AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಟ್ರಿಮೋನಿ, ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರಿಗೆ ಗಾಳ; ಮದುವೆ ಆಗುವುದಾಗಿ ನಂಬಿಸಿ ಹಣದ ಜೊತೆ ಎಸ್ಕೇಪ್​ ಆಗ್ತಿದ್ದವಳ ಬಂಧನ

ಮ್ಯಾಟ್ರಿಮೋನಿ ವೆಬ್‌ಸೈಟ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರಿಗೆ ಗಾಳ ಹಾಕುತ್ತಿದ್ದ ಆಕೆ, ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲಕ್ಷ-ಲಕ್ಷ ಹಣ ಹಾಗೂ ಚಿನ್ನಾಭರಣ ಪಡೆದು ಎಸ್ಕೇಪ್ ಆಗುತ್ತಿದ್ದಳು. ಆದರೆ, ಈಗ ಮಾಡಿದ ಕೆಲಸಕ್ಕೆ ಜೈಲು ಪಾಲಾಗಿದ್ದಾಳೆ. ಅಷ್ಟಕ್ಕೂ ಆಕೆ ಯಾರು? ಆಕೆಯ ಹಿನ್ನೆಲೆ ಏನು ಅಂತೀರಾ? ಈ ವರದಿ ಓದಿ.

ಮ್ಯಾಟ್ರಿಮೋನಿ, ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರಿಗೆ ಗಾಳ; ಮದುವೆ ಆಗುವುದಾಗಿ ನಂಬಿಸಿ ಹಣದ ಜೊತೆ ಎಸ್ಕೇಪ್​ ಆಗ್ತಿದ್ದವಳ ಬಂಧನ
ಬಂಧಿತ ಮಹಿಳೆ ಕೋಮಲ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 31, 2024 | 5:52 PM

ಚಿಕ್ಕಬಳ್ಳಾಪುರ, ಆ.31: ಮ್ಯಾಟ್ರಿಮೋನಿ(Matrimony) ವೆಬ್‌ಸೈಟ್‌ಗಳಲ್ಲಿ ಮದುವೆಗೆಂದು ಹುಡುಗಿ ನೋಡುತ್ತಿದ್ದರೆ ಈ ಸ್ಟೋರಿ ನಿಮಗಾಗಿ. ಹೌದು, ಮೂಲತಃ ಶಿವಮೊಗ್ಗದವರಾದ ಕೋಮಲ ಎಂಬ ಮಹಿಳೆ, ಗಂಡ ಮೃತಪಟ್ಟ ಬಳಿಕ ಕಲ್ಯಾಣ್ ಮ್ಯಾಟ್ರಿಮೋನಿಯಲ್ಲಿ ತನ್ನ ಪ್ರೊಫೈಲ್ ಮಾಡಿಕೊಂಡು ಮದುವೆ ಮಾಡಿಕೊಳ್ಳಲು ಗಂಡಸರನ್ನು ಹುಡುಕುತ್ತಿದ್ದಾರೆ. ಈಕೆಯ ಮೈಮಾಟ, ಮರಳು ಮರಳು ಮಾತಿಗೆ ಸೋತರೇ ನಿಮಗೆ ಮೂರು ನಾಮ ಖಂಡಿತ. ಹೀಗೆ ಈಕೆಗೆ ಮರುಳಾಗಿ ಲಕ್ಷ-ಲಕ್ಷ ಹಣ, ಚಿನ್ನವನ್ನು ಕಳೆದುಕೊಂಡವರು ಒಬ್ಬರಲ್ಲ, ಇಬ್ಬರಲ್ಲ. ಮದುವೆ ಮಾಡಿಕೊಳ್ಳುವುದಾಗಿ ಆಮಿಷವೊಡ್ಡಿ ಹಲವರಿಗೆ ವಂಚನೆ ಮಾಡಿದ್ದಾಳೆ. ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.

ಮದುವೆ ಆಮಿಷವೊಡ್ಡಿ ಪುರುಷರಿಗೆ ವಂಚಿಸವುದನ್ನೇ ಕಾಯಕ ಮಾಡಿಕೊಂಡಿದ್ದ ಮಹಿಳೆ

ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಮೂಲದ ಫಾರ್ಮಸಿಸ್ಟ್ ರಾಘವೇಂದ್ರ ಎನ್ನುವವರನ್ನು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ, ಅವರಿಂದ ಏಳೂವರೆ ಲಕ್ಷ ರೂಪಾಯಿ ಹಣ ಪೀಕಿದ್ದಾಳೆ. ಹಣ ಅಕೌಂಟ್‌ಗೆ ಬರುತ್ತಿದ್ದಂತೆ ಅವರ ಪೋನ್ ನಂಬರ್​ಗಳನ್ನು ಬ್ಲಾಕ್ ಮಾಡಿ ಜೂಟ್ ಆಗಿದ್ದಾಳೆ. ಈ ಪ್ರಕರಣ ದಾಖಲಿಸಿಕೊಂಡು ಚಿಕ್ಕಬಳ್ಳಾಪುರ ಸೈಬರ್‌ಠಾಣೆ ಪೊಲೀಸರು, ಮದನಾರಿ ಕೋಮಲರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈಕೆ ಮದುವೆ ಮಾಡಿಕೊಳ್ಳುವುದಾಗಿ ಆಮಿಷವೊಡ್ಡಿ ಪುರುಷರನ್ನು ವಂಚಿಸುವುದನ್ನೇ ಕಾಯಕ ಮಾಡಿಕೊಂಡಿದ್ದಾಳೆ ಎಂಬುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಮದುವೆ ಆಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ: ಶಿವಮೊಗ್ಗ ಬಿಜೆಪಿ ಮುಖಂಡ ಅರೆಸ್ಟ್

ಉದ್ಯಮಿ ಸೇರಿ ಹಲವಾರು ಜನರಿಗೆ ವಂಚಿಸಿದ್ದ ಕೋಮಲ

ಇತ್ತೀಚೆಗೆ ಬೆಂಗಳೂರಿನ ತಾವರೆಕೆರೆ ಮೂಲದ ಮಧುಸೂಧನ್ ಎನ್ನುವವರನ್ನು ಮದುವೆಯಾಗಿ ಆತನಿಂದ ಹತ್ತು ಲಕ್ಷ ರೂಪಾಯಿ ಹಣ, ಚಿನ್ನಾಭರಣ ಲಪಟಾಯಿಸಿದ್ದಾಳೆ. ಬೆಂಗಳೂರಿನ ಉದ್ಯಮಿ ನಾಗರಾಜ್, ಕುಂದಾಪುರದ ರಾಘವೇಂದ್ರ, ಗೌರಿಬಿದನೂರಿನ ರಾಘವೇಂದ್ರ ಎಲ್ಲರಿಗೂ ಪಂಗನಾಮ ಹಾಕಿದ್ದಾಳೆ. ಇನ್ನು ಇಬ್ಬರಿಗೆ ಮದುವೆ ಮಾಡಿಕೊಳ್ಳುವುದಾಗಿ ಆಮಿಷವೊಡ್ಡಿದ್ದಳು. ಅಷ್ಟರಲ್ಲಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:52 pm, Sat, 31 August 24

ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!