AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಕೃತಿ ಪ್ರಿಯರಿಗೆ ಗುಡ್ ನ್ಯೂಸ್; ಡಿಸೆಂಬರ್ 1ರಿಂದ ವಿಶ್ವವಿಖ್ಯಾತ ಪ್ರವಾಸಿತಾಣ ನಂದಿ ಹಿಲ್ಸ್ ಪ್ರವೇಶಕ್ಕೆ ಅನುಮತಿ

Nandi Hills: ರಸ್ತೆ ಕೊಚ್ಚಿ ಹೋಗಿ ಬಂದ್ ಆಗಿದ್ದ ನಂದಿಗಿರಿಧಾಮ ಪ್ರವೇಶಕ್ಕೆ ಇದೀಗ ಅವಕಾಶ ಸಿಕ್ಕಿದೆ. ನಾಳೆಯಿಂದ ನಂದಿ ಬೆಟ್ಟಕ್ಕೆ ಪ್ರವೇಶ ಆರಂಭವಾಗುತ್ತಿದ್ದು, ಈ ಬಗ್ಗೆ ಚಿಕ್ಕಬಳ್ಳಾಫುರ ಜಿಲ್ಲಾಧಿಕಾರಿ ಲತಾ ಆರ್ ಟಿವಿ9 ಗೆ ಮಾಹಿತಿ ನೀಡಿದ್ದಾರೆ.

ಪ್ರಕೃತಿ ಪ್ರಿಯರಿಗೆ ಗುಡ್ ನ್ಯೂಸ್; ಡಿಸೆಂಬರ್ 1ರಿಂದ ವಿಶ್ವವಿಖ್ಯಾತ ಪ್ರವಾಸಿತಾಣ ನಂದಿ ಹಿಲ್ಸ್ ಪ್ರವೇಶಕ್ಕೆ ಅನುಮತಿ
ನಂದಿ ಬೆಟ್ಟ
TV9 Web
| Edited By: sandhya thejappa|

Updated on:Nov 30, 2021 | 11:05 AM

Share

ಚಿಕ್ಕಬಳ್ಳಾಪುರ: ಇದು ಪ್ರಕೃತಿ ಪ್ರಿಯರಿಗೆ ಸಿಹಿ ಸುದ್ದಿ. ರಸ್ತೆ ಕೊಚ್ಚಿ ಹೋಗಿ ಬಂದ್ ಆಗಿದ್ದ ನಂದಿಗಿರಿಧಾಮ ಪ್ರವೇಶಕ್ಕೆ ಇದೀಗ ಅವಕಾಶ ಸಿಕ್ಕಿದೆ. ನಾಳೆಯಿಂದ ನಂದಿ ಬೆಟ್ಟಕ್ಕೆ ಪ್ರವೇಶ ಆರಂಭವಾಗುತ್ತಿದ್ದು, ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್ ಟಿವಿ9 ಗೆ ಮಾಹಿತಿ ನೀಡಿದ್ದಾರೆ. ಕಳೆದ ಎರಡುವರೆ ತಿಂಗಳುಗಳ ಕಾಲ ಬೆಟ್ಟಕ್ಕೆ ಹೋಗಲು ಅವಕಾಶವಿರಲಿಲ್ಲ. ಈ ಬಗ್ಗೆ ಬಂದ್ ಆಗಿತ್ತು. ಹೀಗಾಗಿ ಪ್ರವಾಸಿಗರಿಗೆ ತೀರ ಬೇಸರವಾಗಿತ್ತು. ಆದರೆ ಜಿಲ್ಲಾಧಿಕಾರಿ ನಾಳೆಯಿಂದ ಬೆಟ್ಟಕ್ಕೆ ಹೋಗಲು ಪ್ರವೇಶಕ್ಕೆ ಅವಕಾಶ ನೀಡಲಾಗಿದೆ ಅಂತ ತಿಳಿಸಿದ್ದಾರೆ.

ವೀಕೆಂಡ್​ನಲ್ಲಿ ನಂದಿ ಬೆಟ್ಟದತ್ತ ಹೆಚ್ಚು ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಶನಿವಾರ ಮತ್ತು ಭಾನುವಾರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಬೆಟ್ಟದಲ್ಲಿ ಹೋಟೆಲ್, ರೂಮ್​ಗಳ ಬುಕಿಂಗ್ ಮಾಡಿದವರಿಗೆ ಮಾತ್ರ ಶನಿವಾರ ಭಾನುವಾರ ಅವಕಾಶ ಇದೆ ಅಂತ ಜಿಲ್ಲಾಧಿಕಾರಿ ಲತಾ ಆರ್ ತಿಳಿಸಿದ್ದಾರೆ.

ನಂದಿಗಿರಿಧಾಮ ಬೆಂಗಳೂರಿಗರ ಪಾಲಿಗೆ ವಿಕೇಂಡ್ ಹಾಟ್​ಸ್ಪಾಟ್​. ಆದರೆ ಭಾರಿ ಮಳೆಗೆ ನಂದಿ ಬೆಟ್ಟದ ರಸ್ತೆ ಮಾರ್ಗ ಬಂದ್ ಆಗಿ ಪ್ರವಾಸಿಗರ ಪಾಲಿಗೆ ನಂದಿ ಬೆಟ್ಟ ದೂರವಾಗಿತ್ತು. ಕೊಚ್ಚಿ ಹೋಗಿದ್ದ ರಸ್ತೆ ಮರು ನಿರ್ಮಾಣ ಕಾರ್ಯ ನವೆಂಬರ್ 11ಕ್ಕೆ ಮುಕ್ತಾಯವಾಗಿತ್ತು.

ಆಗಸ್ಟ್ 24ರ ರಾತ್ರಿ ನಂದಿ ಬೆಟ್ಟದ ಪಕ್ಕದ ಬ್ರಹ್ಮಗಿರಿ ಬೆಟ್ಟದಲ್ಲಿ ಗುಡ್ಡ ಕುಸಿತವಾಗಿ, ನಂದಿಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೊಚ್ಚಿ ಹೋಗಿತ್ತು. ಅಂದಿನಿಂದ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ಬಂದ್ ಆಗಿತ್ತು. ಇದರಿಂದ ರಾಜ್ಯ ಸರ್ಕಾರ 80 ಲಕ್ಷ ರೂ. ವೆಚ್ಚ ಮಾಡಿ, ಕೊಚ್ಚಿ ಹೋದ ರಸ್ತೆಯ ಮರು ನಿರ್ಮಾಣ ಕಾರ್ಯ ಮಾಡಿದೆ. ನಾಳೆಯಿಂದ ಪ್ರವಾಸಿಗರು ನಂದಿ ಬೆಟ್ಟಕ್ಕೆ ಆಗಮಿಸಬಹುದು.

ಇದನ್ನೂ ಓದಿ

ಎರಡು ದಿನದಲ್ಲಿ ಮದುವೆಯಿಟ್ಟುಕೊಂಡು ಫೇಸ್​ಬುಕ್​ನಲ್ಲಿ​ ಅವಹೇಳನಕಾರಿ ಪೋಸ್ಟ್; ವರನ ವಿರುದ್ಧ ದೂರು ದಾಖಲು

ಹಾವೇರಿ: ಕೊಬ್ಬರಿ ಹೋರಿ ಬೆದರಿಸುವ ಹಬ್ಬದಲ್ಲಿ ಅವಗಢ; ಹೋರಿ ದಾಳಿಯಿಂದ 9 ಜನ ಆಸ್ಪತ್ರೆಗೆ ದಾಖಲು

Published On - 9:22 am, Tue, 30 November 21

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!