AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ -3 ಮಕ್ಕಳು ಇದ್ರೂ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಬೆಳೆಸಿದಳು, ಕೊನೆಗೆ ಅಡ್ಡ ಬಂದ ಗಂಡನ ಕೊಲೆಗೆ ಮುಹೂರ್ತ ಇಟ್ಟುಬಿಟ್ಟರು!

Illicit relationship: ಹೆಂಡತಿ ಅಲಿವೇಲು ನೇರವಾಗಿ ಚೇಳೂರು ಪೊಲೀಸ್ ಠಾಣೆಗೆ ಹೋಗಿ ನ. 29ರಿಂದ ಗಂಡ ಮಿಸ್ಸಿಂಗ್ ಎಂದು ದೂರು ನೀಡಿದ್ದಳು. ಪೊಲೀಸರು ತನಿಖೆ ಆರಂಭಿಸುತ್ತಿದ್ದಂತೆ ದೂರು ನೀಡಿದವಳ ಮೇಲೆಯೇ ಅನುಮಾನ ಬಂದಿತ್ತು. ಠಾಣೆಗೆ ಕರೆ ತಂದು ವಿಚಾರಣೆ ಮಾಡುತ್ತಿದ್ದಂತೆ...

ಗಂಡ -3 ಮಕ್ಕಳು ಇದ್ರೂ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಬೆಳೆಸಿದಳು, ಕೊನೆಗೆ ಅಡ್ಡ ಬಂದ ಗಂಡನ ಕೊಲೆಗೆ ಮುಹೂರ್ತ ಇಟ್ಟುಬಿಟ್ಟರು!
ಗಂಡ -3 ಮಕ್ಕಳು ಇದ್ರೂ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಬೆಳೆಸಿದಳು, ಕೊನೆಗೆ ಅಡ್ಡ ಬಂದ ಗಂಡನ ಕೊಲೆಗೆ ಮುಹೂರ್ತ ಇಟ್ಟುಬಿಟ್ಟರು!
TV9 Web
| Edited By: ಸಾಧು ಶ್ರೀನಾಥ್​|

Updated on: Dec 03, 2022 | 10:36 AM

Share

ಗಂಡ (husband) ಹಾಗೂ ಮೂವರು ಮಕ್ಕಳು (children) ಇದ್ರೂ… ಇಲ್ಲೊಬ್ಬ ವಿವಾಹಿತ ಮಹಿಳೆ (wife), ಬೇರೊಬ್ಬ ವ್ಯಕ್ತಿಯ ಜೊತೆ ಪ್ರೀತಿ ಪ್ರೇಮ ಅಂತ ಅನೈತಿಕ ಸಂಬಂಧ ಬೆಳೆಸಿದ್ದಳು. ಮುಂದೆ… ತಮ್ಮ ಅನೈತಿಕ ಸಂಬಂಧಕ್ಕೆ ಗಂಡ ಅಡ್ಡಿಯಂತ ಭಾವಿಸಿ.. ಗಂಡನ ಕೊಲೆಗೆ ಮೂಹೂರ್ತ ಇಟ್ಟುಬಿಟ್ಟರು. ಪ್ರಿಯಕರ (paramour) ಹಾಗೂ ಆತನ ಸ್ನೇಹಿತ ಸೇರಿ ಆಕೆಯ ಗಂಡನನ್ನು ಕೊಂದು ಶವ ಹೂತು ಹಾಕಿದ್ದು ಗೊತ್ತಿದ್ರೂ… ಏನು ಗೊತ್ತಿಲ್ಲದ ಹಾಗೆ ಪೊಲೀಸ್ ಠಾಣೆಗೆ ಹೋಗಿ ಗಂಡ ಮಿಸ್ಸಿಂಗ್ ಪ್ರಕರಣ ದಾಖಲು ಮಾಡಿಸಿದ್ದಳು. ಆದ್ರೆ ಪೊಲೀಸರ ತನಿಖೆಯಲ್ಲಿ ದೂರು ನೀಡಿದವಳೆ ಕೊಲೆಯ ಸೂತ್ರಧಾರಿ ಅಂತ ಗೊತ್ತಾಗಿದೆ. ಅಷ್ಟಕ್ಕೂ ಅದೆಲ್ಲಿ ಅಂತೀರಾ ಈ ವರದಿ ನೋಡಿ!!

ಮೇಲಿನ ಚಿತ್ರದಲ್ಲಿರುವ ಮಹಿಳೆಯನ್ನೊಮ್ಮೆ ನೋಡಿ ಬಿಡಿ, ಈಕೆಯ ಹೆಸರು ಅಲಿವೇಲು. ಈಕೆಯ ಗಂಡನ ಹೆಸರು ನರಸಿಂಹಪ್ಪ. ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಬಾಗೇಪಲ್ಲಿ (bagepalli) ತಾಲೂಕಿನ ಪೋಲನಾಯಕನಪಲ್ಲಿ ನಿವಾಸಿಗಳು. ಮದುವೆಯಾಗಿ ಎರಡು ಹೆಣ್ಣು ಒಂದು ಗಂಡು ಮಗು ಇದೆ. ಕೂಲಿ ಮಾಡಿಕೊಂಡು ಬದುಕುತ್ತಿದ್ರೂ… ಸುಖ ಸಂಸಾರಕ್ಕೆ ಏನೂ ಕೊರತೆ ಇರಲಿಲ್ಲ. ಆದ್ರೆ ನವೆಂಬರ್ 24ರಂದು ಈಕೆಯ ಗಂಡ ನರಸಿಂಹಪ್ಪ ಅಂಗಡಿಗೆ ಹೋಗಿ ಬರ್ತಿನಿ ಅಂತ ಹೋದವನು 5 ದಿನಗಳು ಕಳೆದ್ರೂ ವಾಪಸ್ ಮನೆಗೆ ಬಂದಿರಲಿಲ್ಲ.

ಇದ್ರಿಂದ ಭಯ ಆತಂಕಗೊಂಡ ಅಲಿವೇಲು ನೇರವಾಗಿ ಚೇಳೂರು ಪೊಲೀಸ್ ಠಾಣೆಗೆ ಹೋಗಿ ನವೆಂಬರ್ 29ರಿಂದ ಗಂಡ ಮಿಸ್ಸಿಂಗ್ ಎಂದು ದೂರು ನೀಡಿದ್ದಳು. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸುತ್ತಿದ್ದಂತೆ ದೂರು ನೀಡಿದವಳ ಮೇಲೆಯೇ ಅನುಮಾನ ಬಂದಿತ್ತು. ಠಾಣೆಗೆ ಕರೆ ತಂದು ವಿಚಾರಣೆ ಮಾಡುತ್ತಿದ್ದಂತೆ… ದೂರು ನೀಡಿದವಳೆ ಸತ್ಯ ಬಾಯಿ ಬಿಟ್ಟಿದ್ದಳು. ಅದೇನು ಅಂತ ಸ್ವತಃ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್.ನಾಗೇಶ ಸುದ್ದಿಗಾರರಿಗೆ ವಿವರಿಸಿದ್ದಾರೆ.

ಹೌದು! ಅಸಲಿಗೆ ಪೋಲನಾಯಕನಪಲ್ಲಿ ಗ್ರಾಮದ ವೆಂಕಟೇಶ ಎನ್ನುವ ವ್ಯಕ್ತಿಯ ಜೊತೆಗೆ ಅಲಿವೇಲುಗೆ ಅನೈತಿಕ ಸಂಬಂಧ ಇತ್ತಂತೆ. ಇದ್ರಿಂದ ಮನೆಯಲ್ಲಿ ಪದೆ ಪದೆ ಗಲಾಟೆ ಆಗ್ತಿತ್ತಂತೆ. ಇದ್ರಿಂದ ಕೆರಳಿದ ಅಲಿವೇಲು, ತನ್ನ ಗಂಡನ ಕಥೆ ಮುಗಿಸುವಂತೆ ತನ್ನ ಪ್ರಿಯಕರ ವೆಂಕಟೇಶಗೆ ಹೇಳಿದ್ದಳಂತೆ.

ಇದ್ರಿಂದ ವೆಂಕಟೇಶ, ತನ್ನ ಸ್ನೇಹಿತ ಶ್ರೀನಾಥ್ ಜೊತೆ ಸೇರಿಕೊಂಡು ನರಸಿಂಹಪ್ಪನನ್ನು ಮದ್ಯಪಾನ ಮಾಡಲು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ನಂತರ ಅಲ್ಲೆ ಕತ್ತು ಹಿಸುಕಿ ಕೊಂದಿದ್ದಾರೆ. ನಂತರ ಶವವನ್ನು ಪಕ್ಕದ ಗ್ರಾಮದ ಬಳಿ ನಿರ್ಜನ ಪ್ರದೇಶದಲ್ಲಿ ಹೂತು ಹಾಕಿದ್ದಾರೆ. ಸದ್ಯ ಪೊಲೀಸರು ನರಸಿಂಹಪ್ಪನ ಶವವನ್ನು ಹೊರಕ್ಕೆ ತೆಗೆದು, ತನಿಖೆ ಚುರುಕುಗೊಳಿಸಿದ್ದಾರೆ.

ಗಂಡ ಮೂವರು ಸುಂದರ ಮಕ್ಕಳಿದ್ರೂ, ಪತ್ನಿಯಾದವಳು… ತನ್ನ ಪಾಡಿಗೆ ತಾನು ಇರದೆ ಬೇರೊಬ್ಬರ ಜೊತೆ ಅನೈತಿಕ ಸಂಬಂಧ ಬೆಳೆಸಿ, ಅದಕ್ಕಾಗಿ ತನ್ನ ಸಂಸಾರವನ್ನು ತಾನೆ ಹಾಳು ಮಾಡಿಕೊಂಡಿದ್ದಾಳೆ. ಇನ್ನು ತಂದೆಯು ಸಾವಿನ ಮನೆ ಸೇರಿದ್ದರೆ, ತಾಯಿ ಜೈಲು ಪಾಲಾಗಿದ್ದಾಳೆ, ತಮ್ಮದಲ್ಲದ ತಪ್ಪಿಗೆ ಮೂವರು ಮಕ್ಕಳು ಅನಾಥರಾಗಿದ್ದಾರೆ. (ವರದಿ: ಭೀಮಪ್ಪ ಪಾಟೀಲ, ಟಿವಿ 9, ಚಿಕ್ಕಬಳ್ಳಾಪುರ)

ಹೆಚ್ಚಿನ ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು