AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HN Valley ಎಫೆಕ್ಟ್​! ಜಿಲ್ಲೆಯೆಲ್ಲಾ ಬರ ಇದ್ದರೂ ಚಿಕ್ಕಬಳ್ಳಾಪುರ ತಾಲ್ಲೂಕು ಹಸಿರು ಸಿರಿಸಂಪನ್ನ

ಹಲವು ವರ್ಷಗಳಿಂದ ಬಯಲುಸೀಮೆ ಬರದನಾಡು ಎಂಬ ಕುಖ್ಯಾತಿ ಹೊಂದಿದ್ದ ಚಿಕ್ಕಬಳ್ಳಾಪುರ ತಾಲ್ಲೂಕು, ಈಗ ಮಿರಿ ಮಿರಿ ಮಿಂಚುತಿದೆ, ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲದ ಕಾರಣ ರಾಜ್ಯ ಸರಕಾರ ಚಿಕ್ಕಬಳ್ಳಾಪುರ ತಾಲ್ಲೂಕನ್ನೂ ಬರಪೀಡಿತ ಎಂದು ಘೋಷಿಸಿದೆ. ಆದರೆ ಚಿಕ್ಕಬಳ್ಳಾಪುರ ತಾಲ್ಲೂಕು ಹೆಸರಿಗಷ್ಟೇ ಬರಪೀಡಿತ ತಾಲ್ಲೂಕು ವಾಸ್ತವಿಕವಾಗಿ ಫಲಪುಷ್ಪ ಗಿರಿಧಾಮಗಳ ನಾಡಾಗಿ ಕಂಗೊಳಿಸುತ್ತಿದೆ.

HN Valley ಎಫೆಕ್ಟ್​! ಜಿಲ್ಲೆಯೆಲ್ಲಾ ಬರ ಇದ್ದರೂ ಚಿಕ್ಕಬಳ್ಳಾಪುರ ತಾಲ್ಲೂಕು ಹಸಿರು ಸಿರಿಸಂಪನ್ನ
ಜಿಲ್ಲೆಯೆಲ್ಲಾ ಬರ ಇದ್ದರೂ ಚಿಕ್ಕಬಳ್ಳಾಪುರ ತಾಲ್ಲೂಕು ಹಸಿರು ಸಿರಿಸಂಪನ್ನ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Sep 23, 2023 | 7:06 PM

Share

ಆ ಜಿಲ್ಲೆಯ ಎಲ್ಲಾ ತಾಲೂಕುಗಳು ತೀವ್ರತರವಾದ ಬರದಿಂದ ನಲುಗಿವೆ. ಆದ್ರೆ ಅದೊಂದು ತಾಲೂಕು ಮಾತ್ರ ಬಯಲು ಸೀಮೆಯಲ್ಲೂ ಮಲೆನಾಡಿನಂತೆ ಕಂಗೊಳಿಸುತ್ತಿದೆ, ಎಲ್ಲಿ ನೋಡಿದ್ರೂ ಎತ್ತ ನೋಡಿದ್ರೂ ಹಚ್ಚ ಹಸಿರಿನ ಹೊದಿಕೆ, ಕಣ್ಣು ಹಾಯಿಸಿದ ಕಡೆ, ಹೂ ಹಣ್ಣು, ತರಕಾರಿ ಸೇರಿದಂತೆ ತೋಟಗಾರಿಕೆ ಬೆಳೆಗಳು ನಳನಳಿಸುತ್ತಿವೆ. ಅಷ್ಟಕ್ಕೂ ಅದೆಲ್ಲಿ ಅದ್ಯಾಕೆ ಅಂತೀರಾ? ಈ ವರದಿ ನೋಡಿ!! ಹೀಗೆ ಕಣ್ಣು ಹಾಯಿಸಿದಷ್ಟೂ ಕಾಣುತ್ತಿರುವ ಹಚ್ಚ ಹಸಿರಿನ ಹೊದಿಕೆ, ಸುಗಂಧ ಬೀರುತ್ತಿರುವ ಹೂವಿನ ತೋಟಗಳು, ತುಂಬಿ ತುಳುಕುತ್ತಿರುವ ಕೆರೆ ಕುಂಟೆಗಳು ಈ ದೃಶ್ಯಗಳು ಕಂಡುಬಂದಿದ್ದು ಬರಪೀಡಿತ ಜಿಲ್ಲೆಯ ಎಂದು ಹಣೆಪಟ್ಟಿ ಅಂಟಿಸಿಕೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ.

ಹಲವು ವರ್ಷಗಳಿಂದ ಬಯಲುಸೀಮೆ ಬರದನಾಡು ಎಂಬ ಕುಖ್ಯಾತಿ ಹೊಂದಿದ್ದ ಚಿಕ್ಕಬಳ್ಳಾಪುರ ತಾಲ್ಲೂಕು, ಈಗ ಮಿರಿ ಮಿರಿ ಮಿಂಚುತಿದೆ ,ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲದ ಕಾರಣ ರಾಜ್ಯ ಸರಕಾರ ಚಿಕ್ಕಬಳ್ಳಾಪುರ ತಾಲ್ಲೂಕನ್ನೂ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿದೆ. ಆದರೆ ಚಿಕ್ಕಬಳ್ಳಾಪುರ ತಾಲ್ಲೂಕು ಹೆಸರಿಗಷ್ಟೇ ಬರಪೀಡಿತ ತಾಲ್ಲೂಕು ವಾಸ್ತವಿಕವಾಗಿ ಚಿಕ್ಕಬಳ್ಳಾಫುರ ತಾಲ್ಲೂಕು ಫಲಪುಷ್ಪ ಗಿರಿಧಾಮಗಳ ನಾಡಾಗಿ ಕಂಗೊಳಿಸುತ್ತಿದೆ.

ಸಹಜವಾಗಿ ಜಿಲ್ಲೆಯ ರೈತರು, ಮಳೆಯನ್ನು ಅವಲಂಬಿಸಿ ಇದುವರೆಗೂ ರಾಗಿ ಜೋಳ, ನೆಲಗಡಲೆ ಸೇರಿದಂತೆ ಸಾಂಪ್ರದಾಯಕ ಬೆಳೆಗಳನ್ನು ಬೆಳೆಯುತ್ತಿದ್ರು. ಆದ್ರೆ  ಹೆಚ್ ಎನ್ ವ್ಯಾಲಿ ಯೋಜನೆಯ ನೀರಿನಿಂದ ಚಿಕ್ಕಬಳ್ಳಾಪುರ ತಾಲ್ಲೂಕುಗಳಲ್ಲಿ ಬಹುತೇಕ ಕೆರೆಗಳು ತುಂಬಿದ್ದು ಅಂತರ್ಜಲದ ಮಟ್ಟ ಹೆಚ್ಚಾಗಿದೆ. ಇದ್ರಿಂದ ರೈತರು ಸಾಂಪ್ರದಾಯಕ ಬೆಳೆಗಳ ಬದಲು ಹೂ ಹಣ್ಣು ತರಕಾರಿ ಸೇರಿದಂತೆ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ.

ಜಿಲ್ಲೆಯ ವಿವಿಧೆಡೆ ಎಚ್.ಎನ್ ವ್ಯಾಲಿ ಯೋಜನೆ ನೀರು ಜುಳು ಜುಳು ಹರಿಯುತ್ತಿರುವ ಕಾರಣ ಚಿಕ್ಕಬಳ್ಳಾಪುರ ತಾಲೂಕು ಬಯಲು ಸೀಮೆಯ ಮಲೆನಾಡು ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:03 pm, Sat, 23 September 23

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ