AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಕಾನೂನು ಓದಿದ್ದೇನೆ ಆದ್ರೆ ಬೊಮ್ಮಾಯಿ ಕಾನೂನು ಓದಿಲ್ಲ, ಕ್ರಮಕ್ಕೆ ಮುಂದಾದ್ರೆ ನಾವು ಸುಮ್ಮನಿರ್ತಿವಾ? ಮಾಜಿ ಸಿಎಂ ಸಿದ್ಧರಾಮಯ್ಯ

ಕಾಂಗ್ರೆಸ್​ನಿಂದ ಲಿಂಗಾಯತ ಸಮುದಾಯದ ಸಿಎಂ ಟಾರ್ಗೆಟ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದು, ನಮಗೆ ಎಲ್ಲಾ ಜಾತಿಯವರು ಒಂದೇ. ಜಾತಿ ವ್ಯವಸ್ಥೆ ಸರಿ ಮಾಡುವವರೆಗೂ ಸಮಾಜ ಉದ್ದಾರ ಆಗಲ್ಲ.

ನಾನು ಕಾನೂನು ಓದಿದ್ದೇನೆ ಆದ್ರೆ ಬೊಮ್ಮಾಯಿ ಕಾನೂನು ಓದಿಲ್ಲ, ಕ್ರಮಕ್ಕೆ ಮುಂದಾದ್ರೆ ನಾವು ಸುಮ್ಮನಿರ್ತಿವಾ? ಮಾಜಿ ಸಿಎಂ ಸಿದ್ಧರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on: Sep 24, 2022 | 5:53 PM

Share

ಚಿಕ್ಕಬಳ್ಳಾಪುರ: ನಾನು ಕಾನೂನು ಓದಿದ್ದೇನೆ ಆದ್ರೆ ಬೊಮ್ಮಾಯಿ ಕಾನೂನು ಓದಿಲ್ಲ. ಕಾನೂನು ಕ್ರಮ ಕೈಗೊಳ್ಳಲು ಆಗಲ್ಲ. ಕಾನೂನು ಕ್ರಮಕ್ಕೆ ಮುಂದಾದ್ರೆ ನಾವು ಸುಮ್ಮನಿರ್ತಿವಾ ಎಂದು ಗೌರಿಬಿದನೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದರು. ಪ್ರಗತಿಪರ ಚಿಂತಕ ಪ್ರೋ.ಗಂಗಾಧರಮೂರ್ತಿಯವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಕಾಂಗ್ರೆಸ್​ನಿಂದ ಲಿಂಗಾಯತ ಸಮುದಾಯದ ಸಿಎಂ ಟಾರ್ಗೆಟ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದು, ನಮಗೆ ಎಲ್ಲಾ ಜಾತಿಯವರು ಒಂದೇ. ಜಾತಿ ವ್ಯವಸ್ಥೆ ಸರಿ ಮಾಡುವವರೆಗೂ ಸಮಾಜ ಉದ್ದಾರ ಆಗಲ್ಲ. ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಕಸ ಸೇರುವಂತೆ ಮತ್ತೆ ಮತ್ತೆ ಸೇರುತ್ತದೆ. ಬಸವಣ್ಣನವರ ವಚನ ಹೇಳುವುದಕ್ಕೆ ಇದೆ ಆದ್ರೆ ಸಮಾಜದಲ್ಲಿ ಬದಲಾವಣೆ ಆಗಿಲ್ಲ. ಸಾಮಾಜಿಕವಾಗಿ ಮುಂದುವರೆದವರಿಗೆ ಮೀಸಲಾತಿ ನೀಡುವ ಬಗ್ಗೆ ಎಲ್ಲಿಯೂ ಹೇಳಿಲ್ಲ ಎಂದು ಹೇಳಿದರು.

ಬಿಜೆಪಿ ಭ್ರಷ್ಟಾಚಾರ ಮಾಡಿದೆ, ಅದಕ್ಕೆ ಪಲಾಯನ ಮಾಡುತ್ತಿದ್ದಾರೆ: ಸಿದ್ಧರಾಮಯ್ಯ

ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಭಟನೆ ಚಳುವಳಿ ಸ್ವಾತಂತ್ರ್ಯ ಕಿತ್ತುಕೊಳ್ಳಲು ಆಗಲ್ಲ ಎಂದು ಹೇಳಿದರು. 40% ಕಮಿಷನ್​ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪ ಮಾಡಿದ್ದರು. 1 ವರ್ಷ ಕಳೆದರೂ ಸಿಎಂ ಬೊಮ್ಮಾಯಿ ಇದುವರೆಗೆ ಯಾಕೆ ಕ್ರಮ ಕೈಗೊಂಡಿಲ್ಲ. ಇವರ ಬಣ್ಣ ಬಯಲಾಗುತ್ತೆ ಎಂದು ಈವರೆಗೆ ಕ್ರಮ ಕೈಗೊಂಡಿಲ್ಲ. ಕೆಂಪಣ್ಣ ವಿರುದ್ಧ ಬೊಮ್ಮಾಯಿ ಕ್ರಮಕೈಗೊಳ್ಳಲಿ ನೋಡೋಣ. ಬಿಜೆಪಿಯವರು ವ್ಯಾಪಕ ಭ್ರಷ್ಟಾಚಾರ ಮಾಡಿದ್ದಾರೆ. ಅವರು ತಪ್ಪು ಮಾಡಿದ್ದಾರೆ, ಅದಕ್ಕಾಗಿಯೇ ಪಲಾಯನ ಮಾಡಿದ್ದಾರೆ. ಅಧಿವೇಶನದಲ್ಲಿ 40 ಪರ್ಸೆಂಟ್ ಬಗ್ಗೆ ಚರ್ಚೆಗೆ ಅವಕಾಶ ನೀಡಲಿಲ್ಲ. ಬಡವರ ರಕ್ತ ಕುಡಿಯುವುದೇ ಬಿಜೆಪಿ ಸಾಧನೆ.

ಸಿದ್ದರಾಮಯ್ಯನವರ ಕೊಲೆಗೆ ಸ್ಕೆಚ್​ ಹಾಕಿದ್ರು: ನಿಡುಮಾಮಿಡಿ ಶ್ರೀ

ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು  ಕೊಲೆ ಮಾಡಲು ಸಂಚು ರೂಪಿಸಿದ್ದರು ಎಂದು ಗೌರಿಬಿದನೂರಿನಲ್ಲಿ ನಿಡುಮಾಮಿಡಿ ಮಹಾಸಂಸ್ಥಾನದ ಶ್ರೀ ವೀರಭದ್ರ ಚೆನ್ನಮಲ್ಲ ಮಹಾಸ್ವಾಮೀಜಿ ಹೇಳಿದ್ದಾರೆ. ಗೌರಿಬಿದನೂರಿನ ಸಮಾನತಾ ಸೌಧದಲ್ಲಿ ನಡೆದ ಪ್ರಗತಿಪರ ಚಿಂತಕ ಪ್ರೋ. ಗಂಗಾಧರಮೂರ್ತಿ  ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಫ್ಯಾಸಿಸ್ಟ್ ಸಂಸ್ಕೃತಿಯ ಜನರು ಸಂಶೋಧಕ ಡಾ. ಎಂ.ಎಂ ಕಲಬುರ್ಗಿ, ಪತ್ರಕರ್ತೆ ಗೌರಿ ಲಂಕೇಶರ್​ರನ್ನು ಹತ್ಯೆ ಮಾಡಿದ ಮಾದರಿಯಲ್ಲೇ ಇನ್ನೂ ಹಲವರ ಹತ್ಯೆಗೆ ಸಂಚು ರೂಪಿಸಿದ್ದರು. ಆದರೆ ಜೀವ ಕಾಯುವುದಕ್ಕೆ ಮೇಲೆ ಇದ್ದಾನೆ ಎಂದು ಹೇಳಿದರು.

ಜಾತಿ ತಾರತಮ್ಯ ತೊಡೆದು ಹಾಕಲು ಮುಂದಾಗಿದ್ದಕ್ಕೆ ನನ್ನನ್ನೆ ಬಹಿಷ್ಕಾರ ಹಾಕಿದರು. 1991ರಲ್ಲಿ ದೇವಾಲಯದಲ್ಲಿ ಅರ್ಚಕನನ್ನು ನೇಮಕ ಮಾಡಿದ್ದಕ್ಕೆ ಬಹಿಷ್ಕಾರ ಹಾಕಿದರು. ಜನರ ಬದಲಾವಣೆಯನ್ನು ಮತವಾಗಿ ಬದಲಾಯಿಸಿ. ನೀವು ಹೇಗೆ ಮುಖ್ಯಮಂತ್ರಿ ಸ್ಥಾನಕ್ಕೆ ಬರುತ್ತೀರಿ ಅನ್ನೊದು ನಿಮ್ಮ ಮೇಲೆ ನಿಂತಿದೆ. ಸಿದ್ದರಾಮಯ್ಯ ನಾಡಿನ ಮುಂದಿನ ಆಶಾ ಕಿರಣ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ