AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ನಕಲಿ ಚಿನ್ನ, ನಕಲಿ ರೈಡ್​ಗೆ ಅಸಲಿ ಪೊಲೀಸರೇ ಸಾಥ್ ನೀಡಿರುವ ಶಂಕೆ

ಜೆಸಿಬಿಯಿಂದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಬಂಗಾರ ಸಿಕ್ಕಿದೆ, ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿ ಹಣ ತೆಗೆದುಕೊಂಡ ಬಂದ ಆಸಾಮಿಗಳ ಮೇಲೆ ನಕಲಿ ಪೊಲೀಸ್ ದಾಳಿ ಮಾಡಿ, 4 ಲಕ್ಷ ರೂಪಾಯಿ ಹಣ ಕಿತ್ತುಕೊಂಡು ಪರಾರಿಯಾದ ಘಟನೆ ಚಿಕ್ಕಬಳ್ಳಾಪುರ ನಡೆದಿದ್ದು, ನಕಲಿ ಪೊಲೀಸ್ ದಾಳಿಯ ಹಿಂದೆ ಅಸಲಿ ಪೊಲೀಸರ ಕೈವಾಡದ ಶಂಕೆ ವ್ಯಕ್ತವಾಗಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಚಿಕ್ಕಬಳ್ಳಾಪುರ: ನಕಲಿ ಚಿನ್ನ, ನಕಲಿ ರೈಡ್​ಗೆ ಅಸಲಿ ಪೊಲೀಸರೇ ಸಾಥ್ ನೀಡಿರುವ ಶಂಕೆ
ಚಿಕ್ಕಬಳ್ಳಾಪುರ: ನಕಲಿ ಚಿನ್ನ, ನಕಲಿ ರೈಡ್​ಗೆ ಅಸಲಿ ಪೊಲೀಸರೇ ಸಾಥ್ ನೀಡಿರುವ ಶಂಕೆ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Sep 28, 2024 | 9:11 PM

Share

ಚಿಕ್ಕಬಳ್ಳಾಪುರ, ಸೆ.28: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮೂಲದ ನವೀನ್‌ಪ್ರದೀಪ್ ಎನ್ನುವವರನ್ನು ನಂಬಿಸಿದ ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆಯ ಬಾಗೇಪಲ್ಲಿ ಮೂಲದ ಕಿರಾತಕರ ತಂಡವೊಂದು, ಜೆಸಿಬಿಯಿಂದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಬಂಗಾರ ಸಿಕ್ಕಿದೆ, ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿ ನವೀನ್‌ಪ್ರದೀಪ್ ಹಾಗೂ ತಂಡವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ರಂಗನಹಳ್ಳಿ ಕ್ರಾಸ್ ಬಳಿ ಕರೆಸಿದ್ದಾರೆ. ಅಲ್ಲಿಗೆ ಬಂದ ಶ್ಯಾಮ್, ರಾಜು ಹಾಗೂ ಮತ್ತೊಬ್ಬರಿಗೆ ಅಸಲಿ ಬಂಗಾರದ ಶ್ಯಾಂಪಲ್ ತೋರಿಸಿ, ನಂತರ ನಕಲಿ ಚಿನ್ನದ ಚೀಲಕೊಟ್ಟು ಪರೀಕ್ಷಿಸಿಕೊಳ್ಳುವಂತೆ ಹೇಳಿದ್ದಾರೆ. ಅಷ್ಟೊತ್ತಿಗೆ ನಕಲಿ ಪೊಲೀಸ್ ರೈಡ್ ಆಗಿದೆ.

ಪೊಲೀಸರಿಂದ ನಕಲಿ ರೈಡ್

ಇನ್ನು ನವೀನ್‌ಪ್ರದೀಪ್ ಹಾಗೂ ತಂಡ ಚಿನ್ನದ ಚೀಲವನ್ನು ತೆಗೆದುಕೊಂಡು ಪರೀಕ್ಷಿಸುತ್ತಿದ್ದಾಗ ಅಲ್ಲಿಗೆ ಬಂದ ಇಬ್ಬರು ವ್ಯಕ್ತಿಗಳು ತಾವುಗಳು ಪೊಲೀಸ್ ಎಂದು ಪರಿಚಯಿಸಿಕೊಂಡು ಅವರ ಮೇಲೆ ದಾಳಿ ಮಾಡಿ, ನವೀನ್‌ಪ್ರದೀಪ್ ಬಳಿ ಇದ್ದ 4 ಲಕ್ಷ ರೂಪಾಯಿ ಹಣವನ್ನು ಕಿತ್ತುಕೊಂಡು ಎಸ್ಕೇಪ್ ಆಗಿದ್ದಾರೆ.

ಇದನ್ನೂ ಓದಿ:ಜೆಡಿಎಸ್ ಮುಖಂಡನಿಂದ ಬಾಗಲಕೋಟೆ ರಾಮಾರೂಢ ಮಠ ಸ್ವಾಮೀಜಿಗೆ 1 ಕೋಟಿ ರೂ. ವಂಚನೆ

ಪ್ರಕರಣದ ಹಿಂದೆ ಅಸಲಿ ಪೊಲೀಸರ ಕೈವಾಡದ ಶಂಕೆ

ಇನ್ನು ದೂರುದಾರ ನವೀನ್‌ಪ್ರದೀಪ್ ಬಳಿ ಹಣ ಕಿತ್ತುಕೊಂಡು ಎಸ್ಕೇಪ್ ಆದವರನ್ನು ಬಿಟ್ಟು, ಹಣ ತೆಗೆದುಕೊಂಡು ಬಂದವರನ್ನು ಠಾಣೆಗೆ ಕರೆತಂದ ಚೇಳೂರು ಠಾಣೆ ಪೊಲೀಸರು, ಅವರಿಂದ ದೂರು ತೆಗೆದುಕೊಂಡಿದ್ದಾರೆ. ಆದರೆ, ನಕಲಿ ಪೊಲೀಸ್ ರೈಡ್ ಹಿಂದೆ ಮೂವರು ಅಸಲಿ ಪೊಲೀಸರ ಕೈವಾಡದ ಶಂಕೆ ವ್ಯಕ್ತವಾಗಿದೆ. ಚೇಳೂರು ಹಾಗೂ ಬಾಗೇಪಲ್ಲಿ ಠಾಣೆಗೆ ಸೇರಿದ ಮೂವರು ಪೊಲೀಸ್ ಸಿಬ್ಬಂದಿಗಳೇ ಆರೋಪಿಗಳ ಜೊತೆ ಶಾಮೀಲಾಗಿ ಕೃತ್ಯ ನಡೆಸಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಇದರಿಂದ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತಾರ ಕಾದು ನೋಡಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:09 pm, Sat, 28 September 24

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು