AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಮಗಳ ಪ್ರಿಯತಮನ ಮನೆಗೆ ನುಗ್ಗಿ ಹಲ್ಲೆ ಪ್ರಕರಣ; 4 ಜನ ಆರೋಪಿಗಳ ಬಂಧನ

ಗುಡಿಬಂಡೆ ತಾಲ್ಲೂಕು ದಪ್ಪರ್ತಿ ಗ್ರಾಮದ ಪ್ರೇಮಿಗಳಿಬ್ಬರು ಮನೆಬಿಟ್ಟು ಹೋಗಿ ಮದುವೆ ಮಾಡಿಕೊಂಡಿರುವ ಕಾರಣ ಆಕ್ರೋಶಗೊಂಡ ಹುಡುಗಿ ಕಡೆಯವರು ಆಕೆಯ ಪ್ರಿಯತಮನ ಮನೆಗೆ ನುಗ್ಗಿ ಆತನ ತಂದೆ-ತಾಯಿಯ ಮೇಲೆ ಮನಸ್ಸೋ ಇಚ್ಚೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು-ಪ್ರತಿದೂರು ದಾಖಲಾಗಿತ್ತು. ಈ ಹಿನ್ನಲೆ 4 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಗ್ರಾಮದಲ್ಲಿ ಉದ್ವಿಘ್ನ ಪರಿಸ್ಥಿತಿ ಉಂಟಾಗಿದೆ. 

ಚಿಕ್ಕಬಳ್ಳಾಪುರ: ಮಗಳ ಪ್ರಿಯತಮನ ಮನೆಗೆ ನುಗ್ಗಿ ಹಲ್ಲೆ ಪ್ರಕರಣ; 4 ಜನ ಆರೋಪಿಗಳ ಬಂಧನ
ಚಿಕ್ಕಬಳ್ಳಾಪುರ ಪ್ರಿಯತಮನ ಮನೆಗೆ ನುಗ್ಗಿ ಹಲ್ಲೆ ಪ್ರಕರಣ, 4 ಜನ ಆರೋಪಿಗಳ ಬಂಧನ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Dec 19, 2023 | 3:44 PM

Share

ಚಿಕ್ಕಬಳ್ಳಾಪುರ, ಡಿ.19: ಜಿಲ್ಲೆಯ ಗುಡಿಬಂಡೆ(Gudibande)ತಾಲ್ಲೂಕಿನ ದಪ್ಪರ್ತಿ ಗ್ರಾಮದ ಮನೋಜ್ ಹಾಗೂ ಅಂಕಿತ ಪ್ರೇಮಿಗಳು (Lovers) ಒಬ್ಬರಿಗೊಬ್ಬರು ಪ್ರೀತಿಸಿ ಮನೆಯಿಂದ ಓಡಿಹೋಗಿ ಮದುವೆ ಮಾಡಿಕೊಂಡಿದ್ದರು. ಈ ಹಿನ್ನಲೆ ಆಕ್ರೋಶಗೊಂಡ ಅಂಕಿತ ತಂದೆ-ತಾಯಿ ಹಾಗೂ ಸಂಬಂಧಿಕರು, ನಿನ್ನೆ(ಡಿ.18) ಮನೋಜ್ ಮನೆಗೆ ನುಗ್ಗಿ ಅವರ ತಂದೆ ಗಂಗರಾಜು, ತಾಯಿ ವೆಂಕಟಲಕ್ಷ್ಮಮ್ಮ ಮೇಲೆ ಮನಸ್ಸೋ ಇಚ್ಚೆ ಹಲ್ಲೆ ನಡೆಸಿ ಗಾಯಗೊಳಿಸಿದ್ದರು. ಇದರಿಂದ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದ್ದು, ಗ್ರಾಮದಲ್ಲಿ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದಾರೆ. ಮತ್ತೊಂದಡೆ ಗಾಯಾಳುಗಳು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಯುವತಿ ತಂದೆ ಶ್ರೀನಿವಾಸಪ್ಪ ಸೇರಿ ಗೋವಿಂದಪ್ಪ, ವೆಂಕಟೇಶಪ್ಪ, ಹರೀಶ ಎಂಬುವವರ ಬಂಧನ

ಮತ್ತೊಂದಡೆ ಒಂದೇ ಗ್ರಾಮದ, ಒಂದೇ ಸಮುದಾಯದ ಅಕ್ಕಪಕ್ಕದ ಮನೆಯ ಹುಡುಗ-ಹುಡುಗಿ ಓಡಿಹೋಗಿ ಮದುವೆ ಮಾಡಿಕೊಂಡ ಕಾರಣ ಗ್ರಾಮದಲ್ಲಿ ಉದ್ವಿಘ್ನ ಪರಿಸ್ಥಿತಿ ಉಂಟಾಗಿದೆ. ಇದರಿಂದ ಎಚ್ಚೆತ್ತ ಗುಡಿಬಂಡೆ ಠಾಣೆ ಪೊಲೀಸರು ಇಂದು ಅಂಕಿತಾಳ ತಂದೆ ಶ್ರೀನಿವಾಸ್, ಚಿಕ್ಕಪ್ಪಂದಿರಾದ ಗೋವಿಂದಪ್ಪ, ಆನಂದಪ್ಪ ಹಾಗೂ ವೆಂಕಟೇಶಪ್ಪ ರವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ:ಬೆಳಗಾವಿ ರೀತಿ ಹಾವೇರಿಯಲ್ಲೂ ಹೀನ ಕೃತ್ಯ: ಪ್ರೀತಿಸಿ ಓಡಿ ಹೋದರೆಂದು ಯುವಕನ ಸೋದರ ಮಾವನ ಅರೆಬೆತ್ತಲೆಗೊಳಿಸಿ ಹಲ್ಲೆ

ಪ್ರೀತಿಸಿ ಓಡಿಹೋದ ಜೋಡಿಯ ಮದುವೆಗೆ ಯುವತಿಯ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅಂಕಿತಾಳ ಮನೆ ಕಡೆ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಬಲಾಢ್ಯರಾಗಿದ್ದಾರೆ. ಆದರೆ, ಹುಡುಗ ಮನೋಜ್ ಮನೆ ಕಡೆಯವರು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿದ್ದಾರೆ. ಇದೇ ಈಗ ಮದುವೆಗೆ ಇದೇ ಅಡ್ಡಿಯಾಗಿದೆ. ಆದರೆ, ಯುವತಿ ಮದುವೆಯಾದರೆ ತನ್ನ ಪ್ರಿಯತಮನನ್ನೇ ಎಂದು ಹಠ ಹಿಡಿದು ಎಸ್ಕೇಪ್ ಆಗಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?
ಸೆಮಿಫೈನಲ್‌ ಪಂದ್ಯದಲ್ಲಿ ಸತತ 2ನೇ ಶತಕ ಬಾರಿಸಿದ ಸ್ಮರಣ್ ರವಿಚಂದ್ರನ್
ಸೆಮಿಫೈನಲ್‌ ಪಂದ್ಯದಲ್ಲಿ ಸತತ 2ನೇ ಶತಕ ಬಾರಿಸಿದ ಸ್ಮರಣ್ ರವಿಚಂದ್ರನ್