾಲ್ವರು ಸಾವು; ಗ್ರಾಮದಲ್ಲಿ ತಾತ್ಕಾಲಿಕ ಆಸ್ಪತ್ರೆ ತೆರೆದು ತಪಾಸಣೆ
ವೀರಪಲ್ಲಿ ಗ್ರಾಮ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಆಯೇಷಾ ಬಾನು|

Updated on: Jun 13, 2024 | 1:21 PM

Share

ಚಿಕ್ಕಬಳ್ಳಾಪುರ, ಜೂನ್.13: ವಾಂತಿ ಭೇದಿಯಿಂದ ಬಳಲಿ ಒಂದೇ ಗ್ರಾಮದಲ್ಲಿ ನಾಲ್ಕು ಜನರು ಮೃತಪಟ್ಟಿದ್ದಾರೆ (Death). ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ವೀರಪಲ್ಲಿ ಗ್ರಾಮದಲ್ಲಿ ಕಳೆದ 15 ದಿನಗಳಲ್ಲಿ ನಾಲ್ಕು ಜನ ಮೃತಪಟ್ಟಿದ್ದು ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಶುದ್ದ ನೀರು (Contaminated water) ಕುಡಿದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಗ್ರಾಮದಲ್ಲಿ ಬೀಡುಬಿಟ್ಟಿದ್ದು ಮನೆ ಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.

ವೀರಪಲ್ಲಿ ಗ್ರಾಮದಲ್ಲಿ ವಾಂತಿ ಭೇದಿಯಿಂದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಬಳಿಕ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಗ್ರಾಮದಲ್ಲಿ ಬೀಡುಬಿಟ್ಟಿದ್ದಾರೆ. ಮನೆ ಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆ ಮಾಡ್ತಿದ್ದಾರೆ. ಆರೋಗ್ಯ ಇಲಾಖೆ ವೀರಪಲ್ಲಿ ಗ್ರಾಮದಲ್ಲಿ ತಾತ್ಕಾಲಿಕ ಆಸ್ಪತ್ರೆ ತೆರೆದಿದೆ.

ಮೇ 19ರಂದು ಗಂಗಮ್ಮ(70), ಮೇ 21ರಂದು ಮುನಿನಾಗಮ್ಮ(70), ಮೇ 22ರಂದು ಲಕ್ಷ್ಮಮ್ಮ(70) ಹಾಗೂ ಜೂನ್ 05ರಂದು ನರಸಿಂಹಪ್ಪ(75) ವಾಂತಿ ಭೇದಿಯಿಂದ ಬಳಲಿ ಮೃತಪಟ್ಟಿದ್ದರು. ಗ್ರಾಮದ ಚರಂಡಿಗಳಲ್ಲಿ ಕುಡಿಯುವ ನೀರಿನ ಪೈಪ್ ಅಳವಡಿಕೆಯೇ ಕಾರಣ. ಬಹುತೇಕ ಕುಡಿಯುವ ನೀರಿನ ಪೈಪ್​ಗಳನ್ನು ಚರಂಡಿಯಲ್ಲೇ ಅಳವಡಿಸಲಾಗಿದೆ. ಗ್ರಾಮದಲ್ಲಿ ಸ್ವಚ್ಛತೆ, ನೈರ್ಮಲ್ಯ ಕಾಪಾಡ್ತಿಲ್ಲವೆಂದು ಗ್ರಾಮ ಪಂಚಾಯತಿ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: 2023-24ರಲ್ಲಿ ಸರ್ಕಾರಿ ಉದ್ದಿಮೆಗಳ ಒಟ್ಟು ಲಾಭ 5 ಲಕ್ಷ ಕೋಟಿ ರೂ; ಹೊಸ ಮೈಲಿಗಲ್ಲು

ಇನ್ನು ಘಟನೆ ಸಂಬಂಧ ಮಾತನಾಡಿದ ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಸ್. ಮಹೇಶಕುಮಾರ್, ಗ್ರಾಮದಲ್ಲಿ ಬಹುತೇಕ ಕುಡಿಯುವ ನೀರಿನ ಪೈಪ್ ಗಳನ್ನು ಚರಂಡಿಯಲ್ಲಿ ಅಳವಡಿಸಿದ್ದಾರೆ. ಚರಂಡಿಯಲ್ಲೆ ಕುಡಿಯುವ ನೀರಿನ ಪೈಪ್ ಗಳನ್ನು ದುರಸ್ಥಿ ಮಾಡಿದ್ದಾರೆ. ಗ್ರಾಮದಲ್ಲಿ ಸ್ವಚ್ಛತೆ ನೈರ್ಮಲ್ಯ ಇಲ್ಲ. ಸ್ವಚ್ಚತೆ ನೈರ್ಮಲ್ಯ ಕಾಪಾಡಲು ಸ್ಥಳೀಯ ಕೋಟಗಲ್ ಗ್ರಾಮ ಪಂಚಾಯತಿಗೆ ಸೂಚಿಸಿದ್ದೇವೆ ಎಂದರು.

ಗ್ರಾಮದ ಕುಡಿಯುವ ನೀರಿನ ಮೂಲಗಳನ್ನು ಪರೀಕ್ಷೆ ಮಾಡಲಾಗಿದೆ. ಮೊದಲನೇ ಭಾರಿ ಪರೀಕ್ಷೆ ಮಾಡಿದಾಗ ಅಶುದ್ದ ನೀರು ಎಂದು ಗೊತ್ತಾಗಿದೆ. ಕುಡಿಯುವ ನೀರಿನ ಟ್ಯಾಂಕರ್​ಗಳನ್ನು ಸ್ವಚ್ಛಗೊಳಿಸಿ ಎರಡನೆ ಭಾರಿ ಪರೀಕ್ಷೆ ಮಾಡಲಾಗಿದೆ. ಎರಡನೇ ಭಾರಿ ಶುದ್ದ ನೀರು ಎಂದು ವರದಿ ಬಂದಿದೆ. ಆದರೂ ಗ್ರಾಮದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸಾರ್ವಜನಿಕರಿಗೆ ಯಾವುದೇ ಆತಂಕ ಬೇಡ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಸ್. ಮಹೇಶಕುಮಾರ್ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು