AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ -3 ಮಕ್ಕಳು ಇದ್ರೂ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಬೆಳೆಸಿದಳು, ಕೊನೆಗೆ ಅಡ್ಡ ಬಂದ ಗಂಡನ ಕೊಲೆಗೆ ಮುಹೂರ್ತ ಇಟ್ಟುಬಿಟ್ಟರು!

Illicit relationship: ಹೆಂಡತಿ ಅಲಿವೇಲು ನೇರವಾಗಿ ಚೇಳೂರು ಪೊಲೀಸ್ ಠಾಣೆಗೆ ಹೋಗಿ ನ. 29ರಿಂದ ಗಂಡ ಮಿಸ್ಸಿಂಗ್ ಎಂದು ದೂರು ನೀಡಿದ್ದಳು. ಪೊಲೀಸರು ತನಿಖೆ ಆರಂಭಿಸುತ್ತಿದ್ದಂತೆ ದೂರು ನೀಡಿದವಳ ಮೇಲೆಯೇ ಅನುಮಾನ ಬಂದಿತ್ತು. ಠಾಣೆಗೆ ಕರೆ ತಂದು ವಿಚಾರಣೆ ಮಾಡುತ್ತಿದ್ದಂತೆ...

ಗಂಡ -3 ಮಕ್ಕಳು ಇದ್ರೂ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಬೆಳೆಸಿದಳು, ಕೊನೆಗೆ ಅಡ್ಡ ಬಂದ ಗಂಡನ ಕೊಲೆಗೆ ಮುಹೂರ್ತ ಇಟ್ಟುಬಿಟ್ಟರು!
ಗಂಡ -3 ಮಕ್ಕಳು ಇದ್ರೂ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಬೆಳೆಸಿದಳು, ಕೊನೆಗೆ ಅಡ್ಡ ಬಂದ ಗಂಡನ ಕೊಲೆಗೆ ಮುಹೂರ್ತ ಇಟ್ಟುಬಿಟ್ಟರು!
TV9 Web
| Edited By: |

Updated on: Dec 03, 2022 | 10:36 AM

Share

ಗಂಡ (husband) ಹಾಗೂ ಮೂವರು ಮಕ್ಕಳು (children) ಇದ್ರೂ… ಇಲ್ಲೊಬ್ಬ ವಿವಾಹಿತ ಮಹಿಳೆ (wife), ಬೇರೊಬ್ಬ ವ್ಯಕ್ತಿಯ ಜೊತೆ ಪ್ರೀತಿ ಪ್ರೇಮ ಅಂತ ಅನೈತಿಕ ಸಂಬಂಧ ಬೆಳೆಸಿದ್ದಳು. ಮುಂದೆ… ತಮ್ಮ ಅನೈತಿಕ ಸಂಬಂಧಕ್ಕೆ ಗಂಡ ಅಡ್ಡಿಯಂತ ಭಾವಿಸಿ.. ಗಂಡನ ಕೊಲೆಗೆ ಮೂಹೂರ್ತ ಇಟ್ಟುಬಿಟ್ಟರು. ಪ್ರಿಯಕರ (paramour) ಹಾಗೂ ಆತನ ಸ್ನೇಹಿತ ಸೇರಿ ಆಕೆಯ ಗಂಡನನ್ನು ಕೊಂದು ಶವ ಹೂತು ಹಾಕಿದ್ದು ಗೊತ್ತಿದ್ರೂ… ಏನು ಗೊತ್ತಿಲ್ಲದ ಹಾಗೆ ಪೊಲೀಸ್ ಠಾಣೆಗೆ ಹೋಗಿ ಗಂಡ ಮಿಸ್ಸಿಂಗ್ ಪ್ರಕರಣ ದಾಖಲು ಮಾಡಿಸಿದ್ದಳು. ಆದ್ರೆ ಪೊಲೀಸರ ತನಿಖೆಯಲ್ಲಿ ದೂರು ನೀಡಿದವಳೆ ಕೊಲೆಯ ಸೂತ್ರಧಾರಿ ಅಂತ ಗೊತ್ತಾಗಿದೆ. ಅಷ್ಟಕ್ಕೂ ಅದೆಲ್ಲಿ ಅಂತೀರಾ ಈ ವರದಿ ನೋಡಿ!!

ಮೇಲಿನ ಚಿತ್ರದಲ್ಲಿರುವ ಮಹಿಳೆಯನ್ನೊಮ್ಮೆ ನೋಡಿ ಬಿಡಿ, ಈಕೆಯ ಹೆಸರು ಅಲಿವೇಲು. ಈಕೆಯ ಗಂಡನ ಹೆಸರು ನರಸಿಂಹಪ್ಪ. ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಬಾಗೇಪಲ್ಲಿ (bagepalli) ತಾಲೂಕಿನ ಪೋಲನಾಯಕನಪಲ್ಲಿ ನಿವಾಸಿಗಳು. ಮದುವೆಯಾಗಿ ಎರಡು ಹೆಣ್ಣು ಒಂದು ಗಂಡು ಮಗು ಇದೆ. ಕೂಲಿ ಮಾಡಿಕೊಂಡು ಬದುಕುತ್ತಿದ್ರೂ… ಸುಖ ಸಂಸಾರಕ್ಕೆ ಏನೂ ಕೊರತೆ ಇರಲಿಲ್ಲ. ಆದ್ರೆ ನವೆಂಬರ್ 24ರಂದು ಈಕೆಯ ಗಂಡ ನರಸಿಂಹಪ್ಪ ಅಂಗಡಿಗೆ ಹೋಗಿ ಬರ್ತಿನಿ ಅಂತ ಹೋದವನು 5 ದಿನಗಳು ಕಳೆದ್ರೂ ವಾಪಸ್ ಮನೆಗೆ ಬಂದಿರಲಿಲ್ಲ.

ಇದ್ರಿಂದ ಭಯ ಆತಂಕಗೊಂಡ ಅಲಿವೇಲು ನೇರವಾಗಿ ಚೇಳೂರು ಪೊಲೀಸ್ ಠಾಣೆಗೆ ಹೋಗಿ ನವೆಂಬರ್ 29ರಿಂದ ಗಂಡ ಮಿಸ್ಸಿಂಗ್ ಎಂದು ದೂರು ನೀಡಿದ್ದಳು. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸುತ್ತಿದ್ದಂತೆ ದೂರು ನೀಡಿದವಳ ಮೇಲೆಯೇ ಅನುಮಾನ ಬಂದಿತ್ತು. ಠಾಣೆಗೆ ಕರೆ ತಂದು ವಿಚಾರಣೆ ಮಾಡುತ್ತಿದ್ದಂತೆ… ದೂರು ನೀಡಿದವಳೆ ಸತ್ಯ ಬಾಯಿ ಬಿಟ್ಟಿದ್ದಳು. ಅದೇನು ಅಂತ ಸ್ವತಃ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್.ನಾಗೇಶ ಸುದ್ದಿಗಾರರಿಗೆ ವಿವರಿಸಿದ್ದಾರೆ.

ಹೌದು! ಅಸಲಿಗೆ ಪೋಲನಾಯಕನಪಲ್ಲಿ ಗ್ರಾಮದ ವೆಂಕಟೇಶ ಎನ್ನುವ ವ್ಯಕ್ತಿಯ ಜೊತೆಗೆ ಅಲಿವೇಲುಗೆ ಅನೈತಿಕ ಸಂಬಂಧ ಇತ್ತಂತೆ. ಇದ್ರಿಂದ ಮನೆಯಲ್ಲಿ ಪದೆ ಪದೆ ಗಲಾಟೆ ಆಗ್ತಿತ್ತಂತೆ. ಇದ್ರಿಂದ ಕೆರಳಿದ ಅಲಿವೇಲು, ತನ್ನ ಗಂಡನ ಕಥೆ ಮುಗಿಸುವಂತೆ ತನ್ನ ಪ್ರಿಯಕರ ವೆಂಕಟೇಶಗೆ ಹೇಳಿದ್ದಳಂತೆ.

ಇದ್ರಿಂದ ವೆಂಕಟೇಶ, ತನ್ನ ಸ್ನೇಹಿತ ಶ್ರೀನಾಥ್ ಜೊತೆ ಸೇರಿಕೊಂಡು ನರಸಿಂಹಪ್ಪನನ್ನು ಮದ್ಯಪಾನ ಮಾಡಲು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ನಂತರ ಅಲ್ಲೆ ಕತ್ತು ಹಿಸುಕಿ ಕೊಂದಿದ್ದಾರೆ. ನಂತರ ಶವವನ್ನು ಪಕ್ಕದ ಗ್ರಾಮದ ಬಳಿ ನಿರ್ಜನ ಪ್ರದೇಶದಲ್ಲಿ ಹೂತು ಹಾಕಿದ್ದಾರೆ. ಸದ್ಯ ಪೊಲೀಸರು ನರಸಿಂಹಪ್ಪನ ಶವವನ್ನು ಹೊರಕ್ಕೆ ತೆಗೆದು, ತನಿಖೆ ಚುರುಕುಗೊಳಿಸಿದ್ದಾರೆ.

ಗಂಡ ಮೂವರು ಸುಂದರ ಮಕ್ಕಳಿದ್ರೂ, ಪತ್ನಿಯಾದವಳು… ತನ್ನ ಪಾಡಿಗೆ ತಾನು ಇರದೆ ಬೇರೊಬ್ಬರ ಜೊತೆ ಅನೈತಿಕ ಸಂಬಂಧ ಬೆಳೆಸಿ, ಅದಕ್ಕಾಗಿ ತನ್ನ ಸಂಸಾರವನ್ನು ತಾನೆ ಹಾಳು ಮಾಡಿಕೊಂಡಿದ್ದಾಳೆ. ಇನ್ನು ತಂದೆಯು ಸಾವಿನ ಮನೆ ಸೇರಿದ್ದರೆ, ತಾಯಿ ಜೈಲು ಪಾಲಾಗಿದ್ದಾಳೆ, ತಮ್ಮದಲ್ಲದ ತಪ್ಪಿಗೆ ಮೂವರು ಮಕ್ಕಳು ಅನಾಥರಾಗಿದ್ದಾರೆ. (ವರದಿ: ಭೀಮಪ್ಪ ಪಾಟೀಲ, ಟಿವಿ 9, ಚಿಕ್ಕಬಳ್ಳಾಪುರ)

ಹೆಚ್ಚಿನ ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?