AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗೇಪಲ್ಲಿ ಶಿಕ್ಷಕ ದಂಪತಿಯ ಮನೆಯಲ್ಲಿ ಹಾಡಹಗಲೆ ಕಳ್ಳತನ, 4 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮಂಗಮಾಯ

ಮುನಿರಾಜು-ಭಾಗ್ಯಮ್ಮ ಇಬ್ಬರೂ ಶಿಕ್ಷಕರು. ಅವರು ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆ ಮೊನ್ನೆ ಮಧ್ಯಾಹ್ನ ಮನೆಯಲ್ಲಿ ಯಾರೂ ಇರಲಿಲ್ಲ. ದಂಪತಿಯ ಮಕ್ಕಳು ಸಹ ಶಾಲೆಗೆ ಹೋಗಿದ್ದರು. ಇದನ್ನು ಗಮನಿಸಿದ ಕಳ್ಳರು... ಕಿಟಕಿಯ ಮೂಲಕ ಮನೆಯ ಒಳಗೆ ನುಗ್ಗಿ ಕಳ್ಳತನ ಮಾಡಿದ್ದಾರೆ.

ಬಾಗೇಪಲ್ಲಿ ಶಿಕ್ಷಕ ದಂಪತಿಯ ಮನೆಯಲ್ಲಿ ಹಾಡಹಗಲೆ ಕಳ್ಳತನ, 4 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮಂಗಮಾಯ
ಬಾಗೇಪಲ್ಲಿ ಶಿಕ್ಷಕ ದಂಪತಿಯ ಮನೆಯಲ್ಲಿ ಕಳ್ಳತನ
TV9 Web
| Updated By: ಸಾಧು ಶ್ರೀನಾಥ್​|

Updated on: Jan 28, 2023 | 1:59 PM

Share

ಚಿಕ್ಕಬಳ್ಳಾಪುರ: ಸರ್ಕಾರಿ ಶಾಲಾ ಶಿಕ್ಷಕ ದಂಪತಿಯ ಮನೆಯ ಮೇಲೆ ಕಣ್ಣು ಹಾಕಿದ ಕಳ್ಳರು, ಹಾಡಹಗಲೆ ಮನೆಗೆ ನುಗ್ಗಿ ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು (Gold Ornaments) ಕದ್ದು ಪರಾರಿಯಾಗಿದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದ 21 ನೇ ವಾರ್ಡ್ ನಿವಾಸಿ ಮುನಿರಾಜು ಆರ್.ವಿ. ಹಾಗೂ ಭಾಗ್ಯಮ್ಮ ಅನ್ನೊ ಶಿಕ್ಷಕ ದಂಪತಿಯ (Teacher couple) ಮನೆಯಲ್ಲಿ ಕಳ್ಳತನವಾಗಿದೆ (House Theft). ಶಿಕ್ಷಕ ಮುನಿರಾಜು ಪ್ರಸ್ತುತ ಬಾಗೇಪಲ್ಲಿಯಲ್ಲಿ (Bagepalli) ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಬಿ ಐ ಇ ಆರ್ ಟಿ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಮುನಿರಾಜು ಪತ್ನಿ ಭಾಗ್ಯಮ್ಮ ಸಹ ಶಿಕ್ಷಕಿಯಾಗಿದ್ದು, ಬಾಗೇಪಲ್ಲಿ ತಾಲೂಕು ಮಿಟ್ಟೇಮರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಬಾಗೇಪಲ್ಲಿ ಶಿಕ್ಷಕ ದಂಪತಿಯ ಮನೆಯಲ್ಲಿ ಕಳ್ಳತನ ಆಗಿದ್ದು ಹೇಗೆ?

ಮುನಿರಾಜು ಆರ್.ವಿ. ಹಾಗೂ ಭಾಗ್ಯಮ್ಮ ಇಬ್ಬರೂ ಶಿಕ್ಷಕರು. ಅವರು ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆ, ಮೊನ್ನೆ ಮಧ್ಯಾಹ್ನ ಮನೆಯಲ್ಲಿ ಯಾರೂ ಇರಲಿಲ್ಲ. ದಂಪತಿಯ ಮಕ್ಕಳೂ ಸಹ ಶಾಲೆಗೆ ಹೋಗಿದ್ದರು. ಇದನ್ನು ಗಮನಿಸಿದ ಕಳ್ಳರು… ದಂಪತಿಯ ಮನೆಯ ಕಿಟಕಿ ಮೂಲಕ ಮನೆಯೊಳಗೆ ನುಸುಳಿ ಕಳ್ಳತನ ಮಾಡಿದ್ದಾರೆ.

ಮುನಿರಾಜು ಆರ್.ವಿ ಹಾಗೂ ಭಾಗ್ಯಮ್ಮ ದಂಪತಿಯ ಮನೆಯಲ್ಲಿ ಏನೇನು ಕಳ್ಳತನವಾಗಿದೆ:

ಮುನಿರಾಜು ಆರ್.ವಿ ಹಾಗೂ ಭಾಗ್ಯಮ್ಮ ದಂಪತಿಯ ಮನೆಯ ರೂಮಿನ ಬೀರುವಿನಲ್ಲಿದ್ದ ಬೀಗಗಳನ್ನು ತೆಗೆದುಕೊಂಡು ಬೀರುವಿನಲ್ಲಿಟ್ಟಿದ್ದ 1) ಸುಮಾರು 40 ಗ್ರಾಂ ತೂಕದ ಬಿಳಿಕಲ್ಲಿನ ಕತ್ತಿನ ನಕ್ಲೇಸ್,  2) ಸುಮಾರು 40 ಗ್ರಾಂ ತೂಕದ ಬಂಗಾರದ ಹಾರ,  3) ಸುಮಾರು 15 ಗ್ರಾಂ ತೂಕದ ಗಂಡಸಿನ ಬಂಗಾರದ ಕತ್ತಿನ ಚೈನ್,  4) ಸುಮಾರು 20 ಗ್ರಾಂ ತೂಕದ ಹೆಂಗಸಿನ ಬಂಗಾರದ ಕತ್ತಿನ ಚೈನ್,  5) ಸುಮಾರು 5 ಗ್ರಾಂ ತೂಕದ ಹಸಿರು ಕಲ್ಲಿನ ಬಂಗಾರದ ಉಂಗುರ ಒಟ್ಟು ಅಂದಾಜು 4 ಲಕ್ಷ ಮೌಲ್ಯದ 120 ಗ್ರಾಂ ತೂಕದ ಬಂಗಾರದ ಒಡವೆಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.

ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಕಳ್ಳರು ಎಸ್ಕೇಪ್ ಆಗಿರುವ ಬಗ್ಗೆ ಶಿಕ್ಷಕ ಮುನಿರಾಜು ಬಾಗೇಪಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಐಪಿಸಿ ಸೇಕ್ಷನ್ ಕಲಂ 380, 454 ರಡಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಿದ್ದಾರೆ.

ವರದಿ: ಭೀಮಪ್ಪ ಪಾಟೀಲ, ಟಿವಿ 9, ಚಿಕ್ಕಬಳ್ಳಾಪುರ 

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ