AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಕೃತಿ ಪ್ರಿಯರಿಂದ ಪಂಚಗಿರಿಗಳಿಗೆ ಭಾರೀ ಬೇಡಿಕೆ; ಪ್ರವಾಸಿಗರಿಗೆ ಮುಕ್ತ ಅವಕಾಶ ನೀಡಲು ಸಜ್ಜುಗೊಂಡ ಅರಣ್ಯ ಇಲಾಖೆ

ಈಗಾಗಲೇ ನಂದಿಗಿರಿಧಾಮಕ್ಕೆ ಹೊಂದಿಕೊಂಡಿರುವ ಸ್ಕಂದಗಿರಿ ಹಾಗೂ ಆವುಲಬೆಟ್ಟಕ್ಕೆ, ಪರಿಸರ ಪ್ರವಾಸೋದ್ಯಮದಡಿ ಅರಣ್ಯ ಇಲಾಖೆ ಸಾರ್ವಜನಿಕರ ಪ್ರವಾಸಕ್ಕೆ ಅವಕಾಶ ನೀಡಿದೆ. ಎರಡು ಗಿರಿಧಾಮಗಳಲ್ಲಿ ಪ್ರತಿದಿನ ಸಾವಿರಾರು ಜನ ಪ್ರವಾಸಿಗರು ಬರುತ್ತಿದ್ದಾರೆ. ಪ್ರವೇಶ ಶುಲ್ಕದ ಹೆಸರಿನಲ್ಲಿ ಸರ್ಕಾರಕ್ಕೆ ಪ್ರತಿದಿನ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿದೆ.

ಪ್ರಕೃತಿ ಪ್ರಿಯರಿಂದ ಪಂಚಗಿರಿಗಳಿಗೆ ಭಾರೀ ಬೇಡಿಕೆ; ಪ್ರವಾಸಿಗರಿಗೆ ಮುಕ್ತ ಅವಕಾಶ ನೀಡಲು ಸಜ್ಜುಗೊಂಡ ಅರಣ್ಯ ಇಲಾಖೆ
ಪಂಚಗಿರಿ
TV9 Web
| Edited By: |

Updated on: Oct 06, 2021 | 10:12 AM

Share

ಚಿಕ್ಕಬಳ್ಳಾಪುರ: ದಿನೇ ದಿನೇ ಅರಣ್ಯ ಪ್ರವಾಸೋದ್ಯಮಕ್ಕೆ ಬೇಡಿಕೆ ಬರುತ್ತಿರುವ ಹಿನ್ನಲೆ, ರಾಜಧಾನಿ ಪಕ್ಕದಲ್ಲೇ ಇರುವ ಪಂಚಗಿರಿಗಳ ಸಾಲನ್ನು ಅರಣ್ಯ ಪ್ರವಾಸೋದ್ಯಮ ಮಂಡಳಿಯ ವ್ಯಾಪ್ತಿಗೆ ತಂದು ಪ್ರಕೃತಿ ಪ್ರಿಯರು, ಚಾರಣಿಗರು, ಪ್ರವಾಸಿಗರಿಗೆ ಮುಕ್ತ ಮಾಡಲು ಸರ್ಕಾರ ಯೋಜನೆ ರೂಪಿಸಿದೆ. ಕಾಂಕ್ರೀಟ್ ನಾಡಿನಿಂದ ಕೆಲ ಹೊತ್ತು ಆಚೆ ಹೋಗಿ ಸ್ವಚ್ಛಂದ ಪರಿಸರದಲ್ಲಿ ಕಾಲ ಕಳೆಯಬೇಕು. ಸುಂದರ ಪ್ರಕೃತಿಯಲ್ಲಿ ಕೆಲಕಾಲ ವಿಹರಿಸಬೇಕು ಎನ್ನುವ ಪ್ರಕೃತಿ ಪ್ರೀಯರಿಗೆ ಇಲ್ಲೊಂದು ಗುಡ್ ನ್ಯೂಸ್ ಇದೆ.

ರಾಜಧಾನಿ ಬೆಂಗಳೂರಿನಿಂದ ಕೂದಲಳತೆ ದೂರದಲ್ಲಿರುವ ನಂದಿಗಿರಿಧಾಮದ ಸುತ್ತಮುತ್ತ ಇರುವ ದಿವ್ಯಾಗಿರಿ, ವಿಷ್ಣುಗಿರಿ, ಕುಷ್ಮಂಡಗಿರಿ, ಚನ್ನಗಿರಿಗಳಲ್ಲಿ ಚಾರಣಕ್ಕೆ ಅವಕಾಶ ನೀಡಲು ಹಾಗೂ ಅರಣ್ಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸರ್ಕಾರ ಮುಂದಾಗಿದ್ದು, ನಂದಿಗಿರಿಧಾಮ ಸುತ್ತಮುತ್ತಲಿರುವ ಗಿರಿಧಾಮಗಳಲ್ಲಿ ಸಾರ್ವಜನಿಕರ ಪ್ರವಾಸಕ್ಕೆ ಅನುಮತಿ ನೀಡಲು ಯೋಜನೆ ರೂಪಿಸಿದೆ. ಇನ್ನೂ ಅನುಮತಿಯಿಂದ ಸಾಧಕ-ಬಾಧಕಗಳ ಅಧ್ಯಯನ ನಡೆಸಿದೆ. ಅಲ್ಲದೆ ಅರಣ್ಯ ಪ್ರವಾಸೋದ್ಯಮದಿಂದ ಸರ್ಕಾರಕ್ಕೆ ಹೆಚ್ಚಿನ ಲಾಭದ ನಿರೀಕ್ಷೆ ಮಾಡಲಾಗಿದೆ ಎಂದು ಪರಿಸರ ಪ್ರವಾಸೋಧ್ಯಮ ಮಂಡಳಿ ಅಧ್ಯಕ್ಷರಾದ ಮದನ್ ಗೋಪಾಲ್ ಹೇಳಿದ್ದಾರೆ.

ಈಗಾಗಲೇ ನಂದಿಗಿರಿಧಾಮಕ್ಕೆ ಹೊಂದಿಕೊಂಡಿರುವ ಸ್ಕಂದಗಿರಿ ಹಾಗೂ ಆವುಲಬೆಟ್ಟಕ್ಕೆ, ಪರಿಸರ ಪ್ರವಾಸೋದ್ಯಮದಡಿ ಅರಣ್ಯ ಇಲಾಖೆ ಸಾರ್ವಜನಿಕರ ಪ್ರವಾಸಕ್ಕೆ ಅವಕಾಶ ನೀಡಿದೆ. ಎರಡು ಗಿರಿಧಾಮಗಳಲ್ಲಿ ಪ್ರತಿದಿನ ಸಾವಿರಾರು ಜನ ಪ್ರವಾಸಿಗರು ಬರುತ್ತಿದ್ದಾರೆ. ಪ್ರವೇಶ ಶುಲ್ಕದ ಹೆಸರಿನಲ್ಲಿ ಸರ್ಕಾರಕ್ಕೆ ಪ್ರತಿದಿನ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿದೆ. ಇನ್ನೂ ಪಂಚಗಿರಿಗಳ ಸಾಲಿನಲ್ಲಿ ಕಂಡು ಬರುವ ತುಂತುರು ಮಳೆ, ಮಂಜಿನಾಟ, ಬೆಳ್ಳಿಮೋಡಗಳ ನೀನಾದ, ಆಕಾಶ-ಭೂಮಿ ಒಂದಾಗಿ ಹಾಲಿನ ನೊರೆಯಂತೆ ಭಾಸವಾಗ್ತಿರುವ ದೃಶ್ಯಗಳಿಗೆ ಪ್ರವಾಸಿಗರು ಮನಸೋತಿದ್ದಾರೆ. ಆದರೆ ಇರೊ ಬರೊ ಅರಣ್ಯ ಬೆಟ್ಟಗಳನ್ನು ಪ್ರವಾಸಕ್ಕೆ ಮುಕ್ತ ಮಾಡುವುದರಿಂದ ಅರಣ್ಯ ಅಪಾಯವಿದೆ ಎಂದು ಪರಿಸರ ಪ್ರಿಯರಾದ ಸದಾಶಿವಾ ಹೇಳಿದ್ದಾರೆ.

ಚಿಕ್ಕಬಳ್ಳಾಪುರದ ಪಂಚಗಿರಿಗಳ ಸಾಲು ರಾಜಧಾನಿ ಬೆಂಗಳೂರಿಗೆ ಹತ್ತಿರ ಇರುವ ಕಾರಣ, ಪ್ರಕೃತಿ ಪ್ರಿಯರು, ಪ್ರವಾಸಿಗರು ಹಾಗೂ ಚಾರಣಿಗರ ಮೆಚ್ಚುಗೆ ಪಡೆದಿವೆ. ಗಿರಿಸಾಲುಗಳಲ್ಲಿ ಕಂಡು ಬರುವ ಸುಂದರ ಪ್ರಕೃತಿ ವೈಭವ, ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ ಎನ್ನುವುದು ಮಾತ್ರ ಸತ್ಯ.

ವರದಿ: ಭೀಮಪ್ಪ ಪಾಟೀಲ್

ಇದನ್ನೂ ಓದಿ: ಉದ್ಯೋಗ ಸೃಷ್ಟಿಗೆ ಪ್ರವಾಸೋದ್ಯಮ ಅಗತ್ಯ: ವಿಶ್ವ ಪ್ರವಾಸೋದ್ಯಮ ದಿನದಂದು ಹಲವು ಸಚಿವರ ಪ್ರತಿಕ್ರಿಯೆ

ಬನ್ನೇರುಘಟ್ಟ ಜೈವಿಕ ಉದ್ಯಾನವನ ಪ್ರವೇಶ ಮುಕ್ತ; ಲಾಕ್​ಡೌನ್​ ನಂತರ ನವ ಉತ್ಸಾಹ ಪಡೆಯಲು ಕೊವಿಡ್​ ನಿಯಮ ಅನುಸರಿಸಿ ಭೇಟಿ ನೀಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!