AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ್ಟಮೆಂಟ್, ಕಂಪನಿಗಳಿಗೆ ತಾನು ಬೆಳೆದ ಮಾವು ರುಚಿ ಹಚ್ಚಿಸಿದ ರೈತ: ಭರ್ಜರಿ ಆದಾಯ ಗಳಿಸಿದ

ಹಣ್ಣುಗಳ ರಾಜ ಮಾವಿನ ಹಣ್ಣು ಸಿಜನ್. ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳ ಮಾವಿನ ಹಣ್ಣುಗಳು ಈ ಭಾರಿ ಒಂದೇ ಸಮಯಕ್ಕೆ ಫಸಲು ಬಂದಿವೆ. ಇದರಿಂದ ಮರುಕಟ್ಟೆಯಲ್ಲಿ ಮಾವಿನ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. ಆದರೆ, ಇಮಾಮ್​ ಪಸಂದ್​ ತಳಿಯ ಮಾವಿನ ಹಣ್ಣಿಗೆ ಮಾತ್ರ ಭಾರಿ ಡಿಮ್ಯಾಂಡ್ ಇದ್ದು, ಬೆಂಗಳೂರಿನ ಅಪಾರ್ಟ್ಮೆಂಟ್ ನಿವಾಸಿಗಳು, ಪ್ರತಿಷ್ಠಿತ ಕಂಪನಿಗಳ ಉದ್ಯೋಗಿಗಳು ಇಮಾಮ್​ ಪಸಂದ್​ ತಳಿಯ ಮಾವಿನ ಹಣ್ಣನ್ನು ಆರ್ಡರ್ ಮಾಡಿ ತರಿಸಿಕೊಳ್ಳುತ್ತಿದ್ದಾರೆ. ಈ ಇಮಾಮ್​ ಪಸಂದ್​ ತಳಿಯ ಮಾವಿನ ಹಣ್ಣಿನ ವಿಶೇಷತೆ ಏನು? ಇಲ್ಲಿದೆ ವಿವರ

ಅಪಾರ್ಟಮೆಂಟ್, ಕಂಪನಿಗಳಿಗೆ ತಾನು ಬೆಳೆದ ಮಾವು ರುಚಿ ಹಚ್ಚಿಸಿದ ರೈತ: ಭರ್ಜರಿ ಆದಾಯ ಗಳಿಸಿದ
ರೈತ ಸುರೇಂದ್ರ ಗೌಡ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ವಿವೇಕ ಬಿರಾದಾರ|

Updated on: Jun 15, 2025 | 4:16 PM

Share

ಚಿಕ್ಕಬಳ್ಳಾಪುರ, ಜೂನ್​ 15: ಹಗಲು ರಾತ್ರಿ ಕಷ್ಟಪಟ್ಟು ಬೆಳೆದ ಮಾವಿನ ಹಣ್ಣಿಗೆ (Mango) ಈ ಸಲ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇಲ್ಲ. ಮಾವಿನ ಹಣ್ಣಿಗೆ ಬೆಂಬಲ ಬೆಲೆ ನೀಡುವಂತೆ ಕೋಲಾರ (Kolar) ಜಿಲ್ಲೆಯ ಮಾವು ಬೆಳೆಗಾರರು, ಶ್ರೀನಿವಾಸಪುರ ತಾಲೂಕನ್ನು ಬಂದ್ ಮಾಡಿ, ಬೆಳೆದ ಮಾವಿನ ಹಣ್ಣುಗಳನ್ನು ರಸ್ತೆಗೆ ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ನಡುವೆ ಇಮಾಮ್ ಪಸಂದ್ ಮಾವಿನ ತಳಿಗೆ ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್ ಬಂದಿದೆ. ಕೆಜಿ ಇಮಾಮ್ ಪಸಂದ್ ಮಾವಿನ ಹಣ್ಣು (Imam Pasand Mango) 250 ರೂಪಾಯಿಗೆ ಮಾರಾಟವಾಗುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಕಂಬದಹಳ್ಳಿ ಗ್ರಾಮದ ಪ್ರಗತಿಪರ ರೈತ ಸುರೇಂದ್ರಗೌಡ ಎಂಬುವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಇಮಾಮ್ ಪಸಂದ್ ಮಾವು ಬೆಳೆದಿದ್ದು ನೇರವಾಗಿ ಅವರೇ ಮಾರಾಟ ಮಾಡುವುದರ ಮೂಲಕ ಕೈತುಂಬ ಹಣ ಸಂಪಾದನೆ ಮಾಡುತ್ತಿದ್ದಾರೆ.

ಇನ್ನು, ಆಂಧ್ರ ಪ್ರದೇಶ, ತಮಿಳುನಾಡಿನಲ್ಲಿ ಮಾತ್ರ ಹೇರಳವಾಗಿ ಬೆಳೆಯುವ ಮಾವಿನ ಹಣ್ಣನ್ನು ಚಿಕ್ಕಬಳ್ಳಾಪುರ ರೈತ ಸುರೇಂದ್ರ ಗೌಡ ಬೆಳೆದಿದ್ದು, ಒಂದೊಂದು ಕಾಯಿ ಒಂದು ಕೆಜಿ ತೂಗುತ್ತಿದೆ. ಇಳುವರಿ ಕಡಿಮೆಯಾಗಿದ್ದರೂ, ಗಾತ್ರ ಮಾತ್ರ ದೊಡ್ಡದಾಗಿದೆ.

ಇದನ್ನೂ ಓದಿ
Image
ಚಿಕ್ಕಬಳ್ಳಾಪುರದ ಹಲಸು ಬಲು ಸೊಗಸು: ಹೈದರಾಬಾದ್​​ನಲ್ಲೂ ಭಾರೀ ಡಿಮ್ಯಾಂಡ್
Image
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
Image
ನಂದಿ ಬೆಟ್ಟಕ್ಕೆ 5 ದಿನ ಪ್ರವಾಸಿಗರಿಗೆ ನಿರ್ಬಂಧ
Image
ಮಸೀದಿ ಕೊಠಡಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಮೌಲ್ವಿ ತಂದೆಯಿಂದಲೇ ಕೃತ್ಯ

ಇಮಾಮ್ ಪಸಂದ್ ಮಾವಿನ ಸವಿರುಚಿ ನೋಡಿರುವ ಬೆಂಗಳೂರಿನ ಅಪಾರ್ಟ್ಮೆಂಟ್ ನಿವಾಸಿಗಳು, ಪ್ರತಿಷ್ಠಿತ ಕಂಪನಿಗಳ ಉದ್ಯೋಗಿಗಳು ಈ ಹಣ್ಣುಗಳನ್ನು ನೇರವಾಗಿ ರೈತರಿಗೆ ಆರ್ಡರ್ ಕೊಟ್ಟು ತರಿಸಿಕೊಳ್ಳುತ್ತಿದ್ದಾರೆ. ರೈತ ಸುರೇಂದ್ರ ಗೌಡ ಅವರು ಯಾವುದೇ ಕೆಮಿಕಲ್ ಬಳಸದೆ ನೈಸರ್ಗಿಕ ವಿಧಾನದ ಮೂಲಕ ಹಣ್ಣುಗಳನ್ನು ಬೆಳೆದು ಮಾರಾಟ ಮಾಡುತ್ತಿದ್ದಾರೆ.

ಇದನ್ನೂ ಓದಿ: ತೋತಾಪುರಿ‌ ನಿಷೇಧ: ಕರ್ನಾಟಕ ಮಾವು ಬೆಳಗಾರರ ಹೊಟ್ಟೆ ಮೇಲೆ ಹೊಡೆದ ಆಂಧ್ರಪ್ರದೇಶ

ಓರ್ವ ಮುಸ್ಲಿಂ ರಾಜನ ಮೂಲಕ ಆಂಧ್ರಕ್ಕೆ ಎಂಟ್ರಿ ಪಡೆದಿದ್ದ ಇಮಾಮ್ ಪಸಂದ್ ಅನ್ನೊ ಮಾವಿನ ತಳಿ, ಈಗ ರಾಜ್ಯಕ್ಕೂ ಕಾಲಿಟ್ಟಿದ್ದು ಅದರ ಸವಿರುಚಿಗೆ ಗ್ರಾಹಕರು ಮಾರು ಹೋಗಿದ್ದಾರೆ.

ಮಾವಿಗೆ ಬೆಂಬಲ ಬೆಲೆ ನೀಡುವುದಾಗಿ ಸಿಎಂ ಭರವಸೆ

ತೋತಾಪುರಿ ಮಾವಿಗೆ ಬೆಂಬಲ ಬೆಲೆ ನೀಡುವ ವಿಚಾರವನ್ನು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು. ಗೌರಿಬಿದನೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ತೋತಾಪುರಿ ಮಾವಿಗೆ ಬೆಂಬಲ ಬೆಲೆ ನೀಡುವಂತೆ ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಮನವಿ ಮಾಡಿದ್ದಾರೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ