AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೂ ತಟ್ಟಿದ್ದ ಯುದ್ಧದ ಬಿಸಿ: ಗಗನಕ್ಕೇರಿದ್ದ ತರಕಾರಿ ದರದಲ್ಲಿ ಭಾರೀ ಕುಸಿತ

ಅಮೆರಿಕ, ಇಸ್ರೇಲ್ ಹಾಗೂ ಇರಾನ್ ಯುದ್ದದ ಬಿಸಿ ಚಿಕ್ಕಬಳ್ಳಾಪುರದ ತರಕಾರಿ ಬೆಳೆಗಾರರಿಗೂ ತಟ್ಟಿದೆ. ಕಮರ್ಷಿಯಲ್ ಸಿಲಿಂಡರ್​ಗಳ ಕೊರತೆಯಿಂದ ಕೆಲವು ಹೋಟಲ್​ಗಳು ಬಂದ್ ಆಗಿರುವ ಕಾರಣ ತರಕಾರಿ ಖರೀದಿಸುವವರಿಲ್ಲದಾಗಿದೆ. ಹಗಲು ರಾತ್ರಿ ಕಷ್ಟಪಟ್ಟು ಬೆಳೆದ ತರಕಾರಿ ಎಪಿಎಂಸಿ ಮಾರುಕಟ್ಟೆಯಲ್ಲಿ ಕೊಳೆಯುವಂತಾಗಿದ್ದು, ರೈತರು ಕಂಗಾಲಾಗಿದ್ದಾರೆ.

ರೈತರಿಗೂ ತಟ್ಟಿದ್ದ ಯುದ್ಧದ ಬಿಸಿ: ಗಗನಕ್ಕೇರಿದ್ದ ತರಕಾರಿ ದರದಲ್ಲಿ ಭಾರೀ ಕುಸಿತ
ತರಕಾರಿ Image Credit source: tv9 kannada
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Apr 03, 2026 | 5:19 PM

Share

ಚಿಕ್ಕಬಳ್ಳಾಪುರ, ಏಪ್ರಿಲ್​ 03: ವಾಣಿಜ್ಯ ಸಿಲಿಂಡರ್​ಗಳ ಕೊರತೆಯಿಂದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಹಲವು ಹೋಟೆಲ್‍ಗಳು ಬಂದ್ ಆಗಿವೆ. ಇತ್ತ ಚಿಕ್ಕಬಳ್ಳಾಪುರದಲ್ಲೂ ಗ್ಯಾಸ್​ ಅಭಾವ ಮುಂದುವರೆದಿದೆ. ಹೋಟೆಲ್​ಗಳು ಬಂದ್ ಆಗುತ್ತಿವೆ. ಹೀಗಾಗಿ ಸದ್ಯ ನಗರದಲ್ಲಿ ತರಕಾರಿಗೆ (vegetable) ಬೆಲೆ ಇಲ್ಲದಂತಾಗಿದ್ದು, ರಾಶಿ-ರಾಶಿ ತರಕಾರಿ ಮಾರುಕಟ್ಟೆಯಲ್ಲಿ ಕೊಳೆಯುವಂತಾಗಿವೆ.

ಚಿಕ್ಕಬಳ್ಳಾಪುರದಲ್ಲಿ ತರಕಾರಿಗಿಲ್ಲ ಬೆಲೆ

ಚಿಕ್ಕಬಳ್ಳಾಪುರ ಹೂವು, ಹಣ್ಣು, ತರಕಾರಿಗೆ ಖ್ಯಾತಿ ಪಡೆದಿದೆ. ಅಲ್ಲಿ ಬೆಳೆಯುವ ತರಕಾರಿಗಳು ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಮೆಟ್ರೋ ನಗರಗಳಿಗೆ ದಿನನಿತ್ಯ ರಫ್ತಾಗುತ್ತದೆ. ಆದರೆ ವಾಣಿಜ್ಯ ಸಿಲಿಂಡರ್​ಗಳ ಕೊರತೆಯಿಂದ ಬೆಂಗಳೂರು ಸೇರಿದಂತೆ ವಿವಿಧಡೆ ಹೋಟೆಲ್‍ಗಳು ಬಂದ್ ಆಗಿವೆ.

ಇದನ್ನೂ ಓದಿ: ಚಿಯಾ, ಕಲ್ಲಂಗಡಿ ಬೆನ್ನಲ್ಲೇ ಕರಬೂಜಕ್ಕೂ ತಟ್ಟಿದ ಯುದ್ಧದ ಬಿಸಿ: ದರ ಕುಸಿತ, ಹೊಲದಲ್ಲೇ ಕೊಳೆಯುತ್ತಿರುವ ಹಣ್ಣು

ಇದರಿಂದ ಚಿಕ್ಕಬಳ್ಳಾಪುರದ ತರಕಾರಿಗೆ ಬೆಲೆ ಇಲ್ಲದಂತಾಗಿದೆ. ಹಾಗಾಗಿ ತರಕಾರಿಗಳ ಬೆಲೆ ತೀವ್ರ ಕುಸಿತವಾಗಿದೆ. ಬೆಸಿಗೆಯಲ್ಲಿ ಕೆ.ಜಿ ಬೀನ್ಸ್ ಬೆಲೆ ಬರೋಬ್ಬರಿ 80 ರೂಪಾಯಿಯಿಂದ 100 ರೂಪಾಯಿವರೆಗೂ ಇರುತ್ತೆ, ಆದರೆ ಈ ಭಾರಿ ಮೂಟೆ ಬೀನ್ಸ್ ಬೆಲೆ 300 ರೂಪಾಯಿಯಿಂದ 400 ನೂರು ರೂಪಾಯಿಗೆ ಬಿಕಾರಿಯಾಗುತ್ತಿದೆ.

ಯಾವ ತರಕಾರಿಗೆ ಎಷ್ಟು ಬೆಲೆ?

ಇರಾನ್, ಇಸ್ರೇಲ್-ಅಮೇರಿಕ ಯುದ್ಧ ಆರಂಭವಾಗುವುದಕ್ಕೂ ಮುನ್ನ ತರಕಾರಿಗಳಿಗೆ ಒಳ್ಳೆಯ ಬೆಲೆಯಿತ್ತು. ಕಳೆದ 20 ದಿನಗಳಿಂದ ತರಕಾರಿಗಳ ಬೆಲೆ ತೀವ್ರ ಕುಸಿತಿದೆ. ಬೀನ್ಸ್ ಕೆಜಿಗೆ 20 ರೂ, ಕ್ಯಾರೆಟ್ 8 ರೂ, ಸೋರೆಕಾಯಿ 5 ರೂ, ಆಲೂಗಡ್ಡೆ 6 ರೂ, ಬೆಂಡೆಕಾಯಿ 10 ರೂ, ಈರುಳ್ಳಿ 12 ರೂ, ಮೂಲಂಗಿ 5 ರೂ, ಆಗಲಕಾಯಿ 15 ರೂ, ಕ್ಯಾಪ್ಸಿಕಂ 20 ರೂ, ಬದನೇಕಾಯಿ 2 ರೂ, ದರ ಕುಸಿದಿದೆ. ಇನ್ನು ಹಗಲು-ರಾತ್ರಿ ಕಷ್ಟಪಟ್ಟು ತರಕಾರಿ ಬೆಳೆದ ರೈತರು ಕಣ್ಣೀರು ಹಾಕುವಂತಾಗಿದೆ.

ಇದನ್ನೂ ಓದಿ: ಮಧ್ಯಪ್ರಾಚ್ಯದ ವಾರ್​​ ಎಫೆಕ್ಟ್​​: ರೈತರ ಕಣ್ಣಲ್ಲಿ ನೀರು ತರಿಸಿದ ಈರುಳ್ಳಿ; ಪಾತಾಳಕ್ಕಿಳಿದ ಬೆಲೆ

ಒಟ್ಟಿನಲ್ಲಿ ಗಲ್ಫ್​ ಯುದ್ಧ ಎಫೆಕ್ಟ್​ನಿಂದ ವಾಣಿಜ್ಯ ಸಿಲಿಂಡರ್ ಸಿಗದೇ ಹೋಟೆಲ್​​ ಉದ್ಯಮ ಕುಂಟುತ್ತಾ ಸಾಗಿದೆ. ಇದರಿಂದ ಹೋಟೆಲ್ ಉದ್ಯಮ ನಂಬಿಕೊಂಡಿದ್ದ ತರಕಾರಿ ವ್ಯಾಪಾರಕ್ಕೂ ಭಾರಿ ಹೊಡೆತ ಬಿದ್ದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:19 pm, Fri, 3 April 26

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ