AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಚೇನಹಳ್ಳಿ ಕೆರೆ ಕಟ್ಟೆಯಲ್ಲಿ ನೀರು ಸೋರಿಕೆ; ರಾತ್ರೋರಾತ್ರಿ ದುರಸ್ತಿ ಕಾರ್ಯ ಮಾಡಿದ ಸ್ಥಳೀಯರು, ಜಿಲ್ಲೆಯ 13 ರಸ್ತೆಗಳ ಸಂಚಾರ ಮಾರ್ಗ ಬಂದ್

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಕೆರೆಕಟ್ಟೆಯಲ್ಲಿ ನೀರು ಸೋರಿಕೆ ಹಿನ್ನೆಲೆಯಲ್ಲಿ ಸ್ಥಳೀಯರು ರಾತ್ರೋರಾತ್ರಿ ಕೆರೆಕಟ್ಟೆ ದುರಸ್ತಿ ಕಾರ್ಯ ಮಾಡಿದ್ದಾರೆ.

ಮಂಚೇನಹಳ್ಳಿ ಕೆರೆ ಕಟ್ಟೆಯಲ್ಲಿ ನೀರು ಸೋರಿಕೆ; ರಾತ್ರೋರಾತ್ರಿ ದುರಸ್ತಿ ಕಾರ್ಯ ಮಾಡಿದ ಸ್ಥಳೀಯರು, ಜಿಲ್ಲೆಯ 13 ರಸ್ತೆಗಳ ಸಂಚಾರ ಮಾರ್ಗ ಬಂದ್
ಮಂಚೇನಹಳ್ಳಿ ಕೆರೆ ಕಟ್ಟೆಯಲ್ಲಿ ನೀರು ಸೋರಿಕೆ; ರಾತ್ರೋರಾತ್ರಿ ದುರಸ್ತಿ ಕಾರ್ಯ ಮಾಡಿದ ಸ್ಥಳೀಯರು
TV9 Web
| Edited By: |

Updated on: Nov 21, 2021 | 9:00 AM

Share

ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆ ಭಯ ಹುಟ್ಟಿಸುತ್ತಿದೆ. ಸದ್ಯ ಭಾರಿ ಮಳೆಗೆ ಒಳ ಹರಿವು ಹೆಚ್ಚಳವಾಗಿ ಮಂಚೇನಹಳ್ಳಿ ಕೆರೆ ಕಟ್ಟೆಯಲ್ಲಿ ನೀರು ಸೋರಿಕೆಯಾಗಿದ್ದು ಸ್ಥಳೀಯರು ಕೆರೆಯ ಕಟ್ಟೆ ರಿಪೇರಿ ಮಾಡಿದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಕೆರೆಕಟ್ಟೆಯಲ್ಲಿ ನೀರು ಸೋರಿಕೆ ಹಿನ್ನೆಲೆಯಲ್ಲಿ ಸ್ಥಳೀಯರು ರಾತ್ರೋರಾತ್ರಿ ಕೆರೆಕಟ್ಟೆ ದುರಸ್ತಿ ಕಾರ್ಯ ಮಾಡಿದ್ದಾರೆ. ಮರಳು ಚೀಲ, ಮಣ್ಣು ಹಾಕಿ ಸೋರುತ್ತಿದ್ದ ಕೆರೆ ರಿಪೇರಿ ಮಾಡಿದ್ದಾರೆ. ಕೆರೆ ಹೊಡೆದ್ರೆ ಭಾರಿ ಅನಾವುತ ಸಂಭವಿಸುವ ಅಪಾಯ ಹಿನ್ನಲೆ ಸ್ಥಳೀಯರೇ ಕೆರೆ ರಿಪೇರಿ ಮಾಡಿದ್ದಾರೆ. ಅಧಿಕಾರಿಗಳ ಅವ್ಯವಸ್ಥೆಯನ್ನು ದೂರುವುದರ ಬದಲು ಸ್ವತಃ ಆಗಮಿಸಿ ಕೆರೆ ರಿಪೇರಿ ಮಾಡಿ ಮಾದರಿ ಆಗಿದ್ದಾರೆ.

40 ವರ್ಷಗಳ ನಂತರ ಕೊಡಿ ಹರಿದ ಅಮಾನಿ ಇನ್ನು ಮತ್ತೊಂದೆಡೆ ಚಿಕ್ಕಬಳ್ಳಾಫುರ ಜಿಲ್ಲಾಡಳಿತ ಭವನದ ಬಳಿ ಇರುವ ಅಮಾನಿ ಗೋಪಾಲಕೃಷ್ಣ ಕೆರೆ 40 ವರ್ಷಗಳ ನಂತರ ಕೊಡಿ ಹರಿದಿದೆ. ಕೆರೆಯ ಕೊಡಿ ನೀರು ನೋಡಿ ಗ್ರಾಮಸ್ಥರು ಫುಲ್ ಖುಷ್ ಆಗಿದ್ದಾರೆ. ಸುಮಾರು 300 ಎಕರೆಗೂ ಹೆಚ್ಚು ಪ್ರದೇಶದಲ್ಲಿರುವ ಅಮಾನಿ ಗೋಪಾಲಕೃಷ್ಣ ಕೆರೆ ತುಂಬಿ ಶಿಡ್ಲಘಟ್ಟದ ಕೆರೆಗಳಿಗೆ ನೀರಿನ ಹರಿವು ಹೆಚ್ಚಳವಾಗಿದೆ.

ಜಿಲ್ಲೆಯ 13 ರಸ್ತೆಗಳ ಸಂಚಾರ ಮಾರ್ಗ ಬಂದ್ ಸದ್ಯದ ಪರಿಸ್ಥಿತಿ ನೋಡಿದ್ರೆ ಹೊರಗಿನವರು ಕೆಲ ದಿನಗಳ ಕಾಲ ಚಿಕ್ಕಬಳ್ಳಾಪುರ ಜಿಲ್ಲೆಯತ್ತ ತಲೆ ಹಾಕದಿರುವುದೇ ಒಳ್ಳೆಯದು. ಚಿಕ್ಕಬಳ್ಳಾಫುರ ಜಿಲ್ಲೆಯಲ್ಲಿ ಮಳೆ ನಿಂತರೂ ನೀರಿನ ಹರಿವು ನಿಂತಿಲ್ಲ. ಜಿಲ್ಲೆಯ 13 ರಸ್ತೆಗಳ ಸಂಚಾರ ಮಾರ್ಗ ಬಂದ್ ಹಾಗೂ ಬದಲಾವಣೆ ಮಾಡಲಾಗಿದೆ. ಕೆಲವೆಡೆ ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿದೆ. ಇನ್ನೂ ಕೆಲವೆಡೆ ಸೇತುವೆಗಳೇ ಮುರಿದು ಬಿದ್ದಿವೆ. ಶಿಡ್ಲಘಟ್ಟ ತಾಲೂಕಿನ ದೊಡ್ಡಬಂದರುಘಟ್ಟ ಬ್ರಿಡ್ಜ್ ಮುರಿದು ಬಿದ್ದಿದೆ. ಚಿಂತಾಮಣಿಯ ವೇಗಲಹಳ್ಳಿ ಗ್ರಾಮದ ಬಳಿ ಬ್ರಿಡ್ಜ್ ಮುರಿದಿದೆ. ಹಾಗೂ ಚಿಂತಾಮಣಿ ತಾಲೂಕಿನ ಪಾಪತಿಮ್ಮನಹಳ್ಳಿ ಬಳಿ ಬ್ರಿಡ್ಜ್ ಮುರಿದಿದೆ. ಕೆಲವು ಕಡೆ ಸೇತುವೆಗಳು ತುಂಬಿ ಹರಿದಿದ್ದು ರಸ್ತೆಗಳು ಜಲಾವೃತವಾಗಿ ಅಪಾಯದಲ್ಲಿವೆ. ಮುಂಜಾಗೃತಾ ಕ್ರಮವಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗುತ್ತಿದೆ.

Heavy Rain in chikkaballapur

ಜಿಲ್ಲೆಯ 13 ರಸ್ತೆಗಳ ಸಂಚಾರ ಮಾರ್ಗ ಬಂದ್

Heavy Rain in chikkaballapur

ಜಿಲ್ಲೆಯ 13 ರಸ್ತೆಗಳ ಸಂಚಾರ ಮಾರ್ಗ ಬಂದ್

ಇದನ್ನೂ ಓದಿ: ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ; ನದಿ ಪಾತ್ರಕ್ಕೆ ತೆರಳದಂತೆ ಡಂಗೂರ ಸಾರಿ ಜನರಿಗೆ ಎಚ್ಚರಿಕೆ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್