AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತರಿಂದಲೇ ಸ್ನೇಹಿತನ ಬರ್ಬರ ಕೊಲೆ: ಜೊತೆಯಲ್ಲೇ ಎಣ್ಣೆ ಪಾರ್ಟಿ ಮಾಡಿ ಕತ್ತಿಗೆ ಚೂರಿ ಹಾಕಿದ್ರು

ಗೆಳೆಯರು ಕಂಠಪೂರ್ತಿ ಎಣ್ಣೆ ಕುಡಿದು ನಂತರ ಜೊತೆಗಿದ್ದ 25 ವರ್ಷದ ಸ್ನೇಹಿತ ಮೋಹನ್ನ ಕತ್ತಿಗೆ ಚಾಕುವಿನಿಂದ ಕೊಯ್ದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸ್ನೇಹಿತರಿಂದಲೇ ಸ್ನೇಹಿತನ ಬರ್ಬರ ಕೊಲೆ: ಜೊತೆಯಲ್ಲೇ ಎಣ್ಣೆ ಪಾರ್ಟಿ ಮಾಡಿ ಕತ್ತಿಗೆ ಚೂರಿ ಹಾಕಿದ್ರು
ಸ್ನೇಹಿತರಿಂದಲೇ ಸ್ನೇಹಿತನ ಬರ್ಬರ ಕೊಲೆ: ಜೊತೆಯಲ್ಲೇ ಎಣ್ಣೆ ಪಾರ್ಟಿ ಮಾಡಿ ಕತ್ತಿಗೆ ಚೂರಿ ಹಾಕುದ್ರು
TV9 Web
| Edited By: |

Updated on:Jan 19, 2022 | 10:45 AM

Share

ಚಿಕ್ಕಬಳ್ಳಾಪುರ: ಹಗಲೆಲ್ಲ ತಮ್ಮ ಪಾಡಿಗೆ ತಮ್ಮ ತಮ್ಮ ಕೆಲಸ ಮಾಡಿಕೊಂಡು ಇರ್ತಿದ್ದವರು, ಸಂಜೆಯಾದ್ರೆ ಸಾಕು ಎಣ್ಣೆ ಹೊಡೆಯಲು ಜೊತೆಗೂಡ್ತಿದ್ರು. ಯಾವಾಗಲೂ ಎಣ್ಣೆ ಹೊಡೆಯೊಕೆ ಅಂತ ಊರ ಹೊರಗೆ ಹೊಗ್ತಿದ್ದ ಆ ಗ್ಯಾಂಗ್ ನಲ್ಲಿ, ಜ.18ರ ಸಂಜೆ ಅದೇನ್ ಆಯಿತೋ ಏನೊ.. ಎಣ್ಣೆಯ ನಶೆ ನೆತ್ತಿಗೇರುತ್ತಿದ್ದಂತೆ ಜೊತೆಗಿದ್ದ ಸ್ನೇಹಿತನ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಸೀಗೆಹಳ್ಳಿ ಗ್ರಾಮದ ಮೋಹನ್, ಪ್ರಭಾಕರ್, ಸುಮನ್, ನಂದನ್ ಎಂಬ ಆಪ್ತ ಸ್ನೇಹಿತರು ಎಣ್ಣೆ ಹೊಡೆಯಲು ಪಕ್ಕದ ಗ್ರಾಮ ಗೆಜ್ಜಿಗಾನಹಳ್ಳಿ ಬಳಿ ಇರುವ ನೀಲಗಿರಿ ತೋಪಿಗೆ ಹೋಗಿದ್ದರು. ಗೆಳೆಯರು ಕಂಠಪೂರ್ತಿ ಎಣ್ಣೆ ಕುಡಿದು ನಂತರ ಜೊತೆಗಿದ್ದ 25 ವರ್ಷದ ಸ್ನೇಹಿತ ಮೋಹನ್ನ ಕತ್ತಿಗೆ ಚಾಕುವಿನಿಂದ ಕೊಯ್ದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಕಳೆದ ಎರಡು ಮೂರು ದಿನಗಳ ಹಿಂದೆ ಪ್ರಬಾಕರ್, ಮೋಹನ್ದು ತುಂಬಾ ಆಗಿದೆ ಅವನನ್ನು ಕೊಲೆ ಮಾಡುವುದಾಗಿ ಹೇಳಿಕೊಂಡಿದ್ದ. ಅದನ್ನು ಮೋಹನ್ ತನ್ನ ಸಂಬಂಧಿ ಮನು ಬಳಿ ಹೇಳಿಕೊಂಡಿದ್ದಾನೆ, ಆದ್ರೆ ಈ ವೇಳೆ ಮನು ಸ್ನೇಹಿತರು ಎಣ್ಣೆ ಹೊಡೆದಾಗ ಒಂದು ರೀತಿ, ಎಣ್ಣೆ ಇಳಿದ ಮೇಲೆ ಇನ್ನೊಂದು ರೀತಿ ಇರ್ತಿರಿ. ಎಲ್ಲಾ ಸ್ನೇಹಿತರು ಏನೊ ತಮಾಷೆ ಮಾಡಿದ್ದಾರೆ ಅಂತ ದೈರ್ಯ ತುಂಬಿದ್ದಾನೆ. ಆದ್ರೆ ಇಂದು ಪ್ರಭಾಕರ್ ಮತ್ತವನ ಸ್ನೇಹಿತರು ಹೇಳಿದಂತೆ ಮೋಹನ್ ನ ಕೊಲೆ ಮಾಡಿದ್ದಾರೆ.

ಮೋಹನ್ ಕೊಲೆ ಮಾಡಲೆಂದೆ ಪ್ರಬಾಕರ್, ಸುಮನ್, ನಂದನ್ , ಮೋಹನ್ ನನ್ನು ನಂಬಿಸಿ ಎಣ್ಣೆ ಪಾರ್ಟಿಗೆ ಕರೆದುಕೊಂಡು ಹೋಗಿದ್ದಾರೆ. ಕಂಠಪೂರ್ತಿ ಎಣ್ಣೆ ಕುಡಿದ ಮೇಲೆ, ಮೊದಲೇ ಸ್ಕೇಚ್ ಹಾಕಿದಂತೆ ಮೋಹನ್ ನ ಕಥೆ ಮುಗಿಸಿದ್ದಾರೆ. ಇದ್ರಿಂದ ಮೋಹನ್ ಸ್ಥಳದಲ್ಲೇ ಸಾವಿನ ಮನೆ ಸೇರಿದ್ದಾನೆ. ಆರೋಪಿಗಳು ಮತ್ತೆ ಗ್ರಾಮಕ್ಕೆ ಬರಬಾರದು ಅವರಿಗೆ ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಬೇಕು ಅಂತ ಮೋಹನ್ ಸಂಬಂಧಿ ಮನು ಪೊಲೀಸರ ಬಳಿ ಮನವಿ ಮಾಡಿಕೊಂಡಿದ್ದಾರೆ.

ಯುವಕನ ಬರ್ಬರ ಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇತ್ತ ಗ್ರಾಮದಲ್ಲಿ ಕಬಡ್ಡಿ ಕ್ರಿಕೆಟ್ ನಂಥಹ ಕ್ರೀಡೆಗಳನ್ನು ಆಯೋಜಿಸಿ, ಜನ ಮೆಚ್ಚುಗೆ ಪಡೆದಿದ್ದ ಮೋಹನ್, ಸ್ವತಃ ತನ್ನ ಆಪ್ತ ಸ್ನೇಹಿತರ ಕೈಯಿಂದಲೆ ಬರ್ಬರವಾಗಿ ಹತ್ಯೆಯಾಗಿದ್ದು ಮಾತ್ರ ವಿಪರ್ಯಾಸ.

ವರದಿ: ಭೀಮಪ್ಪ ಪಾಟೀಲ, ಟಿವಿ9 ಚಿಕ್ಕಬಳ್ಳಾಪುರ

ಇದನ್ನೂ ಓದಿ: ಮಕ್ಕಳ ಶೋನಲ್ಲಿ ನೋಟ್​ ಬ್ಯಾನ್​ ಮತ್ತು ಮೋದಿ ಬಗ್ಗೆ ತಮಾಷೆ: ಖಾಸಗಿ ವಾಹಿನಿಗೆ ಕೇಂದ್ರದಿಂದ ನೋಟಿಸ್​

Published On - 9:55 am, Wed, 19 January 22

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್