AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಪಾಠ-ಪ್ರವಚನದ ಮಧ್ಯೆ ಶಿಕ್ಷಕರಿಗೊಂದು ಸ್ಪರ್ಧೆ; ಮುದ್ದೆ, ಬಾಳೆ ಹಣ್ಣು ತಿಂದು ಸೈ ಎನಿಸಿಕೊಂಡ ಗುರುಗಳು

ಅವರು ಶಿಕ್ಷಕರು, ಪ್ರತಿದಿನ ಮಕ್ಕಳಿಗೆ ಪಾಠ ಪ್ರವಚನ ಮಾಡುವುದರಲ್ಲೇ ತಲ್ಲೀನರಾಗಿರುತ್ತಿದ್ದರು. ಆದ್ರೆ, ಅವರ ಸಂಸ್ಥೆಯ ಆಡಳಿತ ಮಂಡಳಿಯೊಂದು ಶಿಕ್ಷಕರಿಗಾಗಿ ಮುದ್ದೆ ಹಾಗೂ ಬಾಳೆ ಹಣ್ಣು ತಿನ್ನುವ ಸ್ಪರ್ಧೆ ಆಯೋಜಿಸಿತ್ತು. ಇದರಿಂದ ಶಿಕ್ಷಕರು, ವಿದ್ಯಾರ್ಥಿಗಳ ಮುಂದೆ ಮುಗಿಬಿದ್ದು ಮುದ್ದೆ ಹಾಗೂ ಬಾಳೆಹಣ್ಣು ತಿನ್ನುವ ಸ್ಪರ್ಧೆಯಲ್ಲಿ ಭಾಗಿಯಾಗಿ ಸೈ ಎನಿಸಿಕೊಂಡರು. ಅಷ್ಟಕ್ಕೂ ಅದೆಲ್ಲಿ ಅಂತೀರಾ? ಈ ಸ್ಟೋರಿ ಓದಿ.

ಚಿಕ್ಕಬಳ್ಳಾಪುರ: ಪಾಠ-ಪ್ರವಚನದ ಮಧ್ಯೆ ಶಿಕ್ಷಕರಿಗೊಂದು ಸ್ಪರ್ಧೆ; ಮುದ್ದೆ, ಬಾಳೆ ಹಣ್ಣು ತಿಂದು ಸೈ ಎನಿಸಿಕೊಂಡ ಗುರುಗಳು
ಚಿಕ್ಕಬಳ್ಳಾಪುರದಲ್ಲಿ ; ಮುದ್ದೆ, ಬಾಳೆ ಹಣ್ಣು ತಿಂದು ಸೈ ಎನಿಸಿಕೊಂಡ ಶಿಕ್ಷಕರು
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jul 19, 2024 | 4:05 PM

Share

ಚಿಕ್ಕಬಳ್ಳಾಪುರ, ಜು.19: ಪ್ರತಿದಿನ ಮಕ್ಕಳಿಗೆ ಪಾಠ-ಪ್ರವಚನ ಮಾಡುವುದರಲ್ಲೇ ತಲ್ಲೀನರಾಗಿರುತ್ತಿದ್ದ ಶಿಕ್ಷಕರಿಗೆ, ಅವರ ಸಂಸ್ಥೆಯ ಆಡಳಿತ ಮಂಡಳಿಯೊಂದು ಶಿಕ್ಷಕರಿ(Teachers)ಗಾಗಿಯೇ ಮುದ್ದೆ ಹಾಗೂ ಬಾಳೆ ಹಣ್ಣು ತಿನ್ನುವ ಸ್ಪರ್ಧೆಯನ್ನು ಚಿಕ್ಕಬಳ್ಳಾಪುರ(Chikkaballapur) ನಗರದ ಪಂಚಗಿರಿ ಬೋಧನಾ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿತ್ತು. ಇದರಿಂದ ಶಿಕ್ಷಕರು, ವಿದ್ಯಾರ್ಥಿಗಳ ಮುಂದೆ ಮುಗಿಬಿದ್ದು ಮುದ್ದೆ ಹಾಗೂ ಬಾಳೆಹಣ್ಣು ತಿನ್ನುವ ಸ್ಪರ್ಧೆಯಲ್ಲಿ ಭಾಗಿಯಾಗಿ ಸೈ ಎನಿಸಿಕೊಂಡರು.

ಹೌದು, ಕೆ.ವಿ. ವೆಂಕಟಪತಪ್ಪ ಶಿಕ್ಷಣ ದತ್ತಿ ಹಾಗೂ ಟ್ರಸ್ಟ್ ಡೇ ಪ್ರಯುಕ್ತ ಆಡಳತಿ ಮಂಡಳಿ, ಶಿಕ್ಷಕರಿಗಾಗಿ ಮುದ್ದೆ ಹಾಗೂ ಬಾಳೆ ಹಣ್ಣು ತಿನ್ನುವ ಸ್ಪರ್ದೆ ಆಯೋಜಿಸಿತ್ತು. ಇದ್ರಿಂದ ಶಿಕ್ಷಕರು ವಿದ್ಯಾರ್ಥಿಗಳ ಮುಂದೆ ಮುಗಿಬಿದ್ದು ಗಬ ಗಬನೆ ಮುದ್ದೆ ತಿಂದು ಸೈ ಎನಿಸಿಕೊಂಡರು. ಮುದ್ದೆ ತಿನ್ನುವ ಸ್ಪರ್ಧೆಯಲ್ಲಿ ಶಿಕ್ಷಕ ಶ್ರೀನಿವಾಸ್ ಎರಡು ಕೆಜಿ ತೂಕದ ಮುದ್ದೆ ತಿಂದು ಬಲೆ ಎನಿಸಿಕೊಂಡರು. ಇನ್ನು ಶಿಕ್ಷಕಿಯರಿಗಾಗಿ ಪಚ್ಚ ಬಾಳೆಹಣ್ಣುಗಳ ತಿನ್ನುವ ಸ್ಪರ್ದೆ ಆಯೋಜನೆ ಮಾಡಲಾಗಿತ್ತು.

ಇದನ್ನೂ ಓದಿ:ಕಾಲೇಜು ಹುಡುಗಿಯರ ಮನಸ್ಸು ಗೆದ್ದ ಬಲೂನ್‌ ಡೆನಿಮ್‌ ಫ್ರಾಕ್ ಡ್ರೆಸ್‌

ತಲಾ ಒಂದೂವರೆ ಕೆಜಿ ತೂಕದ ಬಾಳೆ ಹಣ್ಣುಗಳನ್ನ ಸ್ಪರ್ಧೆಯಲ್ಲಿ ತಿನ್ನಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಶಿಕ್ಷಕಿಯರು ನಾನು ಮೊದಲಾ, ನೀನು ಮೊದಲಾ ಎಂದು ಸ್ಪರ್ಧೆಗಿಳಿದು ಬಾಳೆ ಹಣ್ಣು ಸಿಪ್ಪೆ ತೆಗೆದು ಕ್ಷಣಾರ್ಧದಲ್ಲಿ ಗಬ ಗಬನೆ ಬಾಳೆ ಹಣ್ಣುಗಳನ್ನ ನುಂಗಿದ್ದು ವಿಶೇಷವಾಗಿತ್ತು. ಒಟ್ಟಾರೆ ಸಿಕ್ಕಿದ್ದೇ ಚಾನ್ಸ್ ಎಂದು ಶಿಕ್ಷಕರು ಕೆಲ ಹೊತ್ತು ಎಲ್ಲಾ ಮರೆತು, ಬಾಳೆ ಹಣ್ಣು ಹಾಗೂ ಮುದ್ದೆ ತಿನ್ನುವಲ್ಲಿ ಬ್ಯುಸಿಯಾಗಿದ್ದರು. ಇಂತಹ ಮನರಣಜನಾ ಚಟುವಟಿಕೆ ಕೇವಲ  ವಿದ್ಯಾರ್ಥಿಗಳಿಗಷ್ಟೇ ಅಲ್ಲದೆ, ಶಿಕ್ಷಕರಿಗೂ ಏರ್ಪಡಿಸಿದ್ದು ವಿಶೇಷವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ