AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಸರ್ಕಾರಕ್ಕೆ ರಾಜಧನ ವಂಚಿಸಿ ಅಕ್ರಮವಾಗಿ ಗಣಿ ಉತ್ಪನ್ನ ಸಾಗಾಟ

Chikkaballapura news: ಚಿಕ್ಕಬಳ್ಳಾಪುರದಲ್ಲಿ ಸರ್ಕಾರಕ್ಕೆ ರಾಜಧನ ವಂಚಿಸಿ ಅಕ್ರಮವಾಗಿ ಗಣಿ ಉತ್ಪನ್ನ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಆದರೂ ಆರ್​ಟಿಒ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ.

ಚಿಕ್ಕಬಳ್ಳಾಪುರ: ಸರ್ಕಾರಕ್ಕೆ ರಾಜಧನ ವಂಚಿಸಿ ಅಕ್ರಮವಾಗಿ ಗಣಿ ಉತ್ಪನ್ನ ಸಾಗಾಟ
ಸರ್ಕಾರಕ್ಕೆ ರಾಜಧನ ವಂಚಿಸಿ ಅಕ್ರಮವಾಗಿ ಗಣಿ ಉತ್ಪನ್ನ ಸಾಗಾಟ ಮಾಡುತ್ತಿದ್ದ ಟಿಪ್ಪರ್​ಗಳನ್ನು ವಶಕ್ಕೆ ಪಡೆದ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು
Rakesh Nayak Manchi
|

Updated on: Jun 19, 2023 | 10:48 PM

Share

ಚಿಕ್ಕಬಳ್ಳಾಪುರ: ಸರ್ಕಾರಕ್ಕೆ ರಾಜಧನ ವಂಚಿಸಿ ಅಕ್ರಮವಾಗಿ ಗಣಿ ಉತ್ಪನ್ನ ಸಾಗಾಟ ಮಾಡುತ್ತಿರುವ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ (Chikkaballapura) ಬೆಳಕಿಗೆ ಬಂದಿದ್ದು, ಆರ್​​ಟಿಒ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಕಣ್ಣು ಮುಚ್ಚಿ ಕುಳಿತಿದ್ದಾರೆ. ಉತ್ಪನ್ನಗಳನ್ನು ಟಿಪ್ಪರ್​ನಲ್ಲಿ ಓವರ್​ಲೋಡ್ ಸಾಗಿಸುತ್ತಿದ್ದರೂ ಪರಿಶೀಲಿಸದ ಸಿಬ್ಬಂದಿ ಅಕ್ರಮ ಗಣಿ ಸಾಗಾಟಕ್ಕೆ ಸಾಥ್ ನೀಡುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಭೂವಿಜ್ಞಾನ ಇಲಾಖೆ ಅಧಿಕಾರಿಗಳು ನಡೆಸಿದ ಪರಿಶೀಲನೆ ವೇಳೆ ಕಳ್ಳಾಟ ಬಯಲಾಗಿದೆ.

ಭೂವಿಜ್ಞಾನ ಇಲಾಖೆ ಅಧಿಕಾರಿಗಳು ನಡೆಸಿದ ಪರಿಶೀಲನೆ ವೇಳೆ ಟಿಪ್ಪರ್​​ಗಳ ಮಿತಿಗಿಂತ ಹೆಚ್ಚಿಗೆ ಗಣಿ ಉತ್ಪನ್ನಗಳ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಪಡೆದ ಪರ್ಮಿಟ್​ಗಿಂತ ಹೆಚ್ಚುವರಿಯಾಗಿ ಗಣಿ ಉತ್ಪನ್ನಗಳ ಸಾಗಿಸುತ್ತಿರುವ ಟಿಪ್ಪರ್​ಗಳ ವಿರುದ್ಧ ಕ್ರಮಕ್ಕೆ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: Chikkaballapur:ಇದ್ದಕ್ಕಿದ್ದಂತೆ ಕೆರೆಯಲ್ಲಿ ಸಾವನ್ನಪ್ಪಿದ ಮೀನುಗಳು; ಕೆರೆಗೆ ವಿಷ ಪ್ರಾಶನವೊ? ನೀರೇ ವಿಷವಾಯಿತಾ? ಅನ್ನೊ ಅನುಮಾನ!

ಸರ್ಕಾರಕ್ಕೆ ರಾಜಧನ ವಂಚಿಸಿ ಅಕ್ರಮ ಗಣಿಗಾರಿಕೆ ಹಿನ್ನೆಲೆ 10ಕ್ಕೂ ಹೆಚ್ಚು ಕಲ್ಲು ಹಾಗೂ ಕಲ್ಲಿನ ಉತ್ಪನ್ನ ಸಾಗಿಸುತ್ತಿದ್ದ ಲಾರಿಗಳನ್ನು ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಧಿಕಾರಿ ಕೃಷ್ಣವೇಣಿ ನೇತೃತ್ವದಲ್ಲಿ ದಾಳಿ ನಡೆಸಿ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಕಲ್ಲಿನ ಉತ್ಪನ್ನಗಳನ್ನು ಚಿಕ್ಕಬಳ್ಳಾಪುರ ತಾಲೂಕಿನ ಚದಲಪುರ ಗೇಟ್​ ಬಳಿ ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ