AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಆಸ್ಪತ್ರೆಗೆ ಹೈಟೆಕ್‌ ‘ಚಿಕಿತ್ಸೆ’; ಪಾಳುಬಿದ್ದಂತಿದ್ದ ಸರ್ಕಾರಿ ಆಸ್ಪತ್ರೆ ಇಂದು ಖಾಸಗಿ ಆಸ್ಪತ್ರೆಗಳಿಗೆ ಸೆಡ್ಡು ಹೊಡೆಯುವಂತಿದೆ!

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಗ್ರಾಮದಲ್ಲಿರೋ ಸರ್ಕಾರಿ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದು. ಎಲ್ಲಾ ಸರ್ಕಾರಿ ಆಸ್ಪತ್ರೆಗಳಂತೆ ಈ ಸರ್ಕಾರಿ ಆಸ್ಪತ್ರೆ ಕೂಡಾ ಶಿಥಿಲ ಕಟ್ಟಡ ಹೊಂದಿತ್ತು. ಗಲೀಜು ವಾತಾವರಣದಿಂದಲೇ ಕೂಡಿತ್ತು. ಆದ್ರೆ ಇದೇ ಆಸ್ಪತ್ರೆಗೆ ಈಗ ಹೈಟೆಕ್‌ ಸ್ಪರ್ಶ ನೀಡಲಾಗಿದೆ.

ಸರ್ಕಾರಿ ಆಸ್ಪತ್ರೆಗೆ ಹೈಟೆಕ್‌ ‘ಚಿಕಿತ್ಸೆ’; ಪಾಳುಬಿದ್ದಂತಿದ್ದ ಸರ್ಕಾರಿ ಆಸ್ಪತ್ರೆ ಇಂದು ಖಾಸಗಿ ಆಸ್ಪತ್ರೆಗಳಿಗೆ ಸೆಡ್ಡು ಹೊಡೆಯುವಂತಿದೆ!
ಸರ್ಕಾರಿ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರ
TV9 Web
| Edited By: |

Updated on: Feb 01, 2022 | 9:45 AM

Share

ಚಿಕ್ಕಬಳ್ಳಾಪುರ: ಜಿಲ್ಲೆಯ ಸರ್ಕಾರಿ ಆಸ್ಪತ್ರೆಯನ್ನು ಖಾಸಗಿ ಆಸ್ಪತ್ರೆಯಂತೆ ಹೈಟೆಕ್ ಗೊಳಿಸಲಾಗಿದೆ. ಈ ಆಸ್ಪತ್ರೆಯಲ್ಲಿ ಹೈಟೆಕ್ ಪಾರ್ಕ್‌, ಸುಸಜ್ಜಿತವಾದ ಬೆಡ್‌ಗಳಿವೆ. ಇನ್ನೂ ವಿಶೇಷ ಅಂದ್ರೆ ಆ ಆಸ್ಪತ್ರೆ ಆವರಣವೇ ರೋಗಿಯ ಅರ್ಧ ಕಾಯಿಲೆಯನ್ನೇ ವಾಸಿ ಮಾಡುವಂತಿದೆ. ಪಾಳು ಬಿದ್ದಂತಿದ್ದ ಸರ್ಕಾರಿ ಆಸ್ಪತ್ರೆಯೊಂದು ಈಗ ಖಾಸಗಿ ಆಸ್ಪತ್ರೆಗಳಿಗೆ ಸೆಡ್ಡು ಹೊಡೆಯುವಂತೆ ಬದಲಾಗಿದೆ. ಆಸ್ಪತ್ರೆ ಸುತ್ತಲೂ ಹಚ್ಚ ಹಸಿರಿನ ಹುಲ್ಲು ಹಾಸಿನಿಂದ ನಳನಳಿಸೋ ಪಾರ್ಕ್‌. ಇನ್ನೂ ಆಸ್ಪತ್ರೆ ಒಳಗೆ ಕಾಲಿಡುತ್ತಿದ್ದಂತೆ ಸುಸಜ್ಜಿತವಾದ ಬೆಡ್‌ಗಳಿವೆ. ಈ ಆಸ್ಪತ್ರೆಯನ್ನು ನೋಡಿದ್ರೆ ಇದು ಸರ್ಕಾರಿ ಆಸ್ಪತ್ರೆ ಎಂದು ನಂಬಲೂ ಅಸಾಧ್ಯವಾಗುವ ರೀತಿ ಇದಕ್ಕೆ ಹೈಟೆಕ್ ಟಚ್‌ ನೀಡಲಾಗಿದೆ.

ಉದ್ಯೋಗ ಖಾತ್ರಿ ಅನುದಾನದಲ್ಲೇ ತಲೆ ಎತ್ತಿದ ಪಾರ್ಕ್ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಗ್ರಾಮದಲ್ಲಿರೋ ಸರ್ಕಾರಿ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದು. ಎಲ್ಲಾ ಸರ್ಕಾರಿ ಆಸ್ಪತ್ರೆಗಳಂತೆ ಈ ಸರ್ಕಾರಿ ಆಸ್ಪತ್ರೆ ಕೂಡಾ ಶಿಥಿಲ ಕಟ್ಟಡ ಹೊಂದಿತ್ತು. ಗಲೀಜು ವಾತಾವರಣದಿಂದಲೇ ಕೂಡಿತ್ತು. ಆದ್ರೆ ಇದೇ ಆಸ್ಪತ್ರೆಗೆ ಈಗ ಹೈಟೆಕ್‌ ಸ್ಪರ್ಶ ನೀಡಲಾಗಿದೆ. 1 ಕೋಟಿ 12 ಲಕ್ಷ ರೂಪಾಯಿ ಸಿಎಸ್‌ಆರ್ ಅನುದಾನ ಬಳಸಿಕೊಂಡು ಮಾದರಿ ಕಟ್ಟಡ ನಿರ್ಮಿಸಲಾಗಿದೆ. ಆಸ್ಪತ್ರೆಯನ್ನ ಮತ್ತಷ್ಟು ವಿಸ್ತರಿಸಲಾಗಿದೆ. ಜತೆಗೆ ಉದ್ಯೋಗ ಖಾತ್ರಿ ಯೋಜನೆಯಡಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ 32 ಲಕ್ಷ ರೂಪಾಯಿ ಅನುದಾನ ನೀಡಿದೆ. ಅದ್ರಿಂದಲೇ ಆಸ್ಪತ್ರೆ ಸುತ್ತ ಸುಂದರವಾದ ಉದ್ಯಾನವನ ನಿರ್ಮಾಣ ಮಾಡಲಾಗಿದೆ.

Govt Hospital high tech touch

ಉದ್ಯೋಗ ಖಾತ್ರಿ ಅನುದಾನದಲ್ಲೇ ತಲೆಎತ್ತಿದ ಪಾರ್ಕ್

ಇನ್ನು ಮಾದರಿ ಆಸ್ಪತ್ರೆ ನಿರ್ಮಾಣಕ್ಕೂ ಮುನ್ನ ಆಸ್ಪತ್ರೆ ಆವರಣದಲ್ಲಿ ಬರೀ ಜಾಲಿ ಗಿಡಗಳೇ ಕಾಣ್ತಿದ್ವು. ಆದ್ರೀಗ ಸುಂದರವಾದ ಕಾಂಕ್ರೀಟ್ ರಸ್ತೆ, ವಿದ್ಯುತ್ ದೀಪ, ಹುಲ್ಲಿನ ಲ್ಯಾನ್, ವಿವಿಧ ಅಲಂಕಾರಿಕ ಗಿಡಗಳನ್ನು ನೆಟ್ಟು ವಾಕಿಂಗ್ ಮಾಡಲು ಸುಂದರವಾದ ಪಾತ್ ಗಳನ್ನು ನಿರ್ಮಾಣ ಮಾಡಲಾಗಿದೆ. ಇದ್ರಿಂದ ಸಾರ್ವಜನಿಕರು, ರೋಗಿಗಳು ವಾಕಿಂಗ್‌ ಮಾಡಿ ರೆಸ್ಟ್‌ ಮಾಡಿದ್ರೆ, ಬಿಡುವು ಸಿಕ್ಕಾಗ ಸ್ವತಃ ಆಸ್ಪತ್ರೆ ಸಿಬ್ಬಂದಿ ವೈದ್ಯರು ಪಾರ್ಕ್ ನಲ್ಲಿ ಕೆಲ ಕಾಲ ವಾಕಿಂಗ್ ಮಾಡಿ ರಿಪ್ರೆಶ್ ಆಗ್ತಿದ್ದಾರೆ.

ಒಟ್ನಲ್ಲಿ ಉದ್ಯೋಗ ಖಾತ್ರಿ ಅನುದಾನವನ್ನೇ ಬಳಸಿಕೊಂಡು ಆಸ್ಪತ್ರೆಯನ್ನ ಸುಂದರಗೊಳಿಸಲಾಗಿದೆ. ಆಸ್ಪತ್ರೆ ಒಳಗೂ ಉತ್ತಮ ಬೆಡ್‌ ವ್ಯವಸ್ಥೆ ಮಾಡಲಾಗಿದ್ದು ಚಿಕಿತ್ಸೆ ಕಡೆಗೂ ಗಮನ ಹರಿಸಲಾಗಿದೆ. ಇದೇ ಆಸ್ಪತ್ರೆ ಈಗ ಇತರೆ ಸರ್ಕಾರಿ ಆಸ್ಪತ್ರೆಗಳಿಗೆ ಮಾದರಿಯಾಗಿದೆ.

ವರದಿ: ಭೀಮಪ್ಪ ಪಾಟೀಲ್‌, ಟಿವಿ9 ಚಿಕ್ಕಬಳ್ಳಾಪುರ

Govt Hospital high tech touch

ಉದ್ಯೋಗ ಖಾತ್ರಿ ಅನುದಾನದಲ್ಲೇ ತಲೆಎತ್ತಿದ ಪಾರ್ಕ್

Govt Hospital high tech touch

ಆಸ್ಪತ್ರೆಯಲ್ಲಿ ಸುಸಜ್ಜಿತವಾದ ಬೆಡ್‌ಗಳ ವ್ಯವಸ್ಥೆ

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯಲ್ಲಿ ಕೊವಿಡ್ ಚಿಕಿತ್ಸೆ ಪಡೆಯದಿದ್ದರೆ ಪರಿಹಾರವಿಲ್ಲ: ಸಚಿವ ಜೆಸಿ ಮಾಧುಸ್ವಾಮಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್