AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಹೋಗುತ್ತಿಲ್ಲ: ಸದ್ಗುರು ಜಗ್ಗಿ ವಾಸುದೇವ್, ಇಶಾ ಫೌಂಡೇಶನ್

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಹಾಗೂ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಜನವರಿ 22 ರಂದು ನಡೆಯಲಿದೆ. ಹಲವು ಗಣ್ಯರಿಗೆ ಈ ಕಾರ್ಯಕ್ರಮದ ಆಹ್ವಾನ ನೀಡಲಾಗಿದೆ. ಅದರಂತೆ, ಇಶಾ ಫೌಂಡೇಶನ್​ನ ಸದ್ಗುರು ಜಗ್ಗಿ ವಾಸುದೇವ್ ಅವರಿಗೂ ಆಹ್ವಾನ ನೀಡಲಾಗಿದೆ. ಆದರೆ, ವಿದೇಶ ಪ್ರವಾಸದಲ್ಲಿರುವ ಹಿನ್ನೆಲೆ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ ಎಂದು ಸದ್ಗುರು ಹೇಳಿದ್ದಾರೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಹೋಗುತ್ತಿಲ್ಲ: ಸದ್ಗುರು ಜಗ್ಗಿ ವಾಸುದೇವ್, ಇಶಾ ಫೌಂಡೇಶನ್
ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಹೋಗದಿರಲು ಕಾರಣ ತಿಳಿಸಿದ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: Rakesh Nayak Manchi|

Updated on:Jan 15, 2024 | 8:18 PM

Share

ಚಿಕ್ಕಬಳ್ಳಾಪುರ, ಜ.15: ಅಯೋಧ್ಯೆಯ ಶ್ರೀರಾಮಮಂದಿರ (Ayodhya Ram Mandir) ದೇವಾಲಯ ಉದ್ಘಾಟನಾ ಕಾರ್ಯಕ್ರಮಕ್ಕೆ ನನಗೆ ಅಹ್ವಾನ ಬಂದಿದೆ. ಆದರೆ ನಾನು ಅಲ್ಲಿಗೆ ಹೋಗಲಾಗುತ್ತಿಲ್ಲ. ಇದು ದುರದೃಷ್ಟಕರ ಎಂದು ಇಶಾ ಫೌಂಡೇಶನ್ (Isha Foundation) ಸಂಸ್ಥಾಪಕ ಜಗ್ಗಿ ವಾಸುದೇವ್ ಹೇಳಿದರು. ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಿಕ್ಕಬಳ್ಳಾಪುರದ ಈಶಾ ಆದಿಯೋಗಿ ಕೇಂದ್ರದಲ್ಲಿ ನಂದಿ ವಿಗ್ರಹ ಹಾಗೂ ತ್ರಿಶೂಲ ಪ್ರತಿಷ್ಠಾಪನಾ ಕಾರ್ಯಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಅಯೋಧ್ಯೆ ಕಾರ್ಯಕ್ರಮ ಎರಡು ತಿಂಗಳ ಹಿಂದೆ ನಿಗದಿಯಾಗಿದೆ. ಆದರೆ ನನಗೆ ಆಸ್ಟ್ರೇಲಿಯಾದಲ್ಲಿ ಎಂಟು ತಿಂಗಳ ಹಿಂದೆಯೇ ಕಾರ್ಯಕ್ರಮ ನಿಗದಿಯಾಗಿದೆ. ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಆ ಕಾರ್ಯಕ್ರಮ ಇರುವ ಕಾರಣದಿಂದ ಅಯೋಧ್ಯೆಯ ರಾಮಮಮಂದಿರ ಉದ್ಗಾಟನಾ ಕಾರ್ಯಕ್ರಮಕ್ಕೆ ಹೋಗಲಾಗುತ್ತಿಲ್ಲ. ಇದು ನನ್ನ ದುರದೃಷ್ಟ ನಾನು ಹೋಗಲಾಗುತ್ತಿಲ್ಲ ಎಂದರು.

ಇದನ್ನೂ ಓದಿ: ಅಯೋಧ್ಯೆ ರಾಮನ ಸಾರ್ವಜನಿಕ ದರ್ಶನ ಭಾಗ್ಯ ಯಾವಾಗಿನಿಂದ? ದಿನಾಂಕ ಘೋಷಿಸಿದ ಸಮಿತಿ

ಅಪೂರ್ಣ ಮಂದಿರ ಉದ್ಘಾಟನೆ ಸಂಬಂಧ ಕೆಲ ಮಠಾಧೀಶರ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿದ ಸದ್ಗುರು, ನಮಗೆ ಯಾರ ಮೇಲಾದರೂ ಬಹಳ ಪ್ರೀತಿ ಇದ್ದರೆ ಎಷ್ಟು ಮಾಡಿದರೂ ಸಾಕಾಗಲ್ಲ ಅನಿಸುತ್ತೆ. ಸ್ವಲ್ಪ ಮಾಡಿದರೂ ಬಹಳ ಮಾಡಿದೆ ಅಂತ ತಿಳಿದುಕೊಳ್ಳುವವರ ಹೃದಯದಲ್ಲಿ ಪ್ರೀತಿ ಇರಲ್ಲ. ಜಾಸ್ತಿ ಮಾಡಿದರೂ ಇನ್ನೂ ಮಾಡಬೇಕು ಎನ್ನುವವರ ಹೃದಯದಲ್ಲಿ ಪ್ರೀತಿ ಇರಲಿದೆ ಎಂದರು.

ಅಲ್ಲದೆ, ದೇವಾಲಯ ಅನ್ನೋದು ಎಂದೂ ಮುಗಿಯಲ್ಲ. ಮಾಡುತ್ತಲೇ ಇರಬೇಕು. ಭಕ್ತನ ಆಶಯವೂ ಅದು. ಈಗ ಅದು ಮೂರು ಅಂತಸ್ತು ಇದೆ. ಒಂದು ಅಂತಸ್ತು ಸಂಪೂರ್ಣ ಆಗಿದೆ. ರಾಮಲಲ್ಲಾನ ವಿಗ್ರಹ ಅಲ್ಲಿ ಪ್ರತಿಷ್ಠಾಪನೆ ಆಗಲಿದೆ. ಮುಂದೆ ಉಳಿದ ಎಲ್ಲವೂ ಮಾಡಲಿದ್ದಾರೆ. ಹಾಗಾಗಿ ಅದು ಅಪೂರ್ಣ ಅಲ್ಲ ಅಂತ ಹೇಳಿದರು.

ಎರಡೂ ರಾಜ್ಯಗಳು ಕಾವೇರಿ ನದಿ ಉಳಿಸುವ ಕೆಲಸ ಮಾಡುತ್ತಿಲ್ಲ: ಸದ್ಗುರು

ಕಾವೇರಿ ನದಿ ವಿಚಾರದಲ್ಲಿ ಕರ್ನಾಟಕದ ಹಾಗೂ ತಮಿಳುನಾಡು ಸರ್ಕಾರಗಳು ಜಗಳವಾಡುತ್ತಿವೆಯೇ ಹೊರತು ನದಿ ಉಳಿಸುವ ಕೆಲಸವನ್ನು ಸಮರ್ಪಕವಾಗಿ ಮಾಡುತ್ತಿಲ್ಲ ಎಂದು ಸದ್ಗುರು ಹೇಳಿದರು. ತಮಿಳುನಾಡು ಕರ್ನಾಟಕದ ನಡುವೆ ಕಾವೇರಿ ನೀರಿಗಾಗಿ ಜಗಳ ನಡೆಯುತ್ತಲೇ ಇರುತ್ತವೆ. ಸಮುದ್ರ ಸೇರುವ ಮುನ್ನವೇ 175 ಕಿಲೋಮೀಟರ್ ಹಿಂದೆಯೇ 4 ತಿಂಗಳ ಕಾಲ ಕಾವೇರಿ ನದಿ ಒಣಗಿ ಹೋಗುತ್ತಿದೆ ಎಂದರು.

ತಮಿಳುನಾಡಿನವರು ನೀರು ಬಿಡುತ್ತಿಲ್ಲ ಅಂತ ಹೇಳುತ್ತಾರೆ, ಕರ್ನಾಟಕದವರು ನಾವು ನೀರು ಕೊಡಲ್ಲ ಅಂತಿವಿ. ಅವರಿಗೆ ಕೊಟ್ಟರೆ ಇಲ್ಲಿಲ್ಲ. ಇಲ್ಲಿ ಉಳಿಸಿಕೊಂಡರೆ ಅವರಿಗಿಲ್ಲ. ಜಗಳ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದೇವೆ. ಆದರೆ ಕಾವೇರಿ ನದಿಯಲ್ಲಿ ಯಾಕೆ ನೀರಿಲ್ಲ ಅಂತ ಯಾರೂ ಸಹ ಯೋಚನೆ ಮಾಡುತ್ತಿಲ್ಲ. ಸಾವಿರಾರು ವರ್ಷಗಳ ನದಿಯಲ್ಲಿ ಈಗ ಯಾಕೆ ನೀರಿಲ್ಲ. ಮೊದಲಗಿಂತ ಈಗಲೂ ಹೆಚ್ಚು ಮಳೆ ಬರುತ್ತಿದೆ. ಆದರೆ ಯಾಕೆ ನೀರಿಲ್ಲ. ಮಣ್ಣಿನಲ್ಲಿ ನೀರು ಹಿಡಿದುಕೊಳ್ಳುವ ಶಕ್ತಿ ಕಡಿಮೆ ಆಗಿದೆ. ಎಲ್ಲರೂ ಸೇರಿ ಕಾವೇರಿ ನದಿ ಉಳಿಸುವ ಕೆಲಸ ಮಾಡಬೇಕಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:08 pm, Mon, 15 January 24

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು