AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡಿ ತೋಡುವಾಗ ದೇವರ ವಿಗ್ರಹ ಪತ್ತೆ! ಜಮೀನಿನಲ್ಲಿ ದೊರೆತ ಕಲ್ಲಿನ ವಿಗ್ರಹಗಳ ಬಗ್ಗೆ ಗ್ರಾಮಸ್ಥರಿಗೆ ಕುತೂಹಲ! ಪೂಜೆ ಪುನಸ್ಕಾರ

ಈ ವಿಗ್ರಹವು ಏಕಶಿಲೆ ಕಲ್ಲು ಬಂಡೆಯಲ್ಲಿ ಕೆತ್ತಲಾಗಿದ್ದು, ಜೋಡಿಯಾಗಿ ಒಂದೆಡೆ ಹರಿನಾರಾಯಣ, ಮತ್ತೊಂದೆಡೆ ಲಕ್ಷ್ಮಿ ವಿಗ್ರಹಗಳಿವೆ. ನೋಡಲು ಪುರಾತನ ವಿಗ್ರಹಗಳು ಇದ್ದಂತೆ ಕಾಣ್ತಿದೆ.

ಗುಂಡಿ ತೋಡುವಾಗ ದೇವರ ವಿಗ್ರಹ ಪತ್ತೆ! ಜಮೀನಿನಲ್ಲಿ ದೊರೆತ ಕಲ್ಲಿನ ವಿಗ್ರಹಗಳ ಬಗ್ಗೆ ಗ್ರಾಮಸ್ಥರಿಗೆ ಕುತೂಹಲ! ಪೂಜೆ ಪುನಸ್ಕಾರ
ಗುಂಡಿ ತೋಡುವಾಗ ದೇವರ ವಿಗ್ರಹಗಳು ಪತ್ತೆ! ಜಮೀನಿನಲ್ಲಿ ದೊರೆತ ಕಲ್ಲಿನ ವಿಗ್ರಹಗಳ ಬಗ್ಗೆ ಗ್ರಾಮಸ್ಥರಿಗೆ ಕುತೂಹಲ! ಪೂಜೆ ಪುನಸ್ಕಾರ
TV9 Web
| Edited By: ಸಾಧು ಶ್ರೀನಾಥ್​|

Updated on: Oct 11, 2022 | 6:07 PM

Share

ನೂತನ ಮನೆ ನಿರ್ಮಾಣ ಮಾಡಿ, ಮನೆಗೆ ವಿದ್ಯುತ್​ ಸಂಪರ್ಕಕ್ಕಾಗಿ ಅರ್ತಿಂಗ್ ಹಾಕಲು ಗುಂಡಿ ತೋಡುತ್ತಿದ್ದಾಗ ಕಲ್ಲಿನ ಬಂಡೆಯೊಂದು ಸಿಕ್ಕಿದೆ. ಅದನ್ನು ಸ್ವಲ್ಪ ಹೊರಳಿಸಿದಾಗ… ಅಲ್ಲಿ ದೇವರ ವಿಗ್ರಹಗಳ ಕೆತ್ತನೆ (Stone God Statue) ಪತ್ತೆಯಾಗಿದೆ… ಜನ ಮುಗಿಬಿದ್ದು ಪೂಜೆ ಪುನಸ್ಕಾರ ಮಾಡಿ ಕುತೂಹಲ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟಕ್ಕೂ ಅದೆಲ್ಲಿ ಅಂತೀರಾ? ಈ ವರದಿ ನೋಡಿ

ಇದು ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಗೌರಿಬಿದನೂರು (Gauribidanur) ತಾಲೂಕಿನ ಹೊನ್ನಪ್ಪನಹಳ್ಳಿ ಗ್ರಾಮ. ಗ್ರಾಮದ ಶಿವಕುಮಾರ್ ಎನ್ನುವವರು ತಮ್ಮ ಜಮೀನಿನಲ್ಲಿ ನೂತನವಾಗಿ ಮನೆ ನಿರ್ಮಾಣ ಮಾಡಿದ್ದು, ಮನೆಗೆ ಅರ್ತಿಂಗ್ ಹಾಕಲು ಗೋಡೆ ಪಕ್ಕದಲ್ಲೆ ಗುಂಡಿ ತೆಗೆಸುತ್ತಿದ್ದರು. ಆದ್ರೆ ಕಲ್ಲು ಬಂಡೆಯೊಂದು ಪತ್ತೆಯಾಗಿದ್ದು ಅದನ್ನು ಮೇಲೆತ್ತಿ ನೋಡಿದರೆ… ಅದರಲ್ಲಿ ಹರಿನಾರಾಯಣ ಹಾಗೂ ಲಕ್ಷ್ಮಿ ವಿಗ್ರಹಗಳ ಕೆತ್ತನೆ ಫಳಫಳ ಹೊಳೆದಿದೆ. ಇದ್ರಿಂದ ಗಾಬರಿ ಹಾಗೂ ಕುತೂಹಲ ಒಟ್ಟಿಗೇ ಉಂಟಾಗಿ, ಗ್ರಾಮಸ್ಥರಿಗೆ ಮಾಹಿತಿ ಮುಟ್ಟಿಸಿದ್ದಾರೆ.

ಇನ್ನು ಶಿವಕುಮಾರ್ ಮನೆಯ ಬಳಿ ಜಮೀನಿನಲ್ಲಿ, ಹರಿನಾರಾಯಣ ಹಾಗೂ ಲಕ್ಷ್ಮಿ ಕಲ್ಲಿನ ವಿಗ್ರಹಗಳು ಪತ್ತೆಯಾಗುತ್ತಿದ್ದಂತೆ ಗ್ರಾಮಸ್ಥರಿಗೆ ಅದೇನೊ ಕುತೂಹಲ, ಭಕ್ತಿಭಾವ. ಮಹಿಳೆಯರಂತೂ ಮುಗಿಬಿದ್ದು ಪೂಜಾ ಸಾಮಾಗ್ರಿಗಳ ಜೊತೆ ಸ್ಥಳಕ್ಕೆ ಆಗಮಿಸಿ ಪೂಜೆ ಪುನಸ್ಕಾರ ಮಾಡಿ ಭಕ್ತಿ ಮೆರೆಯುತ್ತಿದ್ದಾರೆ.

ಈ ವಿಗ್ರಹವು ಏಕಶಿಲೆ ಕಲ್ಲು ಬಂಡೆಯಲ್ಲಿ ಕೆತ್ತಲಾಗಿದ್ದು, ಜೋಡಿಯಾಗಿ ಒಂದೆಡೆ ಹರಿನಾರಾಯಣ, ಮತ್ತೊಂದೆಡೆ ಲಕ್ಷ್ಮಿ ವಿಗ್ರಹಗಳಿವೆ. ನೋಡಲು ಪುರಾತನ ವಿಗ್ರಹಗಳು ಇದ್ದಂತೆ ಕಾಣ್ತಿದೆ. ಇದ್ರಿಂದ ಪುರಾತತ್ವ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದರೆ ಅಸಲಿ ಸತ್ಯ ಏನು, ಯಾವ ಕಾಲದ್ದು ಈ ವಿಗ್ರಹ ಅಂತಾ ಗೊತ್ತಾಗುತ್ತೆ. (ಭೀಮಪ್ಪ ಪಾಟೀಲ, ಟಿವಿ9, ಚಿಕ್ಕಬಳ್ಳಾಪುರ)

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ