AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಪಾಠ-ಪ್ರವಚನದ ಮಧ್ಯೆ ಶಿಕ್ಷಕರಿಗೊಂದು ಸ್ಪರ್ಧೆ; ಮುದ್ದೆ, ಬಾಳೆ ಹಣ್ಣು ತಿಂದು ಸೈ ಎನಿಸಿಕೊಂಡ ಗುರುಗಳು

ಅವರು ಶಿಕ್ಷಕರು, ಪ್ರತಿದಿನ ಮಕ್ಕಳಿಗೆ ಪಾಠ ಪ್ರವಚನ ಮಾಡುವುದರಲ್ಲೇ ತಲ್ಲೀನರಾಗಿರುತ್ತಿದ್ದರು. ಆದ್ರೆ, ಅವರ ಸಂಸ್ಥೆಯ ಆಡಳಿತ ಮಂಡಳಿಯೊಂದು ಶಿಕ್ಷಕರಿಗಾಗಿ ಮುದ್ದೆ ಹಾಗೂ ಬಾಳೆ ಹಣ್ಣು ತಿನ್ನುವ ಸ್ಪರ್ಧೆ ಆಯೋಜಿಸಿತ್ತು. ಇದರಿಂದ ಶಿಕ್ಷಕರು, ವಿದ್ಯಾರ್ಥಿಗಳ ಮುಂದೆ ಮುಗಿಬಿದ್ದು ಮುದ್ದೆ ಹಾಗೂ ಬಾಳೆಹಣ್ಣು ತಿನ್ನುವ ಸ್ಪರ್ಧೆಯಲ್ಲಿ ಭಾಗಿಯಾಗಿ ಸೈ ಎನಿಸಿಕೊಂಡರು. ಅಷ್ಟಕ್ಕೂ ಅದೆಲ್ಲಿ ಅಂತೀರಾ? ಈ ಸ್ಟೋರಿ ಓದಿ.

ಚಿಕ್ಕಬಳ್ಳಾಪುರ: ಪಾಠ-ಪ್ರವಚನದ ಮಧ್ಯೆ ಶಿಕ್ಷಕರಿಗೊಂದು ಸ್ಪರ್ಧೆ; ಮುದ್ದೆ, ಬಾಳೆ ಹಣ್ಣು ತಿಂದು ಸೈ ಎನಿಸಿಕೊಂಡ ಗುರುಗಳು
ಚಿಕ್ಕಬಳ್ಳಾಪುರದಲ್ಲಿ ; ಮುದ್ದೆ, ಬಾಳೆ ಹಣ್ಣು ತಿಂದು ಸೈ ಎನಿಸಿಕೊಂಡ ಶಿಕ್ಷಕರು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jul 19, 2024 | 4:05 PM

Share

ಚಿಕ್ಕಬಳ್ಳಾಪುರ, ಜು.19: ಪ್ರತಿದಿನ ಮಕ್ಕಳಿಗೆ ಪಾಠ-ಪ್ರವಚನ ಮಾಡುವುದರಲ್ಲೇ ತಲ್ಲೀನರಾಗಿರುತ್ತಿದ್ದ ಶಿಕ್ಷಕರಿಗೆ, ಅವರ ಸಂಸ್ಥೆಯ ಆಡಳಿತ ಮಂಡಳಿಯೊಂದು ಶಿಕ್ಷಕರಿ(Teachers)ಗಾಗಿಯೇ ಮುದ್ದೆ ಹಾಗೂ ಬಾಳೆ ಹಣ್ಣು ತಿನ್ನುವ ಸ್ಪರ್ಧೆಯನ್ನು ಚಿಕ್ಕಬಳ್ಳಾಪುರ(Chikkaballapur) ನಗರದ ಪಂಚಗಿರಿ ಬೋಧನಾ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿತ್ತು. ಇದರಿಂದ ಶಿಕ್ಷಕರು, ವಿದ್ಯಾರ್ಥಿಗಳ ಮುಂದೆ ಮುಗಿಬಿದ್ದು ಮುದ್ದೆ ಹಾಗೂ ಬಾಳೆಹಣ್ಣು ತಿನ್ನುವ ಸ್ಪರ್ಧೆಯಲ್ಲಿ ಭಾಗಿಯಾಗಿ ಸೈ ಎನಿಸಿಕೊಂಡರು.

ಹೌದು, ಕೆ.ವಿ. ವೆಂಕಟಪತಪ್ಪ ಶಿಕ್ಷಣ ದತ್ತಿ ಹಾಗೂ ಟ್ರಸ್ಟ್ ಡೇ ಪ್ರಯುಕ್ತ ಆಡಳತಿ ಮಂಡಳಿ, ಶಿಕ್ಷಕರಿಗಾಗಿ ಮುದ್ದೆ ಹಾಗೂ ಬಾಳೆ ಹಣ್ಣು ತಿನ್ನುವ ಸ್ಪರ್ದೆ ಆಯೋಜಿಸಿತ್ತು. ಇದ್ರಿಂದ ಶಿಕ್ಷಕರು ವಿದ್ಯಾರ್ಥಿಗಳ ಮುಂದೆ ಮುಗಿಬಿದ್ದು ಗಬ ಗಬನೆ ಮುದ್ದೆ ತಿಂದು ಸೈ ಎನಿಸಿಕೊಂಡರು. ಮುದ್ದೆ ತಿನ್ನುವ ಸ್ಪರ್ಧೆಯಲ್ಲಿ ಶಿಕ್ಷಕ ಶ್ರೀನಿವಾಸ್ ಎರಡು ಕೆಜಿ ತೂಕದ ಮುದ್ದೆ ತಿಂದು ಬಲೆ ಎನಿಸಿಕೊಂಡರು. ಇನ್ನು ಶಿಕ್ಷಕಿಯರಿಗಾಗಿ ಪಚ್ಚ ಬಾಳೆಹಣ್ಣುಗಳ ತಿನ್ನುವ ಸ್ಪರ್ದೆ ಆಯೋಜನೆ ಮಾಡಲಾಗಿತ್ತು.

ಇದನ್ನೂ ಓದಿ:ಕಾಲೇಜು ಹುಡುಗಿಯರ ಮನಸ್ಸು ಗೆದ್ದ ಬಲೂನ್‌ ಡೆನಿಮ್‌ ಫ್ರಾಕ್ ಡ್ರೆಸ್‌

ತಲಾ ಒಂದೂವರೆ ಕೆಜಿ ತೂಕದ ಬಾಳೆ ಹಣ್ಣುಗಳನ್ನ ಸ್ಪರ್ಧೆಯಲ್ಲಿ ತಿನ್ನಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಶಿಕ್ಷಕಿಯರು ನಾನು ಮೊದಲಾ, ನೀನು ಮೊದಲಾ ಎಂದು ಸ್ಪರ್ಧೆಗಿಳಿದು ಬಾಳೆ ಹಣ್ಣು ಸಿಪ್ಪೆ ತೆಗೆದು ಕ್ಷಣಾರ್ಧದಲ್ಲಿ ಗಬ ಗಬನೆ ಬಾಳೆ ಹಣ್ಣುಗಳನ್ನ ನುಂಗಿದ್ದು ವಿಶೇಷವಾಗಿತ್ತು. ಒಟ್ಟಾರೆ ಸಿಕ್ಕಿದ್ದೇ ಚಾನ್ಸ್ ಎಂದು ಶಿಕ್ಷಕರು ಕೆಲ ಹೊತ್ತು ಎಲ್ಲಾ ಮರೆತು, ಬಾಳೆ ಹಣ್ಣು ಹಾಗೂ ಮುದ್ದೆ ತಿನ್ನುವಲ್ಲಿ ಬ್ಯುಸಿಯಾಗಿದ್ದರು. ಇಂತಹ ಮನರಣಜನಾ ಚಟುವಟಿಕೆ ಕೇವಲ  ವಿದ್ಯಾರ್ಥಿಗಳಿಗಷ್ಟೇ ಅಲ್ಲದೆ, ಶಿಕ್ಷಕರಿಗೂ ಏರ್ಪಡಿಸಿದ್ದು ವಿಶೇಷವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ