AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ -3 ಮಕ್ಕಳು ಇದ್ರೂ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಬೆಳೆಸಿದಳು, ಕೊನೆಗೆ ಅಡ್ಡ ಬಂದ ಗಂಡನ ಕೊಲೆಗೆ ಮುಹೂರ್ತ ಇಟ್ಟುಬಿಟ್ಟರು!

Illicit relationship: ಹೆಂಡತಿ ಅಲಿವೇಲು ನೇರವಾಗಿ ಚೇಳೂರು ಪೊಲೀಸ್ ಠಾಣೆಗೆ ಹೋಗಿ ನ. 29ರಿಂದ ಗಂಡ ಮಿಸ್ಸಿಂಗ್ ಎಂದು ದೂರು ನೀಡಿದ್ದಳು. ಪೊಲೀಸರು ತನಿಖೆ ಆರಂಭಿಸುತ್ತಿದ್ದಂತೆ ದೂರು ನೀಡಿದವಳ ಮೇಲೆಯೇ ಅನುಮಾನ ಬಂದಿತ್ತು. ಠಾಣೆಗೆ ಕರೆ ತಂದು ವಿಚಾರಣೆ ಮಾಡುತ್ತಿದ್ದಂತೆ...

ಗಂಡ -3 ಮಕ್ಕಳು ಇದ್ರೂ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಬೆಳೆಸಿದಳು, ಕೊನೆಗೆ ಅಡ್ಡ ಬಂದ ಗಂಡನ ಕೊಲೆಗೆ ಮುಹೂರ್ತ ಇಟ್ಟುಬಿಟ್ಟರು!
ಗಂಡ -3 ಮಕ್ಕಳು ಇದ್ರೂ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಬೆಳೆಸಿದಳು, ಕೊನೆಗೆ ಅಡ್ಡ ಬಂದ ಗಂಡನ ಕೊಲೆಗೆ ಮುಹೂರ್ತ ಇಟ್ಟುಬಿಟ್ಟರು!
TV9 Web
| Updated By: ಸಾಧು ಶ್ರೀನಾಥ್​|

Updated on: Dec 03, 2022 | 10:36 AM

Share

ಗಂಡ (husband) ಹಾಗೂ ಮೂವರು ಮಕ್ಕಳು (children) ಇದ್ರೂ… ಇಲ್ಲೊಬ್ಬ ವಿವಾಹಿತ ಮಹಿಳೆ (wife), ಬೇರೊಬ್ಬ ವ್ಯಕ್ತಿಯ ಜೊತೆ ಪ್ರೀತಿ ಪ್ರೇಮ ಅಂತ ಅನೈತಿಕ ಸಂಬಂಧ ಬೆಳೆಸಿದ್ದಳು. ಮುಂದೆ… ತಮ್ಮ ಅನೈತಿಕ ಸಂಬಂಧಕ್ಕೆ ಗಂಡ ಅಡ್ಡಿಯಂತ ಭಾವಿಸಿ.. ಗಂಡನ ಕೊಲೆಗೆ ಮೂಹೂರ್ತ ಇಟ್ಟುಬಿಟ್ಟರು. ಪ್ರಿಯಕರ (paramour) ಹಾಗೂ ಆತನ ಸ್ನೇಹಿತ ಸೇರಿ ಆಕೆಯ ಗಂಡನನ್ನು ಕೊಂದು ಶವ ಹೂತು ಹಾಕಿದ್ದು ಗೊತ್ತಿದ್ರೂ… ಏನು ಗೊತ್ತಿಲ್ಲದ ಹಾಗೆ ಪೊಲೀಸ್ ಠಾಣೆಗೆ ಹೋಗಿ ಗಂಡ ಮಿಸ್ಸಿಂಗ್ ಪ್ರಕರಣ ದಾಖಲು ಮಾಡಿಸಿದ್ದಳು. ಆದ್ರೆ ಪೊಲೀಸರ ತನಿಖೆಯಲ್ಲಿ ದೂರು ನೀಡಿದವಳೆ ಕೊಲೆಯ ಸೂತ್ರಧಾರಿ ಅಂತ ಗೊತ್ತಾಗಿದೆ. ಅಷ್ಟಕ್ಕೂ ಅದೆಲ್ಲಿ ಅಂತೀರಾ ಈ ವರದಿ ನೋಡಿ!!

ಮೇಲಿನ ಚಿತ್ರದಲ್ಲಿರುವ ಮಹಿಳೆಯನ್ನೊಮ್ಮೆ ನೋಡಿ ಬಿಡಿ, ಈಕೆಯ ಹೆಸರು ಅಲಿವೇಲು. ಈಕೆಯ ಗಂಡನ ಹೆಸರು ನರಸಿಂಹಪ್ಪ. ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಬಾಗೇಪಲ್ಲಿ (bagepalli) ತಾಲೂಕಿನ ಪೋಲನಾಯಕನಪಲ್ಲಿ ನಿವಾಸಿಗಳು. ಮದುವೆಯಾಗಿ ಎರಡು ಹೆಣ್ಣು ಒಂದು ಗಂಡು ಮಗು ಇದೆ. ಕೂಲಿ ಮಾಡಿಕೊಂಡು ಬದುಕುತ್ತಿದ್ರೂ… ಸುಖ ಸಂಸಾರಕ್ಕೆ ಏನೂ ಕೊರತೆ ಇರಲಿಲ್ಲ. ಆದ್ರೆ ನವೆಂಬರ್ 24ರಂದು ಈಕೆಯ ಗಂಡ ನರಸಿಂಹಪ್ಪ ಅಂಗಡಿಗೆ ಹೋಗಿ ಬರ್ತಿನಿ ಅಂತ ಹೋದವನು 5 ದಿನಗಳು ಕಳೆದ್ರೂ ವಾಪಸ್ ಮನೆಗೆ ಬಂದಿರಲಿಲ್ಲ.

ಇದ್ರಿಂದ ಭಯ ಆತಂಕಗೊಂಡ ಅಲಿವೇಲು ನೇರವಾಗಿ ಚೇಳೂರು ಪೊಲೀಸ್ ಠಾಣೆಗೆ ಹೋಗಿ ನವೆಂಬರ್ 29ರಿಂದ ಗಂಡ ಮಿಸ್ಸಿಂಗ್ ಎಂದು ದೂರು ನೀಡಿದ್ದಳು. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸುತ್ತಿದ್ದಂತೆ ದೂರು ನೀಡಿದವಳ ಮೇಲೆಯೇ ಅನುಮಾನ ಬಂದಿತ್ತು. ಠಾಣೆಗೆ ಕರೆ ತಂದು ವಿಚಾರಣೆ ಮಾಡುತ್ತಿದ್ದಂತೆ… ದೂರು ನೀಡಿದವಳೆ ಸತ್ಯ ಬಾಯಿ ಬಿಟ್ಟಿದ್ದಳು. ಅದೇನು ಅಂತ ಸ್ವತಃ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್.ನಾಗೇಶ ಸುದ್ದಿಗಾರರಿಗೆ ವಿವರಿಸಿದ್ದಾರೆ.

ಹೌದು! ಅಸಲಿಗೆ ಪೋಲನಾಯಕನಪಲ್ಲಿ ಗ್ರಾಮದ ವೆಂಕಟೇಶ ಎನ್ನುವ ವ್ಯಕ್ತಿಯ ಜೊತೆಗೆ ಅಲಿವೇಲುಗೆ ಅನೈತಿಕ ಸಂಬಂಧ ಇತ್ತಂತೆ. ಇದ್ರಿಂದ ಮನೆಯಲ್ಲಿ ಪದೆ ಪದೆ ಗಲಾಟೆ ಆಗ್ತಿತ್ತಂತೆ. ಇದ್ರಿಂದ ಕೆರಳಿದ ಅಲಿವೇಲು, ತನ್ನ ಗಂಡನ ಕಥೆ ಮುಗಿಸುವಂತೆ ತನ್ನ ಪ್ರಿಯಕರ ವೆಂಕಟೇಶಗೆ ಹೇಳಿದ್ದಳಂತೆ.

ಇದ್ರಿಂದ ವೆಂಕಟೇಶ, ತನ್ನ ಸ್ನೇಹಿತ ಶ್ರೀನಾಥ್ ಜೊತೆ ಸೇರಿಕೊಂಡು ನರಸಿಂಹಪ್ಪನನ್ನು ಮದ್ಯಪಾನ ಮಾಡಲು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ನಂತರ ಅಲ್ಲೆ ಕತ್ತು ಹಿಸುಕಿ ಕೊಂದಿದ್ದಾರೆ. ನಂತರ ಶವವನ್ನು ಪಕ್ಕದ ಗ್ರಾಮದ ಬಳಿ ನಿರ್ಜನ ಪ್ರದೇಶದಲ್ಲಿ ಹೂತು ಹಾಕಿದ್ದಾರೆ. ಸದ್ಯ ಪೊಲೀಸರು ನರಸಿಂಹಪ್ಪನ ಶವವನ್ನು ಹೊರಕ್ಕೆ ತೆಗೆದು, ತನಿಖೆ ಚುರುಕುಗೊಳಿಸಿದ್ದಾರೆ.

ಗಂಡ ಮೂವರು ಸುಂದರ ಮಕ್ಕಳಿದ್ರೂ, ಪತ್ನಿಯಾದವಳು… ತನ್ನ ಪಾಡಿಗೆ ತಾನು ಇರದೆ ಬೇರೊಬ್ಬರ ಜೊತೆ ಅನೈತಿಕ ಸಂಬಂಧ ಬೆಳೆಸಿ, ಅದಕ್ಕಾಗಿ ತನ್ನ ಸಂಸಾರವನ್ನು ತಾನೆ ಹಾಳು ಮಾಡಿಕೊಂಡಿದ್ದಾಳೆ. ಇನ್ನು ತಂದೆಯು ಸಾವಿನ ಮನೆ ಸೇರಿದ್ದರೆ, ತಾಯಿ ಜೈಲು ಪಾಲಾಗಿದ್ದಾಳೆ, ತಮ್ಮದಲ್ಲದ ತಪ್ಪಿಗೆ ಮೂವರು ಮಕ್ಕಳು ಅನಾಥರಾಗಿದ್ದಾರೆ. (ವರದಿ: ಭೀಮಪ್ಪ ಪಾಟೀಲ, ಟಿವಿ 9, ಚಿಕ್ಕಬಳ್ಳಾಪುರ)

ಹೆಚ್ಚಿನ ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ