AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಮಗ ಇದ್ರೂ ತಂಗಿ ಜತೆ ಅಣ್ಣ ಸಂಸಾರ: ಅಣ್ಣ-ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯ!

ಅಣ್ಣ-ತಂಗಿ ಸಂಬಂಧವು ಪ್ರೀತಿ, ರಕ್ಷಣೆ, ಗೌರವ ಮತ್ತು ನಂಬಿಕೆಯ ಆಧಾರದ ಮೇಲೆ ಬೆಳೆದು ನಿಲ್ಲುವ ಒಂದು ಪವಿತ್ರ ಮತ್ತು ಅನ್ಯೋನ್ಯ ಬಾಂಧವ್ಯವಾಗಿದ್ದು, ಇದು ತಂದೆ-ತಾಯಿಯ ಸಂಬಂಧದಷ್ಟೇ ಆಳವಾಗಿರುತ್ತೆ. ಅಣ್ಣ ತಂಗಿಯನ್ನು ರಕ್ಷಿಸುತ್ತಾನೆ ಮತ್ತು ತಂಗಿ ಅಣ್ಣನಿಗೆ ಬೆಂಬಲ ನಿಲ್ಲುತ್ತಾಳೆ. ಹೀಗಿರುವಾಗ ಚಿಕ್ಕಬಳ್ಳಾಪುರದಲ್ಲಿ ಅಣ್ಣ ತಂಗಿ ನಡುವೆ ಪ್ರೀತಿ ಚಿಗುರಿದ್ದು, ಅದು ಲಿವಿಂಗ್ ರಿಲೇಶನ್ ಶಿಪ್ ಹಂತಕ್ಕೂ ಹೋಗಿದೆ. ಆದ್ರೆ, ಇದೀಗ ದುರಂತವೇ ನಡೆದುಹೋಗಿದೆ.

ಪತ್ನಿ ಮಗ ಇದ್ರೂ ತಂಗಿ ಜತೆ ಅಣ್ಣ ಸಂಸಾರ: ಅಣ್ಣ-ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯ!
Ramalakshmi And Krishna
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jan 07, 2026 | 7:08 PM

Share

ಚಿಕ್ಕಬಳ್ಳಾಪುರ, (ಜನವರಿ 07): ಇಬ್ಬರು ಪರಸ್ಪರ ಚಿಕ್ಕಪ್ಪ ದೊಡ್ಡಪ್ಪ ಮಕ್ಕಳು. ಆತನಿಗೆ 30 ವರ್ಷ, ಆಕೆಗೆ 21 ವರ್ಷ. ಆದರೂ ಅವರಿಬ್ಬರು ಅಣ್ಣ ತಂಗಿ (Brother And Sister) ಪವಿತ್ರ ಸಂಬಂಧಕ್ಕೆ ವಿರುದ್ದವಾಗಿ ಪರಸ್ಪರ ಪ್ರೀತಿಸಿ ಅಕ್ರಮ ಸಂಬಂಧ ಹೊಂದಿದ್ದು, ಸಾಲದಕ್ಕೆ ಈ ಜೋಡಿ ಲಿವಿಂಗ್ ರಿಲೇಷನ್ ಶಿಪ್​​ನಲ್ಲಿ ಇದ್ದರು. ಆದ್ರೆ, ಇದೀಗ ಆಕೆ ಏಕಾಏಕಿ ಶವವಾಗಿ ಪತ್ತೆಯಾಗಿದ್ದಾಳೆ. ಹೌದು..21 ವರ್ಷದ ಯುವತಿ ರಾಮಲಕ್ಷ್ಮಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ನಡೆದಿದ್ದು, ಈ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ರಾಮಕೃಷ್ಣಪುರದ ನಿವಾಸಿಗಳಾದ ರಾಮಲಕ್ಷ್ಮಿ ಹಾಗೂ ಕೃಷ್ಣ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ರಾಮಕೃಷ್ಣಪುರದ ನಿವಾಸಿಗಳಾಗಿದ್ದು, ಸಂಬಂಧದಲ್ಲಿ ಅಣ್ಣ ತಂಗಿ. ಆದ್ರೆ, ಅಣ್ಣ ತಂಗಿಯ ಪ್ರೀತಿ ಲಿವಿಂಗ್ ರಿಲೇಶನ್ ಶಿಪ್​​​ ತಿರುಗಿದ್ದು, ಇಬ್ಬರೂ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ಮನೆ ಮಾಡಿಕೊಂಡು ವಾಸವಿದ್ದರು. ಆದ್ರೆ ಇಂದು ರಾಮಲಕ್ಷ್ಮಿ ಮನೆನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಶವ ಪತ್ತೆಯಾಗಿದೆ.

ಇದನ್ನೂ ಓದಿ: ಪ್ರಿಯಕರನ ಕರ್ಮಕಾಂಡ ಕಂಡು ಶಾಕ್​​: ಪೊಲೀಸ್​​ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ

ರಾಮಲಕ್ಷ್ಮಿ ಹಾಗೂ ಕೃಷ್ಣ ಕಳೆದ ಮೂರು ವರ್ಷಗಳಿಂದ ಪ್ರೀತಿ ಪ್ರೇಮ ಅಂತ ಅನೈತಿಕ ಸಂಬಂಧ ಹೊಂದಿದ್ದರು. ಇದರಿಂದ ಎರಡು ಕುಟುಂಬಗಳ ಬಂಧು ಬಳಗ, ಇಬ್ಬರಿಗೂ ಬೈಯ್ದು ಬುದ್ದಿವಾದ ಹೇಳಿದ್ದರು. ಕೊನೆಗೆ ರಾಮಕೃಷ್ಣಪುರದಲ್ಲಿ ಒಂದು ಕುಟುಂಬ. ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಒಂದು ಕುಟುಂಬವಾಗಿ ಪ್ರತ್ಯೇಕವಾಗಿ ನೆಲೆಸಿದ್ರು. ಮತ್ತೊಂದೆಡೆ ಕೃಷ್ಣನಿಗೆ ಬೇರೆ ಹುಡುಗಿಯೊಬ್ಬಳ ಜೊತೆ ಮದುವೆಯನ್ನು ಮಾಡಿದ್ದರು. ಆದರೂ ಕೃಷ್ಣ ತನ್ನ ತಂಗಿ ರಾಮಲಕ್ಷ್ಮಿಯನ್ನು ಬಿಟ್ಟಿಲ್ಲ. ಆಕೆಯ ತಲೆ ಕೆಡಿಸಿ ಪ್ರತ್ಯೇಕ ಮನೆ ಮಾಡಿ ಕಳ್ಳ ಸಂಸಾರ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆದ್ರೆ, ಇದೀಗ ರಾಮಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಅಣ್ಣ ವರಸೆಯ ಕೃಷ್ಣನೆ ಕಾರಣ ಎಂದು ಮೃತಳ ಅಕ್ಕ ಆಕ್ರೋಶ ವ್ಯಕ್ತಪಡಿಸಿದ್ದಾಳೆ.

ಒಟ್ಟಿನಲ್ಲಿ ಅಣ್ಣ ತಂಗಿಯ ಸಂಬಂಧ ಜನುಮ ಜನುಮದ ಅನುಬಂಧ ಎನ್ನುವ ಪವಿತ್ರೆಗೆ ದಕ್ಕೆ ತಂದಿದ್ದು, ತಂಗಿ ಸಾವಿನ ಮನೆ ಸೇರಿದ್ರೆ, ಅಣ್ಣ ಭಯದಿಂದ ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಪೆರೇಸಂದ್ರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?