AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿಬಿದನೂರು: ವಾಹನ ಸಾಲ ವಸೂಲಾತಿಗೆ ಬಂದ ಹೆಚ್‍ಡಿಎಫ್‍ಸಿ ಏಜೆಂಟ್‍ಗೆ ಮಚ್ಚಿನಿಂದ ಹಲ್ಲೆಗೆ ಯತ್ನ!

ಫೈನಾನ್ಸ್ ಏಜೆಂಟ್ ಕೈಗೆ ಸಿಗದೇ ದಿಕ್ಕಾಪಾಲಾಗಿ ಓಡಿದ ಕಾರಣ ವ್ಯಘ್ರಗೊಂಡಿದ್ದ ಸಾಲಗಾರ ಶೇಖರ್ ಏಜೆಂಟ್‍ನ ಬೈಕ್‍ಗೆ ಮಚ್ಚು ಬೆಂಡಾಗುವ ಹಾಗೆ ಕುಟ್ಟಿಕುಟ್ಟಿ ಜಖಂಗೊಳಿಸಿದ್ದಾನೆ. ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೌರಿಬಿದನೂರು: ವಾಹನ ಸಾಲ ವಸೂಲಾತಿಗೆ ಬಂದ ಹೆಚ್‍ಡಿಎಫ್‍ಸಿ ಏಜೆಂಟ್‍ಗೆ ಮಚ್ಚಿನಿಂದ ಹಲ್ಲೆಗೆ ಯತ್ನ!
ವಾಹನ ಸಾಲ ವಸೂಲಾತಿಗೆ ಬಂದ ಹೆಚ್‍ಡಿಎಫ್‍ಸಿ ಏಜೆಂಟ್‍ಗೆ ಮಚ್ಚಿನಿಂದ ಹಲ್ಲೆಗೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಸಾಧು ಶ್ರೀನಾಥ್​|

Updated on:Mar 06, 2024 | 1:20 PM

Share

ಚಿಕ್ಕಬಳ್ಳಾಪುರ, ಮಾರ್ಚ್​​ 3 : ಬೈಕ್ ಲೋನ್ ಕಟ್ಟುವಂತೆ (Vehicle Loan) ಬೈಕ್ (Bike) ಮಾಲೀಕರ ಮನೆ ಮುಂದೆ ಹೋಗಿ ಜೋರಾಗಿ ಅವಾಜ್ ಹಾಕಿದ್ದರಿಂದ ಕುಪಿತಗೊಂಡ ಬೈಕ್ ಮಾಲೀಕ ಖಾಸಗೀ ಫೈನಾನ್ಸ್ ಏಜೆಂಟ್ ಮೇಲೆ ಮಚ್ಚಿನಿಂದ (Machete) ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ (Gouribidanur) ಹೆಚ್‍ಡಿಎಫ್‍ಸಿ ಫೈನಾನ್ಸ್​​​ನಲ್ಲಿ ಗೌರಿಬಿದನೂರಿನ ಶಂಭುಕನಗರದ ವಾಸಿ ಶೇಖರ್ ಎನ್ನುವವರು ಲೋನ್​ ಮೂಲಕ ದ್ವಿಚಕ್ರ ವಾಹನವನ್ನು ತೆಗೆದುಕೊಂಡಿದ್ದು, ಇಎಂಐ ಮೂಲಕ ಸಾಲದ ಕಂತು ಕಟ್ಟುತ್ತಿದ್ದರು.

ಇತ್ತೀಚಿಗೆ ಇಎಂಐ ಕಟ್ಟಿರಲಿಲ್ಲವಂತೆ. ಇದರಿಂದ ಫೈನಾನ್ಸ್ ಏಜೆಂಟ್ ಸುಂದರ್ ಎನ್ನುವವರು ಶೇಖರ್ ಮನೆ ಬಳಿ ಹೋಗಿ ಇಎಂಐ ಪಾವತಿಸುವಂತೆ ಅವಾಜ್ ಹಾಕಿದ್ದಾರೆ. ಇದರಿಂದ ಕುಪಿತಗೊಂಡ ಶೇಖರ್ ಮಾರ್ಚ್-2 ರಂದು ರಸ್ತೆಯಲ್ಲಿ ಸುಂದರನನ್ನು ಅಡ್ಡಗಟ್ಟಿ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದಾನೆ.

ಬೈಕ್ ಬಿಟ್ಟು ಎಸ್ಕೇಪ್ ಆದ ಏಜೆಂಟ್: ಶೇಖರ್ ಮಚ್ಚು ತಂದು ಸುಂದರ್‍ನನ್ನು ಅಡ್ಡಗಟ್ಟುತ್ತಿದ್ದಂತೆ ಭಯಭೀತನಾದ ಸುಂದರ್ ಬೈಕ್ ಬಿಟ್ಟು ದಿಕ್ಕಾಪಾಲಾಗಿ ಓಡಿದ್ದಾನೆ.

ಇದನ್ನೂ ಓದಿ: ಚಿಕ್ಕಮಗಳೂರು ಕಾಫಿ ಕ್ಯೂರಿಂಗ್ ಗೋಡೌನ್ ನಲ್ಲಿದೆ ವಿದ್ಯಾರ್ಥಿನಿಯರ ಡಾ. ಅಂಬೇಡ್ಕರ್ ವಸತಿ ಶಾಲೆ!

ಏಜೆಂಟ್ ಬೈಕ್ ನುಜ್ಜು-ಗುಜ್ಜು: ಫೈನಾನ್ಸ್ ಏಜೆಂಟ್ ಕೈಗೆ ಸಿಗದೇ ದಿಕ್ಕಾಪಾಲಾಗಿ ಓಡಿದ ಕಾರಣ ವ್ಯಘ್ರಗೊಂಡಿದ್ದ ಶೇಖರ್ ಏಜೆಂಟ್‍ನ ಬೈಕ್‍ಗೆ ಮಚ್ಚು ಬೆಂಡಾಗುವ ಹಾಗೆ ಕುಟ್ಟಿಕುಟ್ಟಿ ಜಖಂಗೊಳಿಸಿದ್ದಾನೆ. ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡೇಬಿಟ್ ಕಾರ್ಡ್‍ ಹಣದ ಲಿಮಿಟ್ ಹೆಚ್ಚಿಸುವುದಾಗಿ ನಂಬಿಸಿ ಉಪನ್ಯಾಸಕನಿಗೆ ಪಂಗನಾಮ!

ನಿಮ್ಮ ಬಳಿ ಇರುವ ಎಟಿಎಂ ಕಾರ್ಡ್‍ನ ಹಣ ಡ್ರಾ ಲಿಮಿಟ್‍ನ್ನು ಹೆಚ್ಚಿಸಿಕೊಡುವುದಾಗಿ ನಂಬಿಸಿ ಉಪನ್ಯಾಸಕರೊಬ್ಬರಿಗೆ 65,000/- ರೂಪಾಯಿಗಳ ಪಂಗನಾಮ ಹಾಕಿರುವ ಘಟನೆ ನಡೆದಿದೆ. ತಾವು ಚಿಕ್ಕಬಳ್ಳಾಪುರದ ಎಸ್‍ಬಿಐ ಬ್ಯಾಂಕ್‍ನ ಅಧಿಕಾರಿ ವಿಜಯಕುಮಾರ್ ಎಂದು ಹೇಳಿ, ಚಿಕ್ಕಬಳ್ಳಾಪುರ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿರುವ ಶ್ರೀನಿವಾಸಮೂರ್ತಿ ಎನ್ನುವವರಿಗೆ ಕರೆ ಮಾಡಿ ಅವರಿಂದ ಒಟಿಪಿ ಪಡೆದು ರೂ. 65,000/- ಹಣವನ್ನು ಲಪಟಾಯಿಸಿದ್ದಾರೆ. ಹಣ ಕಳೆದುಕೊಂಡು ಉಪನ್ಯಾಸಕ ಶ್ರೀನಿವಾಸಮೂರ್ತಿ ಬ್ಯಾಂಕ್ ಬಳಿ ಬಂದು ವಿಚಾರಿಸಿದಾಗ ಸೈಬರ್ ವಂಚನೆ ಎಂದು ತಿಳಿದು, ತಲೆ ಮೇಲೆ ಕೈಹೊತ್ತಿದ್ದಾರೆ. ನ್ಯಾಯ ಕೊಡಿಸುವಂತೆ ಮನವಿ ಮಾಡಿ, ಚಿಕ್ಕಬಳ್ಳಾಪುರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:05 pm, Wed, 6 March 24

Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್