AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ನಾಟಿ ಔಷಧಿ ಸೇವನೆ: ಮಗ ಸಾವು, ತಂದೆ-ಮಗಳು ಬಚಾವ್!

ಆಲೋಪತಿ ಔಷಧಿಯಿಂದ ಸ್ಕೀನ್ ಅಲರ್ಜಿ ಗುಣಮುಖವಾಗಲಿಲ್ಲವೆಂದು ಯಾರೋ ಹೇಳಿದ ಮಾತು ನಂಬಿದ ಕುಟುಂಬವೊಂದು, ನಾಟಿವೈದ್ಯನ ಬಳಿ ಚಿಕಿತ್ಸೆಗೆ ಹೋಗಿದ್ದರು. ಬಳಿಕ ನಾಟಿ ವೈದ್ಯ ನೀಡಿದ ಔಷಧಿ ಸೇವಿಸಿ, ತಂದೆ, ಮಗಳು ಹಾಗೂ ಮಗ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಫಲಾಕಾರಿಯಾಗದೆ ನಾಲ್ಕು ವರ್ಷದ ಬಾಲಕ ಮೃತಪಟ್ಟಿದ್ದಾನೆ, ಬಾಲಕನ ಸಾವಿಗೆ ನಾಟಿ ಔಷಧಿಯೆ ಕಾರಣ ಎನ್ನುವ ಆರೋಪ ಕೇಳಿ ಬಂದಿದೆ. 

ಚಿಕ್ಕಬಳ್ಳಾಪುರ: ನಾಟಿ ಔಷಧಿ ಸೇವನೆ: ಮಗ ಸಾವು, ತಂದೆ-ಮಗಳು ಬಚಾವ್!
ಮೃತ ಬಾಲಕ, ಪೋಷಕರ ಆಕ್ರಂದನ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 15, 2023 | 3:49 PM

ಚಿಕ್ಕಬಳ್ಳಾಪುರ, ಅ.15: ತಾಲೂಕಿನ ನಲ್ಲಗುಟ್ಟಪಾಳ್ಯಾ ಗ್ರಾಮದ ಶ್ರೀನಿವಾಸ್ ಹಾಗೂ ಶಶಿಕಲಾ ದಂಪತಿಗೆ ಒಂದು ಗಂಡು, ಒಂದು ಹೆಣ್ಣು ಮಕ್ಕಳಿದ್ದಾರೆ. ಕುಟುಂಬದಲ್ಲಿ ಅನುವಂಶಿಯ ಎಂಬಂತೆ ತಂದೆ-ತಾಯಿ ಹಾಗೂ ಇಬ್ಬರು ಮಕ್ಕಳಿಗೆ ಸ್ಕೀನ್ ಅಲರ್ಜಿಯಾಗಿದೆ. ನಾಟಿ ಔಷಧಿ(Graft Medicine)ಯಿಂದ ಗುಣಮುಖ ಆಗುತ್ತೆ ಎನ್ನುವ ನಂಬಿಕೆಯಿಂದ ಚಿಕ್ಕಬಳ್ಳಾಪುರ (Chikkaballapura)ದ ಬೋಯಿನಹಳ್ಳಿ ಗ್ರಾಮದ ನಾಟಿ ವೈದ್ಯ ಸತೀಶ ಎನ್ನುವವರ ಬಳಿ ಹೋಗಿ ಔಷಧಿ ತಂದಿದ್ದಾರೆ. ಮೂರು ದಿನಗಳ ಕಾಲ ಔಷಧಿಯನ್ನು ತಂದೆ-ಮಗ ಹಾಗೂ ಮಗಳು ಕುಡಿದಿದ್ದಾರೆ. ನಂತರ ತಲೆ ಸುತ್ತು, ಮೈ ನಡುಕದಿಂದ ಅಸ್ವಸ್ಥರಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಬಂದಿದ್ದಾರೆ. ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಾಲ್ಕು ವರ್ಷದ ಬಾಲಕ ವೇಧೇಶ ಮೃತಪಟ್ಟಿದ್ದು, ತಂದೆ ಹಾಗೂ ಮಗಳು ಗುಣಮುಖರಾಗಿದ್ದಾರೆ.

ಹೌದು, ನಾಟಿ ಔಷಧಿಯಿಂದ ಆದ ಪರಿಣಾಮವನ್ನು ಕೂಡಲೇ ವೈದ್ಯ ಸತೀಶ್​ಗೆ ತಿಳಿಸಿದ್ದಾರೆ. ಆದ್ರೆ, ಅವಿವೇಕಿ ಸತೀಶ್​ ಆಸ್ಪತ್ರೆಗೆ ಹೋಗಬೇಡಿ ಕೆಲವು ಸಮಯದ ಬಳಿಕ ಸರಿಹೊಗುತ್ತೆ ಎಂದು ಆಸ್ಪತ್ರೆಗೆ ಹೋಗುವುದನ್ನು ತಡೆದಿದ್ದಾನಂತೆ. ಆದ್ರೆ, ನೋವು ತಡೆಯಲಾಗದೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಬಂದಿದ್ದಾರೆ. ತಕ್ಷಣ ವೈದ್ಯರು ತಂದೆ-ಮಗಳಿಗೆ ವಾಂತಿ ಮಾಡಿಸಿ ಪ್ರಾಣ ರಕ್ಷಣೆ ಮಾಡಲಾಗಿದೆ. ಆದ್ರೆ, ಬಾಲಕ ಮೃತಪಟ್ಟಿದ್ದಾನೆ. ಈಗ ನಾಟಿ ಔಷಧಿ ಸೇವಿಸಿದ್ದಕ್ಕೆ ಬಾಲಕನ ತಾಯಿ ಪಶ್ಚಾತ್ಥಾಪ ಪಡುತ್ತಿದ್ದು, ತಮಗೆ ಆದ ಗತಿ ಇನ್ಯಾರಿಗೂ ಆಗಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಮಕ್ಕಳಿಗೆ ದೊಣ್ಣೆಯಿಂದ ಹಲ್ಲೆ; ಪುತ್ರಿ ಸಾವು, ಪುತ್ರನಿಗೆ ಗಂಭೀರ ಗಾಯ, ತಾಯಿ ನೇಣಿಗೆ ಶರಣಾದ

ಇನ್ನು ನೊಂದ ಕುಟುಂಬದವರು ಈ ಘಟನೆ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಗೆ ದೂರು ನೀಡಿದೆ. ಪೊಲೀಸರು ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಿದ್ದಾರೆ. ಇತ್ತ ಸೂಕ್ತ ಉತ್ತರ ನೀಡಬೇಕಿರುವ ನಾಟಿ ವೈದ್ಯ ಸತೀಶ್​ ಅವರು ಫೋನ್​ ಸ್ವೀಚ್​ ಆಫ್​ ಮಾಡಿಕೊಂಡು ತಲೆ ಮರೆಸಿಕೊಂಡಿದ್ದಾನೆ. ಆದರೆ, ಮಗನನ್ನು ಕಳೆದುಕೊಂಡ ಪೋಷಕರ ದುಖಃ ಹೇಳತೀರದಾಗಿದೆ. ಕೂಡಲೇ ಪೊಲೀಸರು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ