AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮಾನದ ಭೂತ: ಪತ್ನಿಯ ಮುಖವನ್ನು ಚಾಕುವಿನಿಂದ ವಿರೂಪಗೊಳಿಸಿದ ಪತಿ

ಅವನು ಒಂದಲ್ಲಂತ ಮೂರು ಮದುವೆಯಾಗಿದ್ದನಂತೆ, ರಾತ್ರಿ ಆದ್ರೆ ಸಾಕು ಕುಡಿದು ಬಂದು ಹಿಂಸೆ ಕೊಡುತ್ತಿದ್ದನಂತೆ. ಇದರಿಂದ ಇಬ್ಬರು ಪತ್ನಿಯರು ಇವನ ಕಾಟ ತಾಳದೆ ಬಿಟ್ಟು ಹೋಗಿದ್ದಾರೆ. ಇನ್ನೂ ಎಲ್ಲಾ ಕಿರುಕುಳ, ಚಿತ್ರಹಿಂಸೆ ಸಹಿಸಿಕೊಂಡು ಇದ್ದ ಮೂರನೇ ಹೆಂಡ್ತಿ ಮೇಲೆ ಪತಿ ಅನುಮಾನಪಟ್ಟಿದ್ದು, ಆಕೆಯ ಮುಖವನ್ನೇ ವಿರೂಪಗೊಳಿಸಿ ವಿಕೃತಿ ಮೆರೆದಿದ್ದಾನೆ.

ಅನುಮಾನದ ಭೂತ: ಪತ್ನಿಯ ಮುಖವನ್ನು ಚಾಕುವಿನಿಂದ ವಿರೂಪಗೊಳಿಸಿದ ಪತಿ
Chikkaballapur Husband Wife
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jul 07, 2025 | 9:35 PM

Share

ಚಿಕ್ಕಬಳ್ಳಾಪುರ, (ಜುಲೈ 07): ಪತ್ನಿ (Wife) ಮೇಲಿನ ಅನುಮಾನದಿಂದ ಪತಿರಾಯನೊಬ್ಬ (Husband) ಆಕೆ ಮುಖವನ್ನು ವಿರೂಪಗೊಳಿಸಿದ ಅಮಾನವೀಯ ಘಟನೆ ಚಿಕ್ಕಬಳ್ಳಾಪುರದಲ್ಲಿ (Chikkaballapur) ನಡೆದಿದೆ. ಅಶ್ವತ್ಥನಾರಾಯಣ ಎನ್ನುವಾತ ತನ್ನ ಪತ್ನಿ ಪೂಜಾಳ ನಡತೆ ಮೇಲೆ ಅನುಮಾನ ಪಟ್ಟಿದ್ದು, ಯಾರೂ ನೋಡಬಾರದೆಂದು ಚಾಕುವಿನಿಂದ ಪತ್ನಿ ಮುಖ ಕೊಯ್ದು ವಿರೂಪಗೊಳಿಸಿ ವಿಕೃತಿ ಮೆರೆದಿದ್ದಾನೆ. ಅಶ್ವತ್ಥನಾರಾಯಣ ಈಗಾಗಲೇ ಎರೆಡು ಮದುವೆಯಾಗಿದ್ದು, ಇದೀಗ ಮೂರನೇ ಹೆಂಡ್ತಿ ಪೂಜಾಳ ಮೇಲೆ ಅನುಮಾನಪಟ್ಟು ಆಕೆಯ  ಮುಖವನ್ನು ಚಾಕುವಿನಿಂದ  ಕೊಯ್ದು ಅಟ್ಟಹಾಸ ಮೆರೆದಿದ್ದಾನೆ.

ಮೊದಲಿಗೆ ಪೂಜಾಳ ಕತ್ತಿಗೆ ಚಾಕು ಹಿಡಿದಿದ್ದಾನೆ. ಆಕೆ ಜೋರಾಗಿ ಕಿರುಚಿಕೊಂಡು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ. ಆದರೂ ಬೀಡದ ಪಾಪಿ, ಮನೆಯಲ್ಲಿ ಅಟ್ಟಾಡಿಸಿ ಚಾಕುವಿನಿಂದ ಪೂಜಾಳ ಕೆನ್ನೆ ಕೊಯ್ದಿದ್ದಾನೆ. ಕೊನೆಗೆ ಸ್ಥಳೀಯರ ಸಹಾಯದಿಂದ ಪೂಜಾ ಪ್ರಾಣಪಾಯದಿಂದ ಪಾರಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾಳೆ. ಈ ಸಂಬಂಧ ಚಿಕ್ಕಬಳ್ಳಾಪುರ ಮಹಿಳಾ ಠಾಣೆಗೆ ಗಂಡನ ವಿರುದ್ಧ ಪೊಲಿಸರು ದೂರು ನೀಡಿದ್ದು, ಪೊಲೀಸರು ಆರೋಪಿ ಅಶ್ವತ್ಥನಾರಾಯಣನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿನಿ ಮೇಲೆ ಕ್ಲರ್ಕ್ ಅತ್ಯಾಚಾರ: ಪರೀಕ್ಷೆ ಗೈಡ್ ಮಾಡ್ತೇನೆಂದು ಬಲೆಗೆ ಬೀಳಿಸಿಕೊಂಡಿದ್ದ SDA

ಅಸಲಿಗೆ ಆರೋಪಿ ಅಶ್ವತ್ಥನಾರಾಯಣ, ಪೂಜಾಳನ್ನು ಮುದುವೆ ಆಗುವುದಕ್ಕೂ ಮುನ್ನ, ಇಬ್ಬರನ್ನು ಮದುವೆಯಾಗಿದ್ದನಂತೆ. ಒಬ್ಬಾಕೆಗೆ ವಿಚ್ಛೇದನ ಪಡೆದುಕೊಂಡು ಹೋಗಿದ್ದರೆ, ಮತ್ತೋರ್ವಳು ಈತನ ಕಿರುಕುಳ ತಾಳಲಾರದೆ ಮನೆ ಬಿಟ್ಟು ಹೋಗಿದ್ದಾಳೆ. ಇನ್ನೂ ಇರೋ  ಪತ್ನಿ ಪೂಜಾ ಹಾಗೂ ಮಕ್ಕಳ ಜೊತೆ ನ್ಯಾಯಯುತವಾಗಿ ಇರದ ಭಂಡ ಅಶ್ವತ್ಥನಾರಾಯಣ ಪ್ರತಿದಿನ ಕುಡಿದು ಬಂದು ಕಿರುಕುಳ ಕೊಡುತ್ತಿದ್ದಾನಂತೆ,.ಇದರಿಂದ ರೋಸಿ ಹೋದ ಪೂಜಾ,  ಪತಿ ಅಶ್ವತ್ಥನಾರಾಯಣ ವಿರುದ್ಧ ಚಿಕ್ಕಬಳ್ಳಾಪುರ ಮಹಿಳಾ ಠಾಣೆಗೆ ದೂರು ನೀಡಿದ್ದು ನ್ಯಾಯಕ್ಕಾಗಿ ಅಂಗಲಾಚುತ್ತಿದ್ದಾಳೆ.

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ