Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರುಗಾಳಿಗೆ ದ್ರಾಕ್ಷಿ ತೋಟದ ಮೇಲೆ ಬಿದ್ದ ತೆಂಗಿನ ಮರ! ಲಕ್ಷಾಂತರ ರೂಪಾಯಿ ನಷ್ಟ

ಬಿರುಗಾಳಿ ಸಹಿತ ಭಾರೀ ಮಳೆಗೆ ಬೃಹತ್ ತೆಂಗಿನ ಮರವೊಂದು ದ್ರಾಕ್ಷಿ ತೋಟದ ಮೇಲೆ ಉರುಳಿಬಿದ್ದ ಪರಿಣಾಮ ಫಸಲು ತುಂಬಿದ್ದ ದ್ರಾಕ್ಷಿ ತೋಟ ನೆಲಕಚ್ಚಿದೆ. ಇದರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ದ್ರಾಕ್ಷಿ ನಷ್ಟವಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಬಿರುಗಾಳಿಗೆ ದ್ರಾಕ್ಷಿ ತೋಟದ ಮೇಲೆ ಬಿದ್ದ ತೆಂಗಿನ ಮರ! ಲಕ್ಷಾಂತರ ರೂಪಾಯಿ ನಷ್ಟ
ದ್ರಾಕ್ಷಿ ತೋಟದ ಮೇಲೆ ಬಿದ್ದ ತೆಂಗಿನ ಮರ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: May 25, 2024 | 7:33 PM

ಚಿಕ್ಕಬಳ್ಳಾಪುರ, ಮೇ.25: ಬಿರುಗಾಳಿ ಸಹಿತ ಭಾರೀ ಮಳೆಗೆ ಬೃಹತ್ ತೆಂಗಿನ ಮರವೊಂದು ದ್ರಾಕ್ಷಿ(Grapes) ತೋಟದ ಮೇಲೆ ಉರುಳಿಬಿದ್ದ ಘಟನೆ ಚಿಕ್ಕಬಳ್ಳಾಪುರ(Chikkaballapur) ತಾಲೂಕಿನ ಸೂಲಕುಂಟೆ ಗ್ರಾಮದಲ್ಲಿ ನಡೆದಿದೆ. ಇದರ ಪರಿಣಾಮ ಫಸಲು ತುಂಬಿದ್ದ ದ್ರಾಕ್ಷಿ ತೋಟ ನೆಲಕಚ್ಚಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ದ್ರಾಕ್ಷಿ ನಷ್ಟವಾಗಿದೆ. ನಿನ್ನೆ(ಮೇ.24) ತಡರಾತ್ರಿ ಜಿಲ್ಲೆಯ ವಿವಿಧೆಡೆ ಧಾರಾಕರ ಮಳೆ ಹಾಗೂ ಬಿರುಗಾಳಿ ಬಿಸಿದ್ದು, ವಿವಿಧೆಡೆ ಮರಗಳು ಧರೆಗುರುಳಿವೆ.

ಅದೃಷ್ಟವಶಾತ್ ಎಲ್ಲಿಯೂ ಏನು ಅವಾಂತರಗಳು ಆಗಿಲ್ಲ. ಆದ್ರೆ, ರೈತ ರಾಮಕೃಷ್ಣಪ್ಪ ಎಂಬುವವರಿಗೆ ಸೇರಿದ ದ್ರಾಕ್ಷಿ ತೋಟದಲ್ಲಿ ಆಗಬಾರದ ಘಟನೆವೊಂದು ಆಗಿದೆ. ಹೌದು, ತೋಟದ ಬದಿಯಲ್ಲಿ ಬೃಹತ್ ತೆಂಗಿನ ಮರವೊಂದು ಬಿರುಗಾಳಿಗೆ ಬುಡಸಮೇತ ಕಿತ್ತು, ದ್ರಾಕ್ಷಿ ಚಪ್ಪರದ ಮೇಲೆ ಬಿದ್ದಿದೆ. ಇದರಿಂದ ಕಟಾವು ಹಂತದಲ್ಲಿದ್ದ ದ್ರಾಕ್ಷಿ ತೋಟದ ಕಲ್ಲು, ಕೂಚಾಗಳು ಮುರಿದುಬಿದ್ದು, ದ್ರಾಕ್ಷಿ ಚಪ್ಪರ ನೆಲಕಚ್ಚಿದೆ.

ಇದನ್ನೂ ಓದಿ:ರಣ ಬಿಸಿಲಿನಿಂದ ಬಳ್ಳಿಯಲ್ಲೇ ಬಾಡ್ತಿದೆ ದ್ರಾಕ್ಷಿ; ವಾಟರ್ ಸ್ಪ್ರೇ ಮಾಡುವ ಮೂಲಕ ರಕ್ಷಣೆಗೆ ಮುಂದಾದ ರೈತ

ಇನ್ನು ಕಟಾವು ಹಂತದಲ್ಲಿದ್ದ ದ್ರಾಕ್ಷಿ ಫಸಲು ಮಣ್ಣು ಪಾಲಾಗಿದ್ದು, ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. 30 ಕ್ಕೂ ಹೆಚ್ಚು ಕಲ್ಲು ಕೂಚಾಗಳು ಮುರಿದು ಹೋಗಿದ್ದು, ಇಡೀ ಚಪ್ಪರಕ್ಕೆ ಎಣಿದಿರುವ ಕಂಬಿಯನ್ನು ಮರು ಜೋಡಣೆ ಮಾಡಬೇಕಿದೆ. ಇಂದು(ಮೇ.25) ಬೆಳಿಗ್ಗೆ ವ್ಯಾಪಾರಸ್ಥರು ದ್ರಾಕ್ಷಿ ಕಟಾವು ಮಾಡಬೇಕಿತ್ತು. ಅಷ್ಟರಲ್ಲಿ ರಾತ್ರಿ ತೋಟ ಮಣ್ಣು ಪಾಲಾಗಿದೆ.

ರೈತನಿಗೆ ವರ್ಷ, ದೊಣ್ಣೆಗೆ ನಿಮಿಷ ಎನ್ನುವ ಹಾಗೆ ಲಕ್ಷಾಂತರ ರೂಪಾಯಿ ಸಾಲ ಸೂಲ ಮಾಡಿ ದ್ರಾಕ್ಷಿ ಬೆಳೆದರೆ, ನಿನ್ನೆ ರಾತ್ರಿ ಬಿಸಿದ ಬಿರುಗಾಳಿಗೆ ತೆಂಗಿನ ಮರವೊಂದು ದ್ರಾಕ್ಷಿ ಚಪ್ಪರದ ಮೇಲೆ ಬಿದ್ದು ಕೆಲವೇ ನಿಮಿಷಗಳಲ್ಲಿ ದ್ರಾಕ್ಷಿ ಫಸಲನ್ನು ಮಣ್ಣುಪಾಲಾಗುವಂತೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ