AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿಬಿದನೂರು: ವಾಹನ ಸಾಲ ವಸೂಲಾತಿಗೆ ಬಂದ ಹೆಚ್‍ಡಿಎಫ್‍ಸಿ ಏಜೆಂಟ್‍ಗೆ ಮಚ್ಚಿನಿಂದ ಹಲ್ಲೆಗೆ ಯತ್ನ!

ಫೈನಾನ್ಸ್ ಏಜೆಂಟ್ ಕೈಗೆ ಸಿಗದೇ ದಿಕ್ಕಾಪಾಲಾಗಿ ಓಡಿದ ಕಾರಣ ವ್ಯಘ್ರಗೊಂಡಿದ್ದ ಸಾಲಗಾರ ಶೇಖರ್ ಏಜೆಂಟ್‍ನ ಬೈಕ್‍ಗೆ ಮಚ್ಚು ಬೆಂಡಾಗುವ ಹಾಗೆ ಕುಟ್ಟಿಕುಟ್ಟಿ ಜಖಂಗೊಳಿಸಿದ್ದಾನೆ. ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೌರಿಬಿದನೂರು: ವಾಹನ ಸಾಲ ವಸೂಲಾತಿಗೆ ಬಂದ ಹೆಚ್‍ಡಿಎಫ್‍ಸಿ ಏಜೆಂಟ್‍ಗೆ ಮಚ್ಚಿನಿಂದ ಹಲ್ಲೆಗೆ ಯತ್ನ!
ವಾಹನ ಸಾಲ ವಸೂಲಾತಿಗೆ ಬಂದ ಹೆಚ್‍ಡಿಎಫ್‍ಸಿ ಏಜೆಂಟ್‍ಗೆ ಮಚ್ಚಿನಿಂದ ಹಲ್ಲೆಗೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಸಾಧು ಶ್ರೀನಾಥ್​|

Updated on:Mar 06, 2024 | 1:20 PM

Share

ಚಿಕ್ಕಬಳ್ಳಾಪುರ, ಮಾರ್ಚ್​​ 3 : ಬೈಕ್ ಲೋನ್ ಕಟ್ಟುವಂತೆ (Vehicle Loan) ಬೈಕ್ (Bike) ಮಾಲೀಕರ ಮನೆ ಮುಂದೆ ಹೋಗಿ ಜೋರಾಗಿ ಅವಾಜ್ ಹಾಕಿದ್ದರಿಂದ ಕುಪಿತಗೊಂಡ ಬೈಕ್ ಮಾಲೀಕ ಖಾಸಗೀ ಫೈನಾನ್ಸ್ ಏಜೆಂಟ್ ಮೇಲೆ ಮಚ್ಚಿನಿಂದ (Machete) ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ (Gouribidanur) ಹೆಚ್‍ಡಿಎಫ್‍ಸಿ ಫೈನಾನ್ಸ್​​​ನಲ್ಲಿ ಗೌರಿಬಿದನೂರಿನ ಶಂಭುಕನಗರದ ವಾಸಿ ಶೇಖರ್ ಎನ್ನುವವರು ಲೋನ್​ ಮೂಲಕ ದ್ವಿಚಕ್ರ ವಾಹನವನ್ನು ತೆಗೆದುಕೊಂಡಿದ್ದು, ಇಎಂಐ ಮೂಲಕ ಸಾಲದ ಕಂತು ಕಟ್ಟುತ್ತಿದ್ದರು.

ಇತ್ತೀಚಿಗೆ ಇಎಂಐ ಕಟ್ಟಿರಲಿಲ್ಲವಂತೆ. ಇದರಿಂದ ಫೈನಾನ್ಸ್ ಏಜೆಂಟ್ ಸುಂದರ್ ಎನ್ನುವವರು ಶೇಖರ್ ಮನೆ ಬಳಿ ಹೋಗಿ ಇಎಂಐ ಪಾವತಿಸುವಂತೆ ಅವಾಜ್ ಹಾಕಿದ್ದಾರೆ. ಇದರಿಂದ ಕುಪಿತಗೊಂಡ ಶೇಖರ್ ಮಾರ್ಚ್-2 ರಂದು ರಸ್ತೆಯಲ್ಲಿ ಸುಂದರನನ್ನು ಅಡ್ಡಗಟ್ಟಿ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದಾನೆ.

ಬೈಕ್ ಬಿಟ್ಟು ಎಸ್ಕೇಪ್ ಆದ ಏಜೆಂಟ್: ಶೇಖರ್ ಮಚ್ಚು ತಂದು ಸುಂದರ್‍ನನ್ನು ಅಡ್ಡಗಟ್ಟುತ್ತಿದ್ದಂತೆ ಭಯಭೀತನಾದ ಸುಂದರ್ ಬೈಕ್ ಬಿಟ್ಟು ದಿಕ್ಕಾಪಾಲಾಗಿ ಓಡಿದ್ದಾನೆ.

ಇದನ್ನೂ ಓದಿ: ಚಿಕ್ಕಮಗಳೂರು ಕಾಫಿ ಕ್ಯೂರಿಂಗ್ ಗೋಡೌನ್ ನಲ್ಲಿದೆ ವಿದ್ಯಾರ್ಥಿನಿಯರ ಡಾ. ಅಂಬೇಡ್ಕರ್ ವಸತಿ ಶಾಲೆ!

ಏಜೆಂಟ್ ಬೈಕ್ ನುಜ್ಜು-ಗುಜ್ಜು: ಫೈನಾನ್ಸ್ ಏಜೆಂಟ್ ಕೈಗೆ ಸಿಗದೇ ದಿಕ್ಕಾಪಾಲಾಗಿ ಓಡಿದ ಕಾರಣ ವ್ಯಘ್ರಗೊಂಡಿದ್ದ ಶೇಖರ್ ಏಜೆಂಟ್‍ನ ಬೈಕ್‍ಗೆ ಮಚ್ಚು ಬೆಂಡಾಗುವ ಹಾಗೆ ಕುಟ್ಟಿಕುಟ್ಟಿ ಜಖಂಗೊಳಿಸಿದ್ದಾನೆ. ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡೇಬಿಟ್ ಕಾರ್ಡ್‍ ಹಣದ ಲಿಮಿಟ್ ಹೆಚ್ಚಿಸುವುದಾಗಿ ನಂಬಿಸಿ ಉಪನ್ಯಾಸಕನಿಗೆ ಪಂಗನಾಮ!

ನಿಮ್ಮ ಬಳಿ ಇರುವ ಎಟಿಎಂ ಕಾರ್ಡ್‍ನ ಹಣ ಡ್ರಾ ಲಿಮಿಟ್‍ನ್ನು ಹೆಚ್ಚಿಸಿಕೊಡುವುದಾಗಿ ನಂಬಿಸಿ ಉಪನ್ಯಾಸಕರೊಬ್ಬರಿಗೆ 65,000/- ರೂಪಾಯಿಗಳ ಪಂಗನಾಮ ಹಾಕಿರುವ ಘಟನೆ ನಡೆದಿದೆ. ತಾವು ಚಿಕ್ಕಬಳ್ಳಾಪುರದ ಎಸ್‍ಬಿಐ ಬ್ಯಾಂಕ್‍ನ ಅಧಿಕಾರಿ ವಿಜಯಕುಮಾರ್ ಎಂದು ಹೇಳಿ, ಚಿಕ್ಕಬಳ್ಳಾಪುರ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿರುವ ಶ್ರೀನಿವಾಸಮೂರ್ತಿ ಎನ್ನುವವರಿಗೆ ಕರೆ ಮಾಡಿ ಅವರಿಂದ ಒಟಿಪಿ ಪಡೆದು ರೂ. 65,000/- ಹಣವನ್ನು ಲಪಟಾಯಿಸಿದ್ದಾರೆ. ಹಣ ಕಳೆದುಕೊಂಡು ಉಪನ್ಯಾಸಕ ಶ್ರೀನಿವಾಸಮೂರ್ತಿ ಬ್ಯಾಂಕ್ ಬಳಿ ಬಂದು ವಿಚಾರಿಸಿದಾಗ ಸೈಬರ್ ವಂಚನೆ ಎಂದು ತಿಳಿದು, ತಲೆ ಮೇಲೆ ಕೈಹೊತ್ತಿದ್ದಾರೆ. ನ್ಯಾಯ ಕೊಡಿಸುವಂತೆ ಮನವಿ ಮಾಡಿ, ಚಿಕ್ಕಬಳ್ಳಾಪುರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:05 pm, Wed, 6 March 24

Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ