AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿಗಿರಿಧಾಮಕ್ಕೆ ಬರುವ ಪ್ರವಾಸಿಗರನ್ನು ಸೆಳೆಯುತ್ತಿದೆ ಚನ್ನಗಿರಿ ಹಿಲ್ಸ್ ಜಲಪಾತ, ಹರಿಯುವ ನೀರಲ್ಲಿ ಪ್ರವಾಸಿಗರ ಮೋಜು-ಮಸ್ತಿ

ಅದು ಸುಂದರ ಕಾನನ.. ಮುಗಿಲೆತ್ತರಕ್ಕೆ ಬೆಳೆದು ನಿಂತಿರುವ ಗಿರಿ ಸಾಲುಗಳ ತಾಣ.. ರಾಜಧಾನಿ ಬೆಂಗಳೂರಿನ ಪಕ್ಕದಲ್ಲೇ ಮಲೆನಾಡನ್ನೇ ನೆನಪಿಸುವ ಪಂಚಗಿರಿಗಳ ಸಾಲು.. ಇಂತಹ ಸಾಲಿನಲ್ಲೊಂದು ಈಗ ಸುಂದರ ಜಲಪಾತ ಸೃಷ್ಟಿಯಾಗಿದೆ.. ಇದೇ ಜಲಪಾತ ನೋಡಲು ಜನ ಮುಗಿಬೀಳ್ತಿದ್ದಾರೆ.

ನಂದಿಗಿರಿಧಾಮಕ್ಕೆ ಬರುವ ಪ್ರವಾಸಿಗರನ್ನು ಸೆಳೆಯುತ್ತಿದೆ ಚನ್ನಗಿರಿ ಹಿಲ್ಸ್ ಜಲಪಾತ, ಹರಿಯುವ ನೀರಲ್ಲಿ ಪ್ರವಾಸಿಗರ ಮೋಜು-ಮಸ್ತಿ
ಚನ್ನಗಿರಿ ಹಿಲ್ಸ್ ಜಲಪಾತ
TV9 Web
| Updated By: ಆಯೇಷಾ ಬಾನು|

Updated on: Jul 28, 2021 | 9:54 AM

Share

ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ಹೊಂದಿಕೊಂಡಿರುವ ಚನ್ನಗಿರಿ ಹಿಲ್ಸ್ ಈಗ ಪ್ರವಾಸಿಗರ ಹಾಟ್ ಫೇವರಿಟ್ ಸ್ಪಾಟ್ ಆಗಿದೆ. ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ಬೆಟ್ಟದಲ್ಲಿ ಸುಂದರ ಜಲಪಾತ ಸೃಷ್ಟಿಯಾಗಿದೆ. ಹೀಗಾಗಿ ನಂದಿಗಿರಿಧಾಮ ನೋಡಲು ಬಂದವರು ಚನ್ನಗಿರಿಯ ಜಲಪಾತ ನೋಡಿ ಖುಷಿ ಪಡ್ತಿದ್ದಾರೆ.

ಇನ್ನು, ಬೆಟ್ಟದ ತುಂಬಾ ಇರೋ ಇಳಿಜಾರುಗಳಲ್ಲಿ ನೀರು ಧುಮ್ಮಿಕ್ಕುತ್ತಿದೆ. ಬೆಟ್ಟದಲ್ಲಿ ಸಂಗ್ರಹವಾಗುವ ಮಳೆ ನೀರು ಒಂದೆಡೆ ಸೇರಿ ನೂರು ಅಡಿ ಮೇಲಿಂದ ನೀರು ಧುಮುಕುತ್ತಿದೆ. ಇನ್ನೂ ಜಲಪಾತದ ಸುತ್ತಲೂ ಪಾಚಿಗಟ್ಟಿದೆ. ಹೀಗಾಗಿ ನೀರು ನೋಡೋ ಹುಮ್ಮಸ್ಸಿನಲ್ಲಿ ಪ್ರವಾಸಿಗರು ಬೀಳುತ್ತಿದ್ದಾರೆ. ಕಳೆದ ವರ್ಷವಂತೂ ಜಲಪಾತ ನೋಡಲು ಬಂದ ಕೆಲವು ಪ್ರವಾಸಿಗರು, ಜೀವ ಕಳೆದುಕೊಂಡಿದ್ರು. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಭಾರಿ ಚಿಕ್ಕಬಳ್ಳಾಪುರ ಜಿಲ್ಲಾ ಅರಣ್ಯ ಇಲಾಖೆ, ಸಿಬ್ಬಂದಿಯನ್ನು ನಿಯೋಜಿಸಿದೆ.

ಸದ್ಯ, ಲಾಕ್ಡೌನ್ನಿಂದ ಬೇಸತ್ತಿದ್ದ ಜನ, ರಿಲ್ಯಾಕ್ಸ್ ಆಗಲು ನಂಧಿಗಿರಿಧಾಮದತ್ತ ಆಗಮಿಸುತ್ತಾರೆ. ಆದ್ರೆ ನಂದಿಗಿರಿಧಾಮಕ್ಕೆ ಪ್ರತಿದಿನ ನಿಗಧಿತ ಪ್ರವಾಸಿಗರ ಪ್ರವೇಶಕ್ಕೆ ಮಾತ್ರ ಅವಕಾಶವಿದೆ. ಜೊತೆಗೆ ವಿಕೇಂಡ್ನಲ್ಲಿ ಸಂಪೂರ್ಣ ಬಂದ್ ಆಗಲಿದೆ. ಹೀಗಾಗಿ ಪ್ರವಾಸಿಗರು ಚನ್ನಗಿರಿ ಫಾಲ್ಸ್ ನೋಡಲು ಬರ್ತಿದ್ದಾರೆ.

channagiri hills falls

ಚನ್ನಗಿರಿ ಹಿಲ್ಸ್ ಜಲಪಾತ

channagiri hills falls

ಚನ್ನಗಿರಿ ಹಿಲ್ಸ್ ಜಲಪಾತ

channagiri hills falls

ಚನ್ನಗಿರಿ ಹಿಲ್ಸ್ ಜಲಪಾತ

ಇದನ್ನೂ ಓದಿ: ತುಂಬಿ ಹರಿಯುವ ಸೇತುವೆ ಮೇಲೆ ದಾಟಲು ಯತ್ನಿಸಿದ ಲಾರಿ ಚಾಲಕ; ಗದಗದ ಬೆಣ್ಣೆ ಹಳ್ಳದಲ್ಲಿ ತಪ್ಪಿತು ಭಾರಿ ಅನಾಹುತ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!