AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur: ಬಾಲಕಿಯರ ವಸತಿ ನಿಲಯಕ್ಕೆ ಬೀದಿ ಕಾಮಣ್ಣರ ಕಾಟ! ಹಾಸ್ಟೆಲ್ ಸಿಬ್ಬಂದಿಯ ವಿರುದ್ದ ಸ್ಥಳೀಯರ ಪ್ರತಿಭಟನೆ

ನಿರಾಶ್ರಿತರ ಮಕ್ಕಳು, ವಿದ್ಯಾರ್ಥಿನಿಯರು, ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿಯೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯಡಿ ಪ್ರತಿಷ್ಠಿತ ವಸತಿ ಶಾಲೆಯೊಂದು ಇದೆ, ಆದರೆ, ಅಲ್ಲಿರುವ ಬಾಲಕಿಯರಿಗೆ ಸೂಕ್ತ ರಕ್ಷಣೆಯಿಂದ ಹಿಡಿದು ಮೂಲಭೂತ ಸೌಕರ್ಯಗಳಿಲ್ಲ. ಕೆಲವು ಪುಂಡರುಗಳು ಲೇಡಿಸ್ ಹಾಸ್ಟೆಲ್​ನ್ನು ಲಾಡ್ಜಿಂಗ್ ಮಾಡಿಕೊಂಡಿರುವ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದೆ.

Chikkaballapur: ಬಾಲಕಿಯರ ವಸತಿ ನಿಲಯಕ್ಕೆ ಬೀದಿ ಕಾಮಣ್ಣರ ಕಾಟ! ಹಾಸ್ಟೆಲ್ ಸಿಬ್ಬಂದಿಯ ವಿರುದ್ದ ಸ್ಥಳೀಯರ ಪ್ರತಿಭಟನೆ
ಶಾಲೆ ಮುಖ್ಯಶಿಕ್ಷಕಿ, ಸ್ಥಳೀಯರ ಪ್ರತಿಭಟನೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jun 25, 2023 | 7:26 AM

Share

ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ(Gudibande) ತಾಲೂಕು ಬೀಜಗಾನಹಳ್ಳಿ ಕಸ್ ಬಳಿ ಕಸ್ತೂರಿಬಾ ವಸತಿ ಶಾಲೆಯಿದೆ. ರಾಷ್ಟ್ರೀಯ ಹೆದ್ದಾರಿ 44ಕ್ಕೆ ಹೊಂದಿಕೊಂಡಿರುವ ಈ ವಸತಿ ಶಾಲೆ(School), ವಿದ್ಯಾಭ್ಯಾಸಕ್ಕೆ ಹೆಸರುವಾಸಿಯಾಗುವುದರ ಬದಲು, ಅನೈತಿಕ ಚಟುವಟಿಕೆ, ಅವ್ಯವಹಾರ, ಮೂಲಭೂತ ಸೌಕರ್ಯಗಳ ಕೊರತೆ ಸೇರಿ ಪುಂಡ ಪೊಕರಿಗಳ ಹಾವಳಿಗೆ ಕುಖ್ಯಾತಿಯಾಗಿದೆ. ಕೆಲವು ದಿನಗಳ ಹಿಂದೆ ಕೆಲವು ಯುವಕರು ಇಲ್ಲಿರುವ ಲೇಡಿಸ್ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ರಾಸಲೀಲೆ ಮಾಡಿರುವ ವಿಡಿಯೊಗಳು ಹರಿದಾಡಿ, ಪೋಷಕರಲ್ಲಿ ದೊಡ್ಡ ಆತಂಕ ಹುಟ್ಟು ಹಾಕುವಂತೆ ಮಾಡಿತ್ತು. ಆದರೂ ಕೂಡ ಕಸ್ತೂರಿಬಾ ವಸತಿ ಶಾಲೆಯಲ್ಲಿ ಯಾವುದೇ ಸಮಸ್ಯೆ ಬಗೆಹರಿದಿಲ್ಲ. ಇದರಿಂದ ಸ್ಥಳೀಯರು, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಾಲೆಯ ಶಿಕ್ಷಕರು ಹಾಗೂ ವಾರ್ಡನ್ ವಿರುದ್ದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಶಾಲೆಯಲ್ಲಿ ಯಾವುದೇ ಸಮಸ್ಯೆಯಿಲ್ಲವೆಂದ ಮುಖ್ಯಶಿಕ್ಷಕಿ

ಇನ್ನು ಕಸ್ತೂರಿಬಾ ವಸತಿ ಶಾಲೆ ನೇರವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿದೆ. ಶಿಕ್ಷಕರು ವಾರ್ಡನ್​ಗಳು ರಾತ್ರಿಯಾದರೆ, ವಸತಿ ಶಾಲೆಯಲ್ಲಿ ಇರಲ್ಲ. ಶಾಲೆ ಹಾಗೂ ಹಾಸ್ಟೆಲ್ ಸುತ್ತ ಸ್ಮಶಾನ, ಅರಣ್ಯ ಇದೆ. ಸೂಕ್ತ ಕಂಪೌಂಡ್ ವ್ಯವಸ್ಥೆಯಿಲ್ಲ. ಯಾರು ಬೇಕಾದರೂ ಬರಬಹುದು. ಇಲ್ಲಿ ಹೇಳುವವರು, ಕೇಳುವವರು ಯಾರು ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಶಾಲೆಯ ಮುಖ್ಯಶಿಕ್ಷಕಿ ಮಂಜುಳಾ ಅವರನ್ನು ಕೇಳಿದರೆ, ಎಲ್ಲವೂ ಸರಿಯಾಗಿಯೇ ಇದೆ ಎನ್ನುತ್ತಿದ್ದಾರೆ.

ಇದನ್ನೂ ಓದಿ:10 ವರ್ಷ ಹಿಂದೆಯೇ ಶಿಕ್ಷಕರಿಗಾಗಿ ಹೈಟೆಕ್ ಗುರು ಭವನ ನಿರ್ಮಿಸಿದರು! ಆದರೆ ಅಲ್ಲಿ ಯಾರೂ ವಾಸಿಸುತ್ತಿಲ್ಲ, ಶಿಕ್ಷಣಾಧಿಕಾರಿಗಳು ಮಾತ್ರ ನಿದ್ರಿಸುತ್ತಿದ್ದಾರೆ!

ಒಟ್ಟಿನಲ್ಲಿ ಕಡು ಬಡವರ ಮಕ್ಕಳ ವಿದ್ಯಾಬ್ಯಾಸಕ್ಕೆ ಅನುಕೂಲವಾಗಲಿ ಎಂದು ರಾಜ್ಯ ಸರ್ಕಾರ ಸರ್ವ ಶಿಕ್ಷಣ ಅಭಿಯಾನದಡಿ ನೇರವಾಗಿ ವಸತಿ ಶಾಲೆ ಆರಂಭಿಸಿದರೆ. ನಿಲಯ ಪಾಲಕರು, ಶಿಕ್ಷಕರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಲಕ್ಷ್ಯದಿಂದ ಪ್ರತಿಷ್ಠಿತ ಸರ್ಕಾರಿ ಕಸ್ತೂರಿಬಾ ವಸತಿ ಶಾಲೆ ಬೇರೆ ಬೇರೆ ಕಾರಣಗಳಿಗೆ ಕುಖ್ಯಾತಿಯಾಗುತ್ತಿರುವುದು ಮಾತ್ರ ವಿಪರ್ಯಾಸವಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್