AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗೇಪಲ್ಲಿ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ ಹೆಚ್​​ಡಿ ಕುಮಾರಸ್ವಾಮಿ! ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದ ಜೆಡಿಎಸ್ ಮುಖಂಡ

ಜೆಡಿಎಸ್ ಪಕ್ಷದಿಂದ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ನಾನೆ ಅಭ್ಯರ್ಥಿಯಾಗ್ತಿನಿ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನನ್ನ ಹೆಸರನ್ನೆ ಘೋಷಣೆ ಮಾಡಿದ್ದಾರೆ. ನಾನೆ ಶಾಸಕನೂ ಆಗ್ತಿನಿ ಅಂತ ಜೆಡಿಎಸ್ ಮುಖಂಡ ಡಿ.ಜೆ.ನಾಗರಾಜ ರೆಡ್ಡಿ ಈಗಲೇ ಘೋಷಣೆ ಮಾಡಿಕೊಂಡಿದ್ದಾರೆ.

ಬಾಗೇಪಲ್ಲಿ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ ಹೆಚ್​​ಡಿ ಕುಮಾರಸ್ವಾಮಿ! ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದ ಜೆಡಿಎಸ್ ಮುಖಂಡ
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಘೋಷಿಸಿದ ಹೆಚ್ಡಿ ಕುಮಾರಸ್ವಾಮಿ
TV9 Web
| Edited By: |

Updated on:Sep 03, 2021 | 10:25 AM

Share

ಚಿಕ್ಕಬಳ್ಳಾಪುರ: ಕೂಸು ಹುಟ್ಟುವುದಕ್ಕೂ ಮುನ್ನ ಕೂಲಾವಿ ಹೊಲಿಸಿದರು ಎಂಬ ಗಾದೆ ಮಾತು ಕೇಳಿರುತ್ತೀವಿ. ಈಗ ಇದಕ್ಕೆ ತಕ್ಕಂತೆ ಜೆಡಿಎಸ್ ಮುಖಂಡ ನಡೆದುಕೊಂಡಿದ್ದಾರೆ. 2023ರ ವಿಧಾನಸಭೆ ಚುನಾವಣೆಗೆ ಎರಡು ವರ್ಷ ಬಾಕಿ ಇರುವಾಗಲೇ ಅಭ್ಯರ್ಥಿ ಘೋಷಣೆ ಮಾಡಿಕೊಂಡಿದ್ದಾರೆ. ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ನಾನೆ ಅಭ್ಯರ್ಥಿಯಾಗ್ತಿನಿ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನನ್ನ ಹೆಸರನ್ನೆ ಘೋಷಣೆ ಮಾಡಿದ್ದಾರೆ. ನಾನೆ ಶಾಸಕನೂ ಆಗ್ತಿನಿ ಅಂತ ಜೆಡಿಎಸ್ ಮುಖಂಡ ಡಿ.ಜೆ.ನಾಗರಾಜ ರೆಡ್ಡಿ ಈಗಲೇ ಘೋಷಣೆ ಮಾಡಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಪ್ರಭಾವಿ ಜೆಡಿಎಸ್ ಮುಖಂಡ, ಪ್ರಭಾವಿ ಸುಪ್ರೀಂಕೋರ್ಟ್ ನ ವಿಶ್ರಾಂತ ನ್ಯಾಯಮೂರ್ತಿಗಳ ಹತ್ತಿರದ ಸಂಬಂಧಿಯೂ ಆಗಿರುವ ನಾಗರಾಜ್ ರೆಡ್ಡಿ, ಕೂಸು ಹುಟ್ಟುವುದಕ್ಕೂ ಮುನ್ನವೆ ಕೂಲಾವಿ ಹೊಲಿಸಿದಂತಿದೆ. ಇತ್ತೀಚೆಗೆ ಬಾಗೇಪಲ್ಲಿಯ ಜೆಡಿಎಸ್ ಪ್ರಭಾವಿ ಮುಖಂಡ ಹರಿನಾಥ್ ರೆಡ್ಡಿ ಹಾಗೂ ಜೆಡಿಎಸ್ ಮುಖಂಡ ಗೊಟ್ಟಿಗೇರೆ ಮಂಜುನಾಥ್ ನೇತೃತ್ವದಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಯವರನ್ನು ಗೆಸ್ಟ್ ಹೌಸ್ ನಲ್ಲಿ ಭೇಟಿ ಮಾಡಿದಾಗ ಅಲ್ಲೆ ಕುಮಾರಸ್ವಾಮಿಯವರು ಡಿ.ಜೆ. ನಾಗರಾಜ್ ರೆಡ್ಡಿಯವರೆ ಮುಂದಿನ ವಿಧಾನಸಭೆ ಚುನಾವಣೆಯ ಅಭ್ಯರ್ಥಿ ಎಂದು ಕಾರ್ಯಕರ್ತರ ಸಮ್ಮುಖದಲ್ಲೆ ಘೋಷಣೆ ಮಾಡಿದ್ದಾರೆ ಎಂದು ನಾಗರಾಜ್ ರೆಡ್ಡಿ ತಿಳಿಸಿದ್ದಾರೆ.

ಹಾಗೂ ಇಂದಿನಿಂದಲೇ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಹೆಚ್ಡಿಕೆ ಸೂಚಿಸಿದ್ದಾರಂತೆ. ಇದ್ರಿಂದ ಮುಂದಿನ 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗೇಪಲ್ಲಿ ಕ್ಷೇತ್ರದಿಂದ ನಾನೆ ಗೆದ್ದು ಶಾಸಕನಾಗ್ತಿನಿ ಅಂತ ಡಿ.ಜೆ. ನಾಗರಾಜ್ ರೆಡ್ಡಿ ಹೇಳಿಕೊಂಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಾಗೇಪಲ್ಲಿ ಕ್ಷೇತ್ರದಿಂದ ಟಿಕೆಟ್ ವಂಚಿತರಾಗಿದ್ದ ನಾಗರಾಜ್, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದರ ಮೂಲಕ ಪಕ್ಷದ ಅಧಿಕೃತ ಅಭ್ಯರ್ಥಿ ಸಿ.ಆರ್ ಮನೋಹರ್ ರ ಸೋಲಿಗೆ ಕಾರಣರಾಗಿದ್ರು. ಇದ್ರಿಂದ ಕಾಂಗ್ರೇಸ್ ಅಭ್ಯರ್ಥಿ ಎಸ್.ಎನ್.ಸುಬ್ಬಾರೆಡ್ಡಿಗೆ ಲಾಭವಾಗಿ ಪ್ರಸ್ತುತ ಎಸ್.ಎನ್.ಸುಬ್ಬಾರೆಡ್ಡಿ ಕಾಂಗ್ರೆಸ್ ಶಾಸಕರಾಗಿದ್ದಾರೆ.

ಇದ್ರಿಂದ ಜೆಡಿಎಸ್ ವರಿಷ್ಠರು ಹಿಂದಿನ ತಪ್ಪು ಮರುಕಳಿಸದಂತೆ ಈ ಭಾರಿ ಅಡ್ವಾನ್ಸ್ ಆಗಿ ಡಿ.ಜೆ.ನಾಗರಾಜ್ ರೆಡ್ಡಿಗೆ ಪಕ್ಷದ ಟಿಕೆಟ್ ನೀಡುವುದಾಗಿ ಘೋಷಣೆ ಮಾಡಿದ್ದು ಈ ವಿಷಯ ನಾಗರಾಜ್ ಹಾಗೂ ಜೆಡಿಎಸ್ ಕಾರ್ಯಕರ್ತರಲ್ಲಿ ಸಂತಸ ಹಿಮ್ಮಡಿಯಾಗುವಂತೆ ಮಾಡಿದೆ. ಇದ್ರಿಂದ ನಾಗರಜ್ ಮುಂಬರುವ ಚುನಾವಣೆಯಲ್ಲಿ ನಾನೆ ಗೆಲ್ಲೋದು, ನಾನೇ ಶಾಸಕನಾಗೊದು ಅಂತ ಬಡಾಯಿ ಕೊಚ್ಚಿಕೊಳ್ತಿದ್ದಾರೆ.

ಇದನ್ನೂ ಓದಿ: ಕೆಬಿಸಿಯಲ್ಲಿ ಗೆದ್ದು ಲಕ್ಷಾಧಿಪತಿಯಾದ ರಾಜಸ್ಥಾನದ ಸರ್ಕಾರಿ ಶಾಲಾ ಶಿಕ್ಷಕಿ ಆಯೆಷಾ; ಪ್ರಶಸ್ತಿಯ ಮೊತ್ತವನ್ನು ಏನು ಮಾಡುತ್ತಾರಂತೆ?

Published On - 10:24 am, Fri, 3 September 21

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ