AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tv9 Impact: ಅಕ್ರಮ ಮದ್ಯ ಮಾರಾಟ ತಡೆಯುವ ಭರವಸೆ ನೀಡಿದ ಅಧಿಕಾರಿಗಳು, ರಾಜೀನಾಮೆ ಹಿಂಪಡೆದ ಗ್ರಾ.ಪಂ ಸದಸ್ಯ

ಚಿಕ್ಕಬಳ್ಳಾಪುರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ವಿ.ಕೆ.ವಾಸುದೇವ್, ಗೌರಿಬಿದನೂರು ಪೊಲೀಸ್ ವೃತ್ತ ನಿರೀಕ್ಷಕ ಶಶಿಧರ್ ಹಾಗೂ ಅಬಕಾರಿ ಅಧಿಕಾರಿಗಳು, ವೆಂಕಟೇಶ್ಗೆ ಕರೆ ಮಾಡಿ ಇನ್ನು ಮುಂದೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಸರಬರಾಜು ಆಗದಂತೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Tv9 Impact: ಅಕ್ರಮ ಮದ್ಯ ಮಾರಾಟ ತಡೆಯುವ ಭರವಸೆ ನೀಡಿದ ಅಧಿಕಾರಿಗಳು, ರಾಜೀನಾಮೆ ಹಿಂಪಡೆದ ಗ್ರಾ.ಪಂ ಸದಸ್ಯ
ಗ್ರಾ.ಪಂ. ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ವೆಂಕಟೇಶ್
Follow us
TV9 Web
| Updated By: ಆಯೇಷಾ ಬಾನು

Updated on:Sep 24, 2021 | 2:06 PM

ಚಿಕ್ಕಬಳ್ಳಾಫುರ: ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವ ವೇಳೆ ಗ್ರಾಮದಲ್ಲಿರುವ ಅಕ್ರಮ ಮದ್ಯ ಮಾರಾಟ ತಡೆಗಟ್ಟುವುದಾಗಿ ಹೇಳಿ ಜನರಿಂದ ಮತ ಪಡೆದು ಗ್ರಾಮ ಪಂಚಾಯತಿ ಸದಸ್ಯನಾಗಿದ್ದ ವೆಂಕಟೇಶ್ ರಾಜೀನಾಮೆ ನೀಡಿದ್ದರು. ಅಕ್ರಮ ಮದ್ಯ ತಡೆಗಟ್ಟಲು ಆಗ್ತಿಲ್ಲ ಇನ್ನೂ ಪಂಚಾಯಿತಿ ಸದಸ್ಯನಾಗಿ ಪ್ರಯೋಜನವೇನು ಅಂತ ಬೇಸರ ಹೊರ ಹಾಕಿದ್ದರು.

ಚಿಕ್ಕಬಳ್ಳಾಫುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಕನಗಾನಕೊಪ್ಪ ನಿವಾಸಿ ಹಾಗೂ ಮೀನಕನಗುರ್ಕಿ ಗ್ರಾಮ ಪಂಚಾಯಿತಿ ಸದಸ್ಯನಾಗಿರುವ ವೆಂಕಟೇಶ್ ನಿನ್ನೆ ಸಂಜೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಕುರಿತು ಟಿವಿ9 ಕನ್ನಡ ಡಿಜಿಟಲ್ನಲ್ಲಿ ವರದಿ ಪ್ರಕಟವಾಗಿತ್ತು. ವರದಿ ಪ್ರಕಟವಾಗುತ್ತಿದ್ದಂತೆ ಸ್ಥಳೀಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಆರೋಗ್ಯ ಖಾತೆ ಹಾಗೂ ವೈದ್ಯಕೀಯ ಶಿಕ್ಷಣ ಖಾತೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಡಾ.ಕೆ.ಸುಧಾಕರ್ ರವರ ಸೂಚನೆ ಮೇರೆಗೆ ಅವರ ಆಪ್ತ ಸಹಾಯಕ, ವೆಂಕಟೇಶ್ಗೆ ಕರೆ ಮಾಡಿ ರಾಜೀನಾಮೆ ವಾಪಸ್ ಪಡೆಯುವಂತೆ ಮನವೊಲಿಸಿದ್ದಾರೆ.

ಮತ್ತೊಂದೆಡೆ ವರದಿ ಗಮನಿಸಿದ ಚಿಕ್ಕಬಳ್ಳಾಪುರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ವಿ.ಕೆ.ವಾಸುದೇವ್, ಗೌರಿಬಿದನೂರು ಪೊಲೀಸ್ ವೃತ್ತ ನಿರೀಕ್ಷಕ ಶಶಿಧರ್ ಹಾಗೂ ಅಬಕಾರಿ ಅಧಿಕಾರಿಗಳು, ವೆಂಕಟೇಶ್ಗೆ ಕರೆ ಮಾಡಿ ಇನ್ನು ಮುಂದೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಸರಬರಾಜು ಆಗದಂತೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವೆಂಕಟೇಶ್ ಈಗ ತಮ್ಮ ರಾಜೀನಾಮೆ ಪತ್ರವನ್ನು ಹಿಂಪಡೆದಿದ್ದಾರೆ. ಇನ್ನು ಕುಗ್ರಾಮ ಕನಗಾನಕೊಪ್ಪ ಗ್ರಾಮಕ್ಕೆ ಆಗಮಿಸಿ ವರದಿ ಪ್ರಕಟ ಮಾಡಿದ್ದಕ್ಕೆ ಟಿವಿ9 ಕನ್ನಡ ಡಿಜಿಟಲ್ಗೆ ಧನ್ಯವಾದ ತಿಳಿಸಿದರು.

ಇದನ್ನೂ ಓದಿ: ಅಕ್ರಮ ಮದ್ಯ ಮಾರಾಟ: ದೂರು ಕೊಟ್ಟ ಗ್ರಾ.ಪಂ. ಸದಸ್ಯನನ್ನೇ ಬೈದು ಕಳಿಸಿದ ಪೊಲೀಸ್, ರಾಜೀನಾಮೆ ನೀಡಿದ ಸದಸ್ಯ

Published On - 12:49 pm, Fri, 24 September 21

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ