AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯ್ಯೂಟೂಬೇ ಗುರು: ಬಿಸಿಲಿನ ಅಬ್ಬರದ ನಡುವೆ ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್​​ ಬೆಳೆದ ರೈತ!

ಚಿಕ್ಕಬಳ್ಳಾಪುರದ ರಯತನೋರ್ವ ಯೂಟ್ಯೂಬ್ ನೆರವಿನಿಂದ ಬಿಸಿಲಿನ ವಾತಾವರಣದಲ್ಲೂ ಕಾಶ್ಮೀರಿ ಸೇಬು ಬೆಳೆದು ಗಮನ ಸೆಳೆದಿದ್ದಾರೆ. ಟೊಮ್ಯಾಟೊ ಕೃಷಿಯಲ್ಲಿ ನಷ್ಟ ಅನುಭವಿಸಿದ ನಂತರ, ಅವರು ಒಂದು ಎಕರೆ ಜಮೀನಿನಲ್ಲಿ ಇಸ್ರೇಲ್ ತಳಿಯ 400 ಸೇಬು ಗಿಡಗಳನ್ನು ನೆಟ್ಟು ಯಶಸ್ವಿಯಾಗಿದ್ದಾರೆ. ಪ್ರತಿ ಗಿಡದಲ್ಲಿ 10 ಕೆಜಿ ಫಸಲು ಬಂದಿದ್ದು, ಇದು ಕೃಷಿಯಲ್ಲಿ ನವೀನ ಪ್ರಯೋಗಗಳಿಗೆ ಉತ್ತಮ ಉದಾಹರಣೆ ಎಂಬಂತಿದೆ.

ಯ್ಯೂಟೂಬೇ ಗುರು: ಬಿಸಿಲಿನ ಅಬ್ಬರದ ನಡುವೆ ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್​​ ಬೆಳೆದ ರೈತ!
ಬೆಳೆದ ಬೆಳೆ ಜೊತೆ ರೈತImage Credit source: Tv9 Kannada
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: May 10, 2026 | 7:53 PM

Share

ಚಿಕ್ಕಮಗಳೂರು, ಮೇ 10: ಸೇಬು ಅಂದ ತಕ್ಷಣ ನಮಗೆ ನೆನಪಾಗೋದೇ ಕಾಶ್ಮೀರ. ಯಾಕೆಂದರೆ ಶೀತವಲಯದ ಪ್ರಮುಖ ಬೆಳೆಗಳಲ್ಲೊಂದಾದ ಸೇಬನ್ನು ಭಾರದಲ್ಲಿ ಹೆಚ್ಚಾಗಿ ಬೆಳೆಯುವ ರಾಜ್ಯಗಳೆಂದರೆ ಅವು ಹಿಮಾಚಲ ಪ್ರದೇಶ ಮತ್ತು ಜಮ್ಮು ಕಾಶ್ಮೀರ. ಆದರೆ ಜನರ ಈ ಅನಿಸಿಕೆಯನ್ನು ಸುಳ್ಳು ಮಾಡುವ ನಿಟ್ಟಿನಲ್ಲಿ ನಮ್ಮದೇ ಕರ್ನಾಟಕದ ರೈತರೊಬ್ಬರು ಗಮನ ಸೆಳೆದಿದ್ದಾರೆ. ರಾಜಧಾನಿ ಬೆಂಗಳೂರಿನ ಪಕ್ಕವೇ ಕಾಶ್ಮೀರಿ ಆ್ಯಪಲ್​​ ಬೆಳೆ ಬೆಳೆದು ಸೈ ಎನಿಸಿಕೊಂಡಿದ್ದಾರೆ.

ಮುಖ್ಯಾಂಶಗಳು

  • ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್​​ ಬೆಳೆದ ರೈತ
  • ಅಡ್ಡಗಲ್ಲದ ವ್ಯಕ್ತಿಯೋರ್ವರಿಂದ ವಿಶಿಷ್ಠ ಸಾಧನೆ
  • ಬಿಸಲಿನ ಅಬ್ಬರದ ನಡುವೆಯೂ ಕೈ ಹಿಡಿದ ಬೆಳೆ

ಚಿಕ್ಕಬಳ್ಳಾಪುರ ತಾಲೂಕಿನ ಅಡ್ಡಗಲ್ಲ ಗ್ರಾಮದ ರೈತ ಅನಿಲ್ ಎನ್ನುವವರು ತನ್ನ ಒಂದು ಎಕರೆ ಜಮೀನಿನಲ್ಲಿ ಸೇಬು ಬೆಳೆ ಬೆಳೆದಿದ್ದಾರೆ. ಈ ಜಮೀನಿಲ್ಲಿ ಟೊಮ್ಯಾಟೋ ಸೇರಿದಂತೆ ಇತರ ತರಕಾರಿ ಬೆಳೆದಿದ್ದ ಅನಿಲ್,​​ ಈ ಹಿಂದೆ ಸಾಕಷ್ಟು ಬಾರಿ ಕೈಸುಟ್ಟುಕೊಂಡಿದ್ದರು. ಹೀಗಾಗಿ ಇದೇ ಬೆಳೆಯನ್ನು ಮತ್ತೆ ಬೆಳೆದು ನಷ್ಟ ಅನುಭವಿಸುವ ಬದಲು ಹೊಸತೇನನ್ನಾದರೂ ಮಾಡಬೇಕೆಂದು ಯೋಚಿಸಿದ್ದಾರೆ. ಅದರಂತೆ ಹೊಲದಲ್ಲಿ ಅವರು 400 ಆ್ಯಪಲ್​​ ಗಿಡಗಳನ್ನು ಹಾಕಿದ್ದು, ಅವುಗಳಲ್ಲೀಗ ಭರ್ಜರಿ ಫಸಲು ಬಂದಿದೆ.

ಇದನ್ನೂ ಓದಿ: ರಣಬಿಸಿಲಲ್ಲೂ ನಳನಳಿಸಿದ ‘ದಿಲ್ ಖುಷ್’; ವಿಶಿಷ್ಟ ತಳಿಯ ದ್ರಾಕ್ಷಿಗೆ ಭಾರೀ ಡಿಮ್ಯಾಂಡ್

ಯ್ಯೂಟೂಬೇ ಗುರು!

ಅಷ್ಟಕ್ಕೂ ಸೇಬು ಬೆಳೆ ಬೆಳೆಯೋದು ಹೇಗೆಂದು ಯೂಟ್ಯೂಬ್​​ ನೋಡಿ ರೈತ ಅನಿಲ್​​ ಗಿಡಗಳನ್ನು ಹಾಕಿದ್ದರು. ಜೊತೆಗೆ ಅಲ್ಲಿ ಸಿಕ್ಕ ಮಾಹಿತಿಯನ್ನು ಅಧರಿಸಿ ತುಮಕೂರು ಮೂಲಕ ಕೃಷಿ ಪದವಿಧರ ಶಶಿಕುಮಾರ್ ಮಾರ್ಗದರ್ಶನದಲ್ಲಿ ಆ್ಯಪಲ್​​ ಬೆಳೆದಿದ್ದಾರೆ. ಇಸ್ರೇಲ್ ಮೂಲದ ತಳಿಯ ಗಿಡಗಳನ್ನು ತರಿಸಿ ಪ್ರಯೋಗ ಮಾಡಿದ್ದು,  ಸೇಬಿನ ಫಸಲು ಉತ್ತಮವಾಗಿ ಬಂದಿದೆ. ಸದ್ಯ ಒಂದು ಗಿಡದಲ್ಲಿ ಹತ್ತು ಕೆಜಿಯಷ್ಟು ಬೆಳೆ ಬಂದಿದ್ದು, ಹಣ್ಣುಗಳನ್ನು ವರ್ತಕರಿಗೆ ಕೊಡುವುದರ ಬದಲು ಸಾರ್ವಜನಿಕರು ತೋಟಕ್ಕೆ ಬಂದು ಮನಸ್ಸೋ ಇಚ್ಚೆ ಕಿತ್ತುಕೊಂಡು ಹಣ ನೀಡುವಂತೆ ರೈತ ಅನಿಲ್​ ಮನವಿ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ
'ಉಚಿತ ವಿದ್ಯುತ್' ಯೋಜನೆಗೆ ಸಹಿ ಹಾಕಿದ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್
'ಉಚಿತ ವಿದ್ಯುತ್' ಯೋಜನೆಗೆ ಸಹಿ ಹಾಕಿದ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್