AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗೇಪಲ್ಲಿ ಶಿಕ್ಷಕ ದಂಪತಿಯ ಮನೆಯಲ್ಲಿ ಹಾಡಹಗಲೆ ಕಳ್ಳತನ, 4 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮಂಗಮಾಯ

ಮುನಿರಾಜು-ಭಾಗ್ಯಮ್ಮ ಇಬ್ಬರೂ ಶಿಕ್ಷಕರು. ಅವರು ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆ ಮೊನ್ನೆ ಮಧ್ಯಾಹ್ನ ಮನೆಯಲ್ಲಿ ಯಾರೂ ಇರಲಿಲ್ಲ. ದಂಪತಿಯ ಮಕ್ಕಳು ಸಹ ಶಾಲೆಗೆ ಹೋಗಿದ್ದರು. ಇದನ್ನು ಗಮನಿಸಿದ ಕಳ್ಳರು... ಕಿಟಕಿಯ ಮೂಲಕ ಮನೆಯ ಒಳಗೆ ನುಗ್ಗಿ ಕಳ್ಳತನ ಮಾಡಿದ್ದಾರೆ.

ಬಾಗೇಪಲ್ಲಿ ಶಿಕ್ಷಕ ದಂಪತಿಯ ಮನೆಯಲ್ಲಿ ಹಾಡಹಗಲೆ ಕಳ್ಳತನ, 4 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮಂಗಮಾಯ
ಬಾಗೇಪಲ್ಲಿ ಶಿಕ್ಷಕ ದಂಪತಿಯ ಮನೆಯಲ್ಲಿ ಕಳ್ಳತನ
TV9 Web
| Edited By: ಸಾಧು ಶ್ರೀನಾಥ್​|

Updated on: Jan 28, 2023 | 1:59 PM

Share

ಚಿಕ್ಕಬಳ್ಳಾಪುರ: ಸರ್ಕಾರಿ ಶಾಲಾ ಶಿಕ್ಷಕ ದಂಪತಿಯ ಮನೆಯ ಮೇಲೆ ಕಣ್ಣು ಹಾಕಿದ ಕಳ್ಳರು, ಹಾಡಹಗಲೆ ಮನೆಗೆ ನುಗ್ಗಿ ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು (Gold Ornaments) ಕದ್ದು ಪರಾರಿಯಾಗಿದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದ 21 ನೇ ವಾರ್ಡ್ ನಿವಾಸಿ ಮುನಿರಾಜು ಆರ್.ವಿ. ಹಾಗೂ ಭಾಗ್ಯಮ್ಮ ಅನ್ನೊ ಶಿಕ್ಷಕ ದಂಪತಿಯ (Teacher couple) ಮನೆಯಲ್ಲಿ ಕಳ್ಳತನವಾಗಿದೆ (House Theft). ಶಿಕ್ಷಕ ಮುನಿರಾಜು ಪ್ರಸ್ತುತ ಬಾಗೇಪಲ್ಲಿಯಲ್ಲಿ (Bagepalli) ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಬಿ ಐ ಇ ಆರ್ ಟಿ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಮುನಿರಾಜು ಪತ್ನಿ ಭಾಗ್ಯಮ್ಮ ಸಹ ಶಿಕ್ಷಕಿಯಾಗಿದ್ದು, ಬಾಗೇಪಲ್ಲಿ ತಾಲೂಕು ಮಿಟ್ಟೇಮರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಬಾಗೇಪಲ್ಲಿ ಶಿಕ್ಷಕ ದಂಪತಿಯ ಮನೆಯಲ್ಲಿ ಕಳ್ಳತನ ಆಗಿದ್ದು ಹೇಗೆ?

ಮುನಿರಾಜು ಆರ್.ವಿ. ಹಾಗೂ ಭಾಗ್ಯಮ್ಮ ಇಬ್ಬರೂ ಶಿಕ್ಷಕರು. ಅವರು ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆ, ಮೊನ್ನೆ ಮಧ್ಯಾಹ್ನ ಮನೆಯಲ್ಲಿ ಯಾರೂ ಇರಲಿಲ್ಲ. ದಂಪತಿಯ ಮಕ್ಕಳೂ ಸಹ ಶಾಲೆಗೆ ಹೋಗಿದ್ದರು. ಇದನ್ನು ಗಮನಿಸಿದ ಕಳ್ಳರು… ದಂಪತಿಯ ಮನೆಯ ಕಿಟಕಿ ಮೂಲಕ ಮನೆಯೊಳಗೆ ನುಸುಳಿ ಕಳ್ಳತನ ಮಾಡಿದ್ದಾರೆ.

ಮುನಿರಾಜು ಆರ್.ವಿ ಹಾಗೂ ಭಾಗ್ಯಮ್ಮ ದಂಪತಿಯ ಮನೆಯಲ್ಲಿ ಏನೇನು ಕಳ್ಳತನವಾಗಿದೆ:

ಮುನಿರಾಜು ಆರ್.ವಿ ಹಾಗೂ ಭಾಗ್ಯಮ್ಮ ದಂಪತಿಯ ಮನೆಯ ರೂಮಿನ ಬೀರುವಿನಲ್ಲಿದ್ದ ಬೀಗಗಳನ್ನು ತೆಗೆದುಕೊಂಡು ಬೀರುವಿನಲ್ಲಿಟ್ಟಿದ್ದ 1) ಸುಮಾರು 40 ಗ್ರಾಂ ತೂಕದ ಬಿಳಿಕಲ್ಲಿನ ಕತ್ತಿನ ನಕ್ಲೇಸ್,  2) ಸುಮಾರು 40 ಗ್ರಾಂ ತೂಕದ ಬಂಗಾರದ ಹಾರ,  3) ಸುಮಾರು 15 ಗ್ರಾಂ ತೂಕದ ಗಂಡಸಿನ ಬಂಗಾರದ ಕತ್ತಿನ ಚೈನ್,  4) ಸುಮಾರು 20 ಗ್ರಾಂ ತೂಕದ ಹೆಂಗಸಿನ ಬಂಗಾರದ ಕತ್ತಿನ ಚೈನ್,  5) ಸುಮಾರು 5 ಗ್ರಾಂ ತೂಕದ ಹಸಿರು ಕಲ್ಲಿನ ಬಂಗಾರದ ಉಂಗುರ ಒಟ್ಟು ಅಂದಾಜು 4 ಲಕ್ಷ ಮೌಲ್ಯದ 120 ಗ್ರಾಂ ತೂಕದ ಬಂಗಾರದ ಒಡವೆಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.

ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಕಳ್ಳರು ಎಸ್ಕೇಪ್ ಆಗಿರುವ ಬಗ್ಗೆ ಶಿಕ್ಷಕ ಮುನಿರಾಜು ಬಾಗೇಪಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಐಪಿಸಿ ಸೇಕ್ಷನ್ ಕಲಂ 380, 454 ರಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಿದ್ದಾರೆ.

ವರದಿ: ಭೀಮಪ್ಪ ಪಾಟೀಲ, ಟಿವಿ 9, ಚಿಕ್ಕಬಳ್ಳಾಪುರ 

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು