AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಮಗಳ ಪ್ರಿಯತಮನ ಮನೆಗೆ ನುಗ್ಗಿ ಹಲ್ಲೆ ಪ್ರಕರಣ; 4 ಜನ ಆರೋಪಿಗಳ ಬಂಧನ

ಗುಡಿಬಂಡೆ ತಾಲ್ಲೂಕು ದಪ್ಪರ್ತಿ ಗ್ರಾಮದ ಪ್ರೇಮಿಗಳಿಬ್ಬರು ಮನೆಬಿಟ್ಟು ಹೋಗಿ ಮದುವೆ ಮಾಡಿಕೊಂಡಿರುವ ಕಾರಣ ಆಕ್ರೋಶಗೊಂಡ ಹುಡುಗಿ ಕಡೆಯವರು ಆಕೆಯ ಪ್ರಿಯತಮನ ಮನೆಗೆ ನುಗ್ಗಿ ಆತನ ತಂದೆ-ತಾಯಿಯ ಮೇಲೆ ಮನಸ್ಸೋ ಇಚ್ಚೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು-ಪ್ರತಿದೂರು ದಾಖಲಾಗಿತ್ತು. ಈ ಹಿನ್ನಲೆ 4 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಗ್ರಾಮದಲ್ಲಿ ಉದ್ವಿಘ್ನ ಪರಿಸ್ಥಿತಿ ಉಂಟಾಗಿದೆ. 

ಚಿಕ್ಕಬಳ್ಳಾಪುರ: ಮಗಳ ಪ್ರಿಯತಮನ ಮನೆಗೆ ನುಗ್ಗಿ ಹಲ್ಲೆ ಪ್ರಕರಣ; 4 ಜನ ಆರೋಪಿಗಳ ಬಂಧನ
ಚಿಕ್ಕಬಳ್ಳಾಪುರ ಪ್ರಿಯತಮನ ಮನೆಗೆ ನುಗ್ಗಿ ಹಲ್ಲೆ ಪ್ರಕರಣ, 4 ಜನ ಆರೋಪಿಗಳ ಬಂಧನ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 19, 2023 | 3:44 PM

Share

ಚಿಕ್ಕಬಳ್ಳಾಪುರ, ಡಿ.19: ಜಿಲ್ಲೆಯ ಗುಡಿಬಂಡೆ(Gudibande)ತಾಲ್ಲೂಕಿನ ದಪ್ಪರ್ತಿ ಗ್ರಾಮದ ಮನೋಜ್ ಹಾಗೂ ಅಂಕಿತ ಪ್ರೇಮಿಗಳು (Lovers) ಒಬ್ಬರಿಗೊಬ್ಬರು ಪ್ರೀತಿಸಿ ಮನೆಯಿಂದ ಓಡಿಹೋಗಿ ಮದುವೆ ಮಾಡಿಕೊಂಡಿದ್ದರು. ಈ ಹಿನ್ನಲೆ ಆಕ್ರೋಶಗೊಂಡ ಅಂಕಿತ ತಂದೆ-ತಾಯಿ ಹಾಗೂ ಸಂಬಂಧಿಕರು, ನಿನ್ನೆ(ಡಿ.18) ಮನೋಜ್ ಮನೆಗೆ ನುಗ್ಗಿ ಅವರ ತಂದೆ ಗಂಗರಾಜು, ತಾಯಿ ವೆಂಕಟಲಕ್ಷ್ಮಮ್ಮ ಮೇಲೆ ಮನಸ್ಸೋ ಇಚ್ಚೆ ಹಲ್ಲೆ ನಡೆಸಿ ಗಾಯಗೊಳಿಸಿದ್ದರು. ಇದರಿಂದ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದ್ದು, ಗ್ರಾಮದಲ್ಲಿ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದಾರೆ. ಮತ್ತೊಂದಡೆ ಗಾಯಾಳುಗಳು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯುವತಿ ತಂದೆ ಶ್ರೀನಿವಾಸಪ್ಪ ಸೇರಿ ಗೋವಿಂದಪ್ಪ, ವೆಂಕಟೇಶಪ್ಪ, ಹರೀಶ ಎಂಬುವವರ ಬಂಧನ

ಮತ್ತೊಂದಡೆ ಒಂದೇ ಗ್ರಾಮದ, ಒಂದೇ ಸಮುದಾಯದ ಅಕ್ಕಪಕ್ಕದ ಮನೆಯ ಹುಡುಗ-ಹುಡುಗಿ ಓಡಿಹೋಗಿ ಮದುವೆ ಮಾಡಿಕೊಂಡ ಕಾರಣ ಗ್ರಾಮದಲ್ಲಿ ಉದ್ವಿಘ್ನ ಪರಿಸ್ಥಿತಿ ಉಂಟಾಗಿದೆ. ಇದರಿಂದ ಎಚ್ಚೆತ್ತ ಗುಡಿಬಂಡೆ ಠಾಣೆ ಪೊಲೀಸರು ಇಂದು ಅಂಕಿತಾಳ ತಂದೆ ಶ್ರೀನಿವಾಸ್, ಚಿಕ್ಕಪ್ಪಂದಿರಾದ ಗೋವಿಂದಪ್ಪ, ಆನಂದಪ್ಪ ಹಾಗೂ ವೆಂಕಟೇಶಪ್ಪ ರವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ:ಬೆಳಗಾವಿ ರೀತಿ ಹಾವೇರಿಯಲ್ಲೂ ಹೀನ ಕೃತ್ಯ: ಪ್ರೀತಿಸಿ ಓಡಿ ಹೋದರೆಂದು ಯುವಕನ ಸೋದರ ಮಾವನ ಅರೆಬೆತ್ತಲೆಗೊಳಿಸಿ ಹಲ್ಲೆ

ಪ್ರೀತಿಸಿ ಓಡಿಹೋದ ಜೋಡಿಯ ಮದುವೆಗೆ ಯುವತಿಯ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅಂಕಿತಾಳ ಮನೆ ಕಡೆ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಬಲಾಢ್ಯರಾಗಿದ್ದಾರೆ. ಆದರೆ, ಹುಡುಗ ಮನೋಜ್ ಮನೆ ಕಡೆಯವರು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದಾರೆ. ಇದೇ ಈಗ ಮದುವೆಗೆ ಇದೇ ಅಡ್ಡಿಯಾಗಿದೆ. ಆದರೆ, ಯುವತಿ ಮದುವೆಯಾದರೆ ತನ್ನ ಪ್ರಿಯತಮನನ್ನೇ ಎಂದು ಹಠ ಹಿಡಿದು ಎಸ್ಕೇಪ್ ಆಗಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ