Chikkaballapur: ಸರ್ಕಾರಿ ಶಾಲೆ ಮೇಲ್ಛಾವಣಿ ಗಾರೆ ಕುಸಿದುಬಿದ್ದು ವಿದ್ಯಾರ್ಥಿನಿಯರಿಗೆ ಗಾಯ; ತಪ್ಪಿದ ಭಾರಿ ಅನಾಹುತ!

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಕೊಠಡಿಯ ಮೇಲ್ಛಾವಣಿಯ ಗಾರೆ ಕುಸಿದು ಬಿದ್ದು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯವಾಗಿ ಇನ್ನಿತರ ವಿದ್ಯಾರ್ಥಿಗಳು ಪ್ರಾಣಾಪಯವಾಗಿರುವ ಘಟನೆ ನಡೆದಿದೆ. ಅಷ್ಟಕ್ಕೂ ಅದೇಲ್ಲಿ ಅಂತೀರಾ ಈ ವರದಿ ನೋಡಿ!!!

Chikkaballapur: ಸರ್ಕಾರಿ ಶಾಲೆ ಮೇಲ್ಛಾವಣಿ ಗಾರೆ ಕುಸಿದುಬಿದ್ದು ವಿದ್ಯಾರ್ಥಿನಿಯರಿಗೆ ಗಾಯ; ತಪ್ಪಿದ ಭಾರಿ ಅನಾಹುತ!
ಚಿಕ್ಕಬಳ್ಳಾಪರ
ಕಿರಣ್ ಹನುಮಂತ್​ ಮಾದಾರ್

Updated on: Jun 14, 2023 | 3:14 PM

ಚಿಕ್ಕಬಳ್ಳಾಪುರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ(Government School)ಯ ಕೊಠಡಿಯ ಮೇಲ್ಛಾವಣಿಯ ಗಾರೆ ಕುಸಿದುಬಿದ್ದು ಅಧ್ಯಯನ ನಿರತ ಇಬ್ಬರು ವಿದ್ಯಾರ್ಥಿನಿಯರ ತಲೆಗೆ ಗಾಯವಾಗಿರುವ ಘಟನೆ ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆಯ ನೂತನ ಚೇಳೂರು ತಾಲೂಕಿನ ಯರಗುಡಿ ಗ್ರಾಮದಲ್ಲಿ ನಡೆದಿದೆ. ದೊಡ್ಡವಾರಪಲ್ಲಿ ಗ್ರಾಮದ ನಂದಿತಾ ಹಾಗೂ ಗ್ಯಾದಿವಾಂಡ್ಲಪಲ್ಲಿ ಗ್ರಾಮದ ಅಕ್ಷಿತಾ ಗಾಯಗೊಂಡ ವಿದ್ಯಾರ್ಥಿಗಳು. ಇವರು 3ನೇ ತರಗತಿಯಲ್ಲಿ ಓದುತ್ತಿದ್ದು, ಎಂದಿನಂತೆ ಶಾಲೆಗೆ ಬಂದಿದ್ದಾರೆ. ಆದ್ರೆ, ಮಧ್ಯಾಹ್ನ 3.30ರ ಸಮಯದಲ್ಲಿ ಇದ್ದಕ್ಕಿದ್ದಂತೆ ವಿದ್ಯಾರ್ಥಿಗಳು ಕುಳಿತಿದ್ದ ಕೊಠಡಿಯ ಮೇಲ್ಛಾವಣಿಯ ಗಾರೆ ಕುಸಿದುಬಿದ್ದು ಇಬ್ಬರು ವಿದ್ಯಾರ್ಥಿನಿಯರ ತಲೆಗೆ ಗಂಭೀರ ಗಾಯವಾಗಿತ್ತು. ಇತ್ತ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್ ವಿಷಯ ತಿಳಿದು ‘ಕೊಠಡಿಯ ರಿಪೇರಿ ಕಾಮಗಾರಿ ಕಳಪೆಯಾಗಿದ್ದಾಗ ಈ ರೀತಿ ಆಗುತ್ತೆ ಎಂದರು.

ಇತ್ತೀಚೆಗೆ ತಾನೇ ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ ಕೊಠಡಿಯ ಮೇಲ್ಛಾವಣಿಯನ್ನು ರಿಪೇರಿ ಮಾಡಲಾಗಿತ್ತು. ಕಾಮಗಾರಿ ಕಳಪೆ ಮಾಡಿದ ಕಾರಣ ಈಗ ಗಾರೆ ಕುಸಿದುಬಿದ್ದು ಅವಾಂತರವಾಗಿದೆ. ಅದೃಷ್ಟವಶಾತ್​ ಶಾಲೆಯಲ್ಲಿದ್ದ ಇನ್ನಿತರ ವಿದ್ಯಾರ್ಥಿಗಳು ಹೊರಗೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ, ಇಲ್ಲವಾದ್ರೆ ದೊಡ್ಡ ಅನಾವುತವೇ ಆಗುತ್ತಿತ್ತು. ಇದರಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ‘ಈ ರೀತಿಯ ಶಾಲೆಗಳ ಪಟ್ಟಿ ಮಾಡಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ:Haveri News: ಬಸ್‌ ರಶ್‌ಗೆ ಬಾಲಕಿ ಬಲಿ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ದುರಂತ ಅಂತ್ಯ

ಇನ್ನು ಸರ್ಕಾರಿ ಶಾಲೆಗಳು ಅಂದ್ರೆ, ಅದೇಷ್ಟೊ ಜನ ಪೋಷಕರು ಮೂಗು ಮುರಿಯುತ್ತಾರೆ. ಇನ್ನೂ ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಗಳನ್ನೇ ನಂಬಿಕೊಂಡು ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು ಬದುಕುಳಿದಿದ್ದೆ ಹೆಚ್ಚು, ದೊಡ್ಡ ಅವಾಂತರವಾಗುವುದಕ್ಕೂ ಮುನ್ನ ಸರ್ಕಾರ ಈ ಕುರಿತು ಎಚ್ಚೇತ್ತುಕೊಳ್ಳಬೇಕಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us